ಕೆನಡಾ | ಸಿಖ್ ಸಮುದಾಯದಿಂದ ಭಾರತದ ವಿರುದ್ಧ ಪ್ರತಿಭಟನೆ; ಮೋದಿ ಭಾವಚಿತ್ರ ತುಳಿದು ಆಕ್ರೋಶ

Date:

ಪ್ರಮುಖ ಸಿಖ್ ಕಾರ್ಯಕರ್ತನ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂದು ಕೆನಡಾ ಪ್ರಧಾನಿ ಹೇಳಿದ ಒಂದು ವಾರದ ನಂತರ ನೂರಾರು ಸಿಖ್ ಪ್ರತಿಭಟನಾಕಾರರು ಸೋಮವಾರ (ಸೆ.25) ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಹೊರಗೆ ರ‍್ಯಾಲಿ ನಡೆಸಿದರು. ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರಗಳನ್ನು ತುಳಿದು ಭಾರತದ ಧ್ವಜಗಳನ್ನು ಸುಟ್ಟುಹಾಕಿದರು.

“ನಾವು ಪಂಜಾಬ್‌ಗೆ ತೆರಳಿ ಸುರಕ್ಷತೆಯಿಂದ ಇರಲು ಸಾಧ್ಯವಿಲ್ಲ. ನಾವು ಕೆನಡಾದಲ್ಲಿಯೂ ಸುರಕ್ಷಿತವಾಗಿಲ್ಲ” ಎಂದು ಟೊರೊಂಟೊದಲ್ಲಿ ಸಿಖ್ ಸಮುದಾಯದ ಸದಸ್ಯ ಜೋ ಹೋಥಾ ಜೂನ್‌ನಲ್ಲಿ ವ್ಯಾಂಕೋವರ್ ಬಳಿ ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯನ್ನು ಉಲ್ಲೇಖಿಸಿ ಹೇಳಿದರು.

ಕಳೆದ ಸೋಮವಾರ, ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಸಂಸತ್ತಿನಲ್ಲಿ, ಸಿಖ್ ನಾಯಕನ ಹತ್ಯೆಯಲ್ಲಿ ನವದೆಹಲಿ ಬಹುಶಃ ಭಾಗಿಯಾಗಿರುವ ಸಾಧ್ಯತೆಯಿದೆ ಎಂದು ಹೇಳಿದರು. ಇದು ಎರಡು ರಾಷ್ಟ್ರಗಳ ನಡುವೆ ದೊಡ್ಡ ರಾಜತಾಂತ್ರಿಕ ಬಿಕ್ಕಟ್ಟನ್ನು ಉಂಟುಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ನಮ್ಮ ಪ್ರಧಾನಿ ಸಂಸತ್ತಿನಲ್ಲಿ ಎಲ್ಲವನ್ನೂ ಹೇಳುತ್ತಾರೆ. ಆದ್ದರಿಂದ ಇದಕ್ಕೆ ಕ್ಷಮೆಯಿಲ್ಲ” ಎಂದು ಇನ್ನೊಬ್ಬ ಸಿಖ್ ಪ್ರತಿಭಟನಾಕಾರ ಟೊರೊಂಟೊದ ಹರ್ಪರ್ ಗೋಸಲ್ ಹೇಳಿದರು.

ಈ ಸುದ್ದಿ ಓದಿದ್ದೀರಾ? 70 ನ್ಯಾಯಮೂರ್ತಿಗಳ ನೇಮಕ ಬಾಕಿಯುಳಿಸಿಕೊಂಡಿರುವ ಕೇಂದ್ರ: ಸುಪ್ರೀಂ ಕೋರ್ಟ್ ಆಕ್ರೋಶ

“ಭಾರತೀಯರು ಭಯೋತ್ಪಾದಕರು, ಅವರು ವ್ಯಾಂಕೋವರ್‌ನಲ್ಲಿ ನಮ್ಮ ಸಹೋದರನನ್ನು ಕೊಂದರು. ಅದಕ್ಕಾಗಿಯೇ ನಾವು ಇಲ್ಲಿ ಪ್ರತಿಭಟಿಸುತ್ತಿದ್ದೇವೆ” ಎಂದು ಭಾರತೀಯ ದೂತವಾಸದ ಹೊರಗೆ ಪ್ರತಿಭಟನಾಕಾರರು ಹೇಳಿದರು.

ಇತರ ಪ್ರತಿಭಟನಾಕಾರರಂತೆ, ಅವರು ಭಾರತದ ಪಂಜಾಬ್‌ನಲ್ಲಿ ಪ್ರತ್ಯೇಕ ಖಲಿಸ್ತಾನ ರಾಜ್ಯ ರಚಿಸಲು ಆಶಿಸುವ ಹಳದಿ ಧ್ವಜವನ್ನು ಹೊತ್ತಿದ್ದರು.

ಕೇಂದ್ರ ಸರ್ಕಾರವನ್ನು ಖಂಡಿಸಲು ನೂರಾರು ಜನರು ಟೊರಾಂಟೊದಲ್ಲಿ ಮಾತ್ರವಲ್ಲದೆ ಒಟ್ಟಾವಾ ಮತ್ತು ವ್ಯಾಂಕೋವರ್‌ನಲ್ಲಿ ಸೇರಿದ್ದರು.

ಕೆನಡಾವು ಭಾರತದ ಹೊರಗೆ ವಿಶ್ವದ ಅತಿದೊಡ್ಡ ಸಿಖ್ ಸಮುದಾಯಕ್ಕೆ ನೆಲೆಯಾಗಿದೆ. 770,000 ಕೆನಡಿಯನ್ನರು ಸಿಖ್ ಧರ್ಮವನ್ನು ಪ್ರತಿಪಾದಿಸುತ್ತಾರೆ. ಅವರು ದೇಶದ ಜನಸಂಖ್ಯೆಯ 2 ರಷ್ಟಿದ್ದಾರೆ.

ಭಾರತ ಸರ್ಕಾರವು ಕೆನಡಾದ ಆರೋಪಗಳನ್ನು “ಅಸಂಬದ್ಧ” ಎಂದು ಕರೆದಿದೆ ಮತ್ತು ಅವುಗಳನ್ನು ಕಟುವಾಗಿ ನಿರಾಕರಿಸಿದೆ.

ಭಾರತೀಯ ವಿರೋಧಿ ಚಟುವಟಿಕೆಗಳ ಹೆಚ್ಚಳದಿಂದಾಗಿ ಕೆನಡಾದ ಕೆಲವು ಪ್ರದೇಶಗಳಿಗೆ ಪ್ರಯಾಣಿಸದಂತೆ ತನ್ನ ಪ್ರಜೆಗಳಿಗೆ ಭಾರತವು ಸಲಹೆ ನೀಡಿತು ಮತ್ತು ಕೆನಡಾದಲ್ಲಿ ವೀಸಾ ಅರ್ಜಿಗಳನ್ನು ಪ್ರಕ್ರಿಯೆಗೊಳಿಸುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ.

ಅಂದಿನಿಂದ, ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಹಳಸಿವೆ. ರಾಜತಾಂತ್ರಿಕರನ್ನು ಪರಸ್ಪರ ಹೊರಹಾಕಲಾಗಿದೆ. ಆದರೆ ಕೆನಡಾ ಪ್ರಧಾನಿ ಟ್ರೂಡೊ ನಿಜ್ಜರ್ ಹತ್ಯೆಯ ತನಿಖೆಯಲ್ಲಿ ಸಹಕರಿಸುವಂತೆ ಭಾರತೀಯ ಅಧಿಕಾರಿಗಳಿಗೆ ಪದೇ ಪದೇ ಕರೆ ನೀಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...