ಹೈದರಾಬಾದ್ | ಫೋನ್ ಕದ್ದಾಲಿಕೆ, ಡೇಟಾ ನಾಶ ಪ್ರಕರಣ; ಮತ್ತಿಬ್ಬರು ಪೊಲೀಸರ ಬಂಧನ

Date:

ಫೋನ್ ಕದ್ದಾಲಿಕೆ ಹಾಗೂ ಕೆಲವು ಕಂಪ್ಯೂಟರ್‌ಗಳಲ್ಲಿ ಅಧಿಕೃತ ಡೇಟಾವನ್ನು ನಾಶಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಮತ್ತಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್ ಭುಜಂಗ ರಾವ್ ಬಂಧಿತ ಆರೋಪಿಗಳು. ಈ ಇಬ್ಬರೂ ಅಧಿಕಾರಿಗಳು ಈ ಹಿಂದೆ ಕ್ರಮವಾಗಿ ವಿಶೇಷ ಇಂಟೆಲಿಜೆನ್ಸ್ ಬ್ಯೂರೋ (ಎಸ್‌ಐಬಿ) ಮತ್ತು ಗುಪ್ತಚರ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕೆಲಸ ಮಾಡಿದ್ದರು.

“ಹಿಂದಿನ ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳಿಂದ ಗುಪ್ತಚರ ಮಾಹಿತಿಯನ್ನು ಅಳಿಸಿಹಾಕಿದ ಪ್ರಕರಣ ಮತ್ತು ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಅಮಾನತುಗೊಂಡು, ಬಂಧನಕ್ಕೊಳಗಾಗಿರುವ ಡಿಎಸ್‌ಪಿ ಡಿ ಪ್ರಣೀತ್ ರಾವ್ ಅವರೊಂದಿಗೆ ಈ ಇಬ್ಬರೂ ನಿಕಟ ಸಂಪರ್ಕ ಹೊಂದಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಚಾರಣೆಯ ವೇಳೆ ಇಬ್ಬರು ಪೊಲೀಸ್ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡ ಬಗ್ಗೆ ಒಪ್ಪಿಕೊಂಡಿದ್ದಾರೆ. ಖಾಸಗಿ ವ್ಯಕ್ತಿಗಳ ಮೇಲೆ ನಿಗಾ ಇಡುವ ಸಂಚು, ಫೋನ್​ ಕದ್ದಾಲಿಕೆಯಂತಹ ಸಂಚಿನಲ್ಲಿ ಭಾಗಿಯಾಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಜೊತೆಗೆ ಈಗಾಗಲೇ ಬಂಧಿತರಾಗಿರುವ ವಿಶೇಷ ತನಿಖಾ ದಳದ (ಎಸ್​ಐಬಿ) ಡಿಎಸ್​ಪಿ ಆಗಿದ್ದ ಡಿ ಪ್ರಣೀತ್ ಕುಮಾರ್ ಅಲಿಯಾಸ್ ಪ್ರಣೀತ್ ರಾವ್ ಮತ್ತು ಇತರ ಆರೋಪಿಗಳ ಜೊತೆಗೆ ಸಂಪರ್ಕ ಹೊಂದಿದ್ದಾಗಿ ತಿಳಿಸಿದ್ದಾರೆ. ಈ ಸಂಬಂಧ ಹೆಚ್ಚಿನ ವಿಚಾರಣೆ ಪ್ರಗತಿಯಲ್ಲಿದೆ” ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಣೀತ್​ರಾವ್ ಬಂಧನ: ಮಾರ್ಚ್ 10ರಂದು ಎಸ್‌ಐಬಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ನೀಡಿದ ದೂರಿನ ಆಧಾರದ ಮೇಲೆ, ಪ್ರಣೀತ್ ರಾವ್ ಮತ್ತು ಇತರರ ವಿರುದ್ಧ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕ ಸೇವಾಧಿಕಾರಿಯಿಂದ ಕ್ರಿಮಿನಲ್ ನಂಬಿಕೆ ದ್ರೋಹ, ಸಾಕ್ಷ್ಯಾಧಾರಗಳ ನಾಶ, ಕ್ರಿಮಿನಲ್ ಪಿತೂರಿ ಆರೋಪದಡಿ ದೂರು ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ತಮಿಳುನಾಡು | ʼಸ್ವಜನಪಕ್ಷಪಾತʼದ ಆರೋಪ; ಬಿಜೆಪಿ ವಿರುದ್ಧ ಉದಯನಿಧಿ ವಾಗ್ದಾಳಿ

ಫೋನ್​ ಕದ್ದಾಲಿಕೆ, ಸಾಕ್ಷ್ಯನಾಶ, ನಕಲಿ ಪ್ರೊಫೈಲ್​ ತಯಾರಿ, ರಹಸ್ಯ ಅನಧಿಕೃತ ಮತ್ತು ಕಾನೂನುಬಾಹಿರವಾಗಿ ಮೇಲ್ವಿಚಾರಣೆ ಮಾಡಿದ ಆರೋಪದಡಿ ಹಿರಿಯ ಪೊಲೀಸ್​ ಅಧಿಕಾರಿ ಪ್ರಣೀತ್ ರಾವ್ ಅವರನ್ನು ಮಾರ್ಚ್ 13ರಂದು ಬಂಧಿಸಲಾಗಿದೆ. ಬಳಿಕ ಗಂಭೀರ ಆರೋಪ ಎದುರಿಸುತ್ತಿರುವ ರಾವ್ ಅವರನ್ನು ತೆಲಂಗಾಣ ಸರ್ಕಾರ ಅಮಾನತುಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...