ಅಮೆರಿಕದಲ್ಲಿ ಊಟಕ್ಕಾಗಿ ಪರದಾಡುತ್ತಿರುವ ಭಾರತೀಯ ಮಹಿಳೆ; ಕರೆತರುವಂತೆ ತಾಯಿ ಮನವಿ

Date:

ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್‌ ಮಹಿಳೆಯೊಬ್ಬರು ಚಿಕಾಗೋದ ರಸ್ತೆಗಳಲ್ಲಿ ಊಟಕ್ಕಾಗಿ ಪರದಾಡುತ್ತಿದ್ದಾರೆ. ತನ್ನ ಮಗಳ ಬಳಿಯಿದ್ದ ಹಣ ಮತ್ತು ಬೆಲೆಬಾಳುವ ವಸ್ತುಗಳು ಕಳ್ಳತನ ಮಾಡಲಾಗಿದ್ದು, ಆಕೆಯನ್ನು ಮರಳಿ ಭಾರತಕ್ಕೆ ಕರೆದುಕೊಂಡು ಬರುವಂತೆ ಆಕೆಯ ತಾಯಿ ವಿದೇಶಾಂಗ ಸಚಿವ ಎಸ್​​ ಜೈಶಂಕರ್​ ಅವರಿಗೆ ಪತ್ರ ಬರೆದಿದ್ದಾರೆ.

35 ವರ್ಷದ ಸೈಯದಾ ಲುಲು ಮಿನ್ಹಾಜ್ ಜೈದಿ ಅವರ ತಾಯಿ ಹೈದರಾಬಾದ್‌ ನಗರದ ಸೈಯದಾ ವಹಾಜ್ ಫಾತಿಮಾ ಅವರು ವಿದೇಶಾಂಗ ಸಚಿವರಿಗೆ ಬರೆದಿರುವ ಪತ್ರದಲ್ಲಿ, “ನನ್ನ ಮಗಳು ಡೆಟ್ರಾಯಿಟ್‌ನ ಟ್ರೈನ್ ವಿಶ್ವವಿದ್ಯಾಲಯದಲ್ಲಿ ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು 2022 ಆಗಸ್ಟ್‌ನಲ್ಲಿ ಅಮೆರಿಕಕ್ಕೆ ಹೋಗಿದ್ದಳು. ಆಕೆಯ ಬಳಿಯಿದ್ದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಕಳೆದ ಎರಡು ತಿಂಗಳನಿಂದ ಅವಳು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ನನ್ನ ಮಗಳು ಊಟಕ್ಕೆ ಹಣವಿಲ್ಲದೆ ಹಸಿವಿನಿಂದ ಬಳಲುತ್ತಿದ್ದಾಳೆ. ಆಕೆ ಖಿನ್ನತೆಗೆ ಒಳಗಾಗಿದ್ದು, ಚಿಕಾಗೋದ ರಸ್ತೆಗಳಲ್ಲಿ ತಿರುಗಾಡುತ್ತಿದ್ದಾಳೆ. ತಾವು ಮಧ್ಯ ಪ್ರವೇಶಿಸಿ ಮರಳಿ ಭಾರತಕ್ಕೆ ಕರೆದುಕೊಂಡು ಬನ್ನಿ” ಎಂದು ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ಸೈಯದಾ ಲುಲು ಮಿನ್ಹಾಜ್ ಜೈದಿಯನ್ನು ಅಮೆರಿಕದಲ್ಲಿರುವ ಇಬ್ಬರು ಹೈದರಾಬಾದಿ ಯುವಕರು ಗುರುತಿಸಿ ಈಗ ಇರುವ ಸ್ಥಿತಿಯ ಬಗ್ಗೆ ಆಕೆಯ ಕುಟುಂಬಕ್ಕೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮಗಳು ಚಿಕಾಗೋದ ರಸ್ತೆಗಳಲ್ಲಿ ಒಂಟಿಯಾಗಿರುವ ಭಾವಚಿತ್ರವನ್ನು ನಮಗೆ ಯುವಕರು ಕಳುಹಿಸಿದ್ದಾರೆ, ಆಕೆಯ ಸ್ಥಿತಿಯನ್ನು ನೋಡಲು ಸಾಧ್ಯವಾಗುತ್ತಿಲ್ಲ​. ದಯವಿಟ್ಟು ಭಾರತದ ರಾಯಭಾರ ಕಚೇರಿಗೆ ಈ ಬಗ್ಗೆ ತಿಳಿಸಿ, ವಾಷಿಂಗ್ಟನ್ ಡಿಸಿ, ಅಮೆರಿಕದ ಚಿಕಾಗೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ತಕ್ಷಣವೇ ಅವಳನ್ನು ಸಂಪರ್ಕ ಮಾಡುವಂತೆ ಹೇಳಿ. ನನ್ನ ಮಗಳನ್ನು ಭಾರತಕ್ಕೆ ಮರಳಿ ಕರೆತರುವಂತೆ ಮಾಡಿ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಅಂಗೀಕರಿಸಿದ ಲೋಕಸಭೆ ಸ್ಪೀಕರ್

ಈ ಪತ್ರವನ್ನು ಬಿಆರ್‌ಎಸ್ ನಾಯಕ ಖಲೀಕುರ್ ರಹಮಾನ್ ಟ್ವಿಟರ್‌ನಲ್ಲಿ ಹಂಚಿಕೊಂಡ ನಂತರ ಮಾಧ್ಯಮಗಳಲ್ಲಿ ಸುದ್ದಿ ಬೆಳಕಿಗೆ ಬಂದಿದೆ. ತನ್ನ ಮಗಳನ್ನು ಮನೆಗೆ ಕರೆತರಲು ಸಹಾಯ ಮಾಡುವಂತೆ ಆಕೆ ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಚಿಕಾಗೋದಲ್ಲಿರುವ ದೂತವಾಸವನ್ನು ಕೋರಿದ್ದಾರೆ ಎಂದು ಖಲೀಕುರ್ ರಹಮಾನ್ ಹೇಳಿದ್ದಾರೆ.

ಮಹಿಳೆಯ ತಾಯಿ ಬರೆದಿರುವ ಪತ್ರ ಮತ್ತು ಆಕೆಯ ಸ್ಥಿತಿಯ ಭಾವಚಿತ್ರವನ್ನು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು, ಸಚಿವ ಎಸ್​​ ಜೈಶಂಕರ್​ ಅವರಿಗೆ ಬಿಆರ್‌ಎಸ್ ನಾಯಕ ಟ್ಯಾಗ್​​ ಕೂಡ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...