ಮಾರಕವಾದ ‘ಮಂದಹಾಸ’ ಶಸ್ತ್ರಚಿಕಿತ್ಸೆ: ಹಸೆಮಣೆ ಏರಬೇಕಾದ ಮದುಮಗ ಸಾವು

Date:

ನಗು ಹೆಚ್ಚಿಸುವ(ಮಂದಹಾಸ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವಕನೊಬ್ಬ ಅರಿವಳಿಕೆ ವಿಪರೀತವಾದ ಕಾರಣ ಮೃತಪಟ್ಟ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ.

28 ವರ್ಷದ ಲಕ್ಷ್ಮಿ ನಾರಾಯಣ ವಿನ್‌ಜಂ ಪ್ರಾಣ ಕಳೆದುಕೊಂಡ ಯುವಕ. ಈತ ತನ್ನ ಮುಂಬರುವ ಮದುವೆ ತಯಾರಿಗಾಗಿ ಹೈದರಾಬಾದ್‌ನ ಜುಬ್ಲಿ ಹಿಲ್ಸ್‌ ಠಾಣೆಯ ಎಫ್‌ಎಂಎಸ್‌ ಇಂಟರ್‌ನ್ಯಾಷನಲ್‌ ಡೆಂಟಲ್‌ ಕ್ಲಿನಿಕ್‌ ಫೆ.16ರಂದು ಚಿಕಿತ್ಸೆಗೆ ಒಳಗಾಗಿದ್ದ.

ನಗು ವೃದ್ದಿಸುವ ಶಸ್ತ್ರಚಿಕಿತ್ಸೆಗೂ ಮುನ್ನ ಅರಿವಳಿಕೆ ನೀಡಲಾಗಿತ್ತು. ಅರಿವಳಿಕೆಯಿಂದಾಗಿ ಪ್ರಜ್ಞಾಹೀನ ಸ್ಥಿತಿ ತಲುಪಿದ್ದ. ದುರಂತವೆಂದರೆ ಪ್ರಜ್ಞಾಹೀನಗೊಂಡವನು ಮತ್ತೆ ಎಚ್ಚರಗೊಳ್ಳಲಿಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ಅಪೊಲೊ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿನ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರಿವಳಿಕೆ ಹೆಚ್ಚಾಗಿರುವ ಕಾರಣ ತನ್ನ ಪುತ್ರ ಮೃತಪಟ್ಟಿದ್ದಾನೆ ಎಂದು ಲಕ್ಷ್ಮಿ ನಾರಾಯಣ ವಿನ್‌ಜಂ ತಂದೆ ರಾಮುಲು ವಿನ್‌ಜಂ ಆಸ್ಪತ್ರೆ ವಿರುದ್ಧ ಆರೋಪಿಸಿದ್ದಾರೆ. ”ನಾವು ಹತ್ತಿರದ ಆಸ್ಪತ್ರೆಗೆ ಕರೆದೊಯ್ದೆವು. ಅಲ್ಲಿನ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು” ಎಂದು ರಾಮುಲು ವಿನ್‌ಜಂ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರಕ್ಷಕ ಇಲಾಖೆ ಯಾತಕ್ಕಾಗಿ, ಪೊಲೀಸರು ಇರುವುದು ಯಾರ ರಕ್ಷಣೆಗಾಗಿ?

”ಅವನು ಆರೋಗ್ಯವಂತನಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗುವುದರ ಬಗ್ಗೆ ತಮ್ಮ ಪುತ್ರ ತನಗೆ ತಿಳಿಸಿರಲಿಲ್ಲ. ಪುತ್ರನ ಸಾವಿಗೆ ವೈದ್ಯರೆ ಕಾರಣ” ಎಂದು ರಾಮುಲು ವಿನ್‌ಜಂ ತಿಳಿಸಿದ್ದಾರೆ.

ಒಂದು ವಾರದ ಹಿಂದಷ್ಟೆ ನಿಶ್ಚಿತಾರ್ಥಕ್ಕೆ ಒಳಗಾಗಿದ್ದ ಲಕ್ಷ್ಮಿನಾರಾಯಣ ಮುಂದಿನ ತಿಂಗಳು ಮದುವೆಯಾಗಬೇಕಿತ್ತು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಚಿಕಿತ್ಸೆ ನಿರ್ಲಕ್ಷ್ಯಕ್ಕಾಗಿ ಐಪಿಸಿ ಸೆಕ್ಷನ್ 304(ಎ)(ಕೊಲೆಯಲ್ಲದ ಹತ್ಯೆಯ ತಪ್ಪಿತಸ್ಥ) ಅಡಿ ಮೃತ ಯುವಕನ ತಂದೆ ದೂರು ದಾಖಲಿಸಿದ್ದಾರೆ. ಆಸ್ಪತ್ರೆಯ ದಾಖಲೆಗಳು ಹಾಗೂ ಸಿಸಿ ಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ತಾತ್ಕಾಲಿಕವಾಗಿ ಮುಖದಲ್ಲಿ ಅಂದವನ್ನು ಹೆಚ್ಚಿಸುವುದಕ್ಕಾಗಿ ಹಾಗೂ ಸದಾ ನಗು ತರಿಸುವುದಕ್ಕಾಗಿ ನಗು ವೃದ್ಧಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅಂಥದ್ದೇ ನಗುವಿಗಾಗಿ ಶಸ್ತ್ರ ಚಿಕಿತ್ಸೆಗೊಳಗಾದ ಯುವಕ, ಅರಿವಳಿಕೆಯಿಂದಾಗಿ ತನ್ನ ಪ್ರಾಣವನ್ನೇ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಬಂದದ್ದು ದುರಂತ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...