ಒಡಿಶಾ ವಿಧಾನಸಭೆ ಸೋಲಿನ ನಂತರ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ ವಿ ಕೆ ಪಾಂಡಿಯನ್

Date:

ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಕಟ್ಟಾ ಬೆಂಬಲಿಗ ಎಂದೇ ಒಡಿಶಾದಲ್ಲಿ ಪರಿಚಿತರಾಗಿದ್ದ ವಿ ಕೆ ಪಾಂಡಿಯನ್‌ ಅವರು ತಮ್ಮ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ. ಒಡಿಶಾದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಡಿ ಸೋಲು ಕಂಡ ನಂತರ ಪಾಂಡಿಯನ್‌ ಈ ನಿರ್ಧಾರ ಕೈಗೊಂಡಿದ್ದಾರೆ.

“ಈಗ ನಾನು ಪ್ರಜ್ಞಾಪೂರ್ವಕವಾಗಿ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಸಲು ನಿರ್ಧರಿಸಿದ್ದೇನೆ. ನನ್ನ ಈ ಹಾದಿಯಲ್ಲಿ ಯಾರಿಗಾದರೂ ನೋವು ಮಾಡಿದ್ದರೆ ನನ್ನನ್ನು ಕ್ಷಮಿಸಿ. ನನ್ನ ಪ್ರಚಾರದ ನಿರೂಪಣೆ ತಪ್ಪಾಗಿ ಬಿಜೆಡಿ ಪಕ್ಷ ಸೋಲು ಕಂಡಿದ್ದರೆ ನನ್ನನ್ನು ಕ್ಷಮಿಸಿ” ಎಂದು ವಿಡಿಯೋ ಸಂದೇಶದಲ್ಲಿ ವಿ ಕೆ ಪಂಡಿಯನ್‌ ತಿಳಿಸಿದ್ದಾರೆ.

ಬಿಜು ಜನತಾದಳ ಹಾಗೂ ಒಡಿಶಾದ 5ಟಿ ಯೋಜನೆಯ ಅಧ್ಯಕ್ಷರಾದ ವಿ ಕೆ ಪಾಂಡಿಯನ್,” ನಾನು ಒಂದು ಸಣ್ಣ ಹಳ್ಳಿಯ ಅತೀ ವಿನಮ್ರ ಕುಟುಂಬದಿಂದ ಬಂದಿದ್ದೇನೆ. ಚಿಕ್ಕಂದಿನಿಂದಲೂ ನನ್ನ ಕನಸು ಐಎಎಸ್ ಅಧಿಕಾರಿಯಾಗಿ ಜನರ ಸೇವೆ ಮಾಡುವುದಾಗಿತ್ತು. ಜಗನ್ನಾಥ ದೇವನಿಂದ ಇದು ಸಾಧ್ಯವಾಯಿತು. ನಾನು ಒಡಿಶಾ ಮಣ್ಣಿಗೆ ಕಾಲಿಟ್ಟಾಗ ಇಲ್ಲಿನ ಜನ ಅಪಾರ ಪ್ರೀತಿ ಹಾಗೂ ಗೌರವದಿಂದ ನನ್ನನ್ನು ಬರಮಾಡಿಕೊಂಡರು. ಜನರಿಗಾಗಿ ನಾನು ಕಷ್ಟಪಟ್ಟು ಕೆಲಸ ಮಾಡಿದ್ದೇನೆ” ಎಂದು ಸಂದೇಶದಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ

ಇದೇ ಸಂದರ್ಭದಲ್ಲಿ ನವೀನ್‌ ಪಟ್ನಾಯಕ್‌ ಬಗ್ಗೆ ಮಾತನಾಡಿರುವ ಪಾಂಡಿಯನ್‌, ನನ್ನ ಜೀವನದುದ್ದಕ್ಕೂ ಅವರಿಂದ ಅನುಭವ ಹಾಗೂ ಪಾಠಗಳನ್ನು ಕಲಿತ್ತಿದ್ದೇನೆ. ಅವರ ಅನುಗ್ರಹ, ನಾಯಕತ್ವ, ನೈತಿಕತೆ ಒಳಗೊಂಡಂತೆ ಒಡಿಶಾದ ಜನರಿಗೆ ಸದಾ ತೋರುತ್ತಿರುವ ಪ್ರೀತಿ ಎಲ್ಲವೂ ನನಗೆ ಸ್ಪೂರ್ತಿಯಾಗಿದೆ. ಅವರ ನಿರೀಕ್ಷೆಯಂತೆ ನಾನು ಕೈಗೊಂಡ ಕೆಲಸಗಳು ಒಡಿಶಾ ಹಲವು ಕ್ಷೇತ್ರಗಳು ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

ಒಡಿಶಾದ ವಿಧಾನಸಭಾ ಚುನಾವಣೆಯಲ್ಲಿ 147 ಕ್ಷೇತ್ರಗಳ ಪೈಕಿ ಬಿಜೆಪಿ 78 ಸ್ಥಾನಗಳಿಸಿ ಅಭೂತಪೂರ್ವ ಗೆಲುವು ಸಾಧಿಸಿದ್ದರೆ, ಆಡಳಿತರೂಢ ಬಿಜೆಡಿ 51 ಸ್ಥಾನ ಗಳಿಸಲಷ್ಟೆ ಸಾಧ್ಯವಾಗಿತ್ತು.

ತಮಿಳುನಾಡು ಮೂಲದವರಾದ ವಿ ಕೆ ಪಾಂಡಿಯನ್‌ ಐಎಎಸ್‌ ಅಧಿಕಾರಿಯಾಗಿ 1991ರಲ್ಲಿ ಒಡಿಶಾಗೆ ನಿಯೋಜನೆಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...