ಕೇರಳ | ಸಾರ್ವಜನಿಕ ಸ್ಥಳದಲ್ಲೇ ಪತ್ನಿಯನ್ನು ವಾಹನ ಸಮೇತ ಪೆಟ್ರೋಲ್ ಹಾಕಿ ಸುಟ್ಟು ಕೊಂದ ಪತಿ!

Date:

ಪತಿಯೊಬ್ಬ ಸಾರ್ವಜನಿಕ ಸ್ಥಳದಲ್ಲೇ ಪತ್ನಿಯನ್ನು ವಾಹನ ಸಮೇತ ಪೆಟ್ರೋಲ್ ಹಾಕಿ ಸುಟ್ಟು ಕೊಂದ ಭೀಕರ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕೊಲ್ಲಂ ಜಿಲ್ಲೆಯ ಚೆಮ್ಮಾಮುಖ್ ಎಂಬಲ್ಲಿ ಪತಿರಾಯನೋರ್ವ ತನ್ನ ಪತ್ನಿಯನ್ನು ಪೆಟ್ರೋಲ್ ಹಾಕಿ ಕೊಂದಿದ್ದು, ಜನರು ಭಯಭೀತಗೊಳ್ಳುವಂತೆ ಮಾಡಿದ್ದಾನೆ.

ಪತ್ನಿ ಅನಿಲ ಎಂಬಾಕೆಯನ್ನು ಪತಿ ಪದ್ಮರಾಜ್ ವಾಹನ ಸಮೇತ ಪೆಟ್ರೋಲ್ ಸುರಿದು ಕೊಂದಿದ್ದು, ನಂತರ ಹತ್ತಿರದಲ್ಲೇ ಇದ್ದ ಪೋಲಿಸ್ ಠಾಣೆಗೆ ತೆರಳಿ ಶರಣಾಗತನಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ರಾತ್ರಿ ಸುಮಾರು ರಾತ್ರಿ ಒಂಬತ್ತು ಗಂಟೆಯ ಸುಮಾರಿಗೆ ಪತ್ನಿಯ ಬೇಕರಿ ಉದ್ಯಮ ವ್ಯವಹಾರ ಹಾಗೂ ವಿವಾಹೇತರ ಸಂಬಂಧದ ಬಗ್ಗೆ ಶಂಕೆಗೊಂಡು ಈ ಕೃತ್ಯ ನಡೆಸಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಘಟನೆಯ ಸಂದರ್ಭದಲ್ಲಿ ಪತ್ನಿ ಅನಿಲ ಚಲಾಯಿಸುತ್ತಿದ್ದ ವಾಹನದಲ್ಲಿ ಮತ್ತೊಬ್ಬ ವ್ಯಕ್ತಿಯೂ ಇದ್ದು, ಆತನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಂಕಿ ಹಚ್ಚಿ ಕೊಂದ ಘಟನೆಯ ಹಿಂದೆ ಉದ್ಯಮ ಆರಂಭಿಸಿದ ವಿಚಾರವೇ ಕಾರಣ ಎಂಬ ಮಾಹಿತಿ ಹೊರಬಿದ್ದಿದೆ. ಸ್ನೇಹಿತ ಹನೀಶ್ ಎಂಬಾತನೊಂದಿಗೆ ಬೇಕರಿ ಆರಂಭಿಸಿದ್ದೇ ಅನಿಲಾಳ ಕೊಲೆಗೆ ಪ್ರಮುಖ ಕಾರಣ ಎಂದು ಸ್ಥಳೀಯ ನಿವಾಸಿಯೋರ್ವರು ಮಾಧ್ಯಮಗಳಿಗೆ ಬಹಿರಂಗಪಡಿಸಿದ್ದಾರೆ.

ಆರೋಪಿ ಪದ್ಮರಾಜ್, ತನ್ನ ಪತ್ನಿಯೊಂದಿಗೆ ಹನೀಶ್ ಆರಂಭಿಸಿದ್ದ ಬೇಕರಿ ಉದ್ಯಮದ ಪಾರ್ಟ್ನರ್ ಶಿಪ್ ಬಿಟ್ಟುಕೊಡುವಂತೆ ಒತ್ತಾಯಿಸಿದ್ದ. ಆದರೆ ಬೇಕರಿ ಆರಂಭಿಸಲು ವ್ಯಯಿಸಿದ್ದ 1.49 ಲಕ್ಷ ರೂಪಾಯಿ ವಾಪಸ್ ನೀಡಿದರೆ ತೊರೆಯುತ್ತೇನೆ ಎಂದು ಹನೀಶ್ ತಿಳಿಸಿದ್ದ. ಇದಕ್ಕೆ ಪ್ರತಿಕ್ರಿಯಿಸಿದ್ದ ಆರೋಪಿ ಪದ್ಮರಾಜನ್, ಡಿ. 10ರಂದು ಹಣ ನೀಡುವುದಾಗಿ ಭರವಸೆ ನೀಡಿದ್ದ ಎಂದು ತಿಳಿದು ಬಂದಿದೆ. ಇದಾದ ಬಳಿಕ ಪದ್ಮರಾಜ್, ಇಬ್ಬರನ್ನೂ ಕೊಲ್ಲಲು ಯತ್ನಿಸಿದ್ದಾನೆ ಎಂದು ಸ್ಥಳೀಯ ನಿವಾಸಿ ಮಾಹಿತಿ ನೀಡಿದ್ದಾನೆ.

ಸದ್ಯ ಆರೋಪಿ ಪದ್ಮರಾಜನ್ ಶರಣಾಗತನಾದ್ದರಿಂದ ಆತನನ್ನು ಪೊಲೀಸರು ಬಂಧಿಸಿದ್ದು, ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...