ನಾನು ಬೌದ್ಧಧರ್ಮ ಅನುಸರಿಸುತ್ತೇನೆ, ನಾನೊಬ್ಬ ಜಾತ್ಯತೀತವಾದಿ: CJI ಬಿ ಆರ್ ಗವಾಯಿ

Date:

ನಾನು ಬೌದ್ಧಧರ್ಮವನ್ನು ಅನುಸರಿಸುತ್ತೇನೆ, ಆದರೆ ನಾನು ನಿಜವಾಗಿಯೂ ಜಾತ್ಯತೀತ ವ್ಯಕ್ತಿ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ತಮ್ಮ ವಿದಾಯ ಭಾಷಣದಲ್ಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್‌ ಅವರನ್ನೊಳಗೊಂಡ ವಿಧ್ಯುಕ್ತವಾದ ಸಮಾರಂಭಿಕ ಪೀಠದಲ್ಲಿ ಸಿಜೆಐ ಗವಾಯಿ ಅವರು ಭಾವುಕರಾಗಿ ಮಾತನಾಡಿದರು.

ಬಿ.ಆರ್. ಗವಾಯಿ ಅವರು, ಇದೇ ವರ್ಷದ ಮೇ 14ರಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆರು ತಿಂಗಳಿಗೂ ಹೆಚ್ಚು ಕಾಲ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿರುವ ಅವರು ನವೆಂಬರ್ 23ರಂದು ನಿವೃತ್ತಿಯಾಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾನು ಬೌದ್ಧಧರ್ಮವನ್ನು ನಂಬಿಕೆಯಾಗಿ ಪಾಲಿಸುತ್ತಿದ್ದರೂ, ಹಿಂದೂ ಧರ್ಮ, ಸಿಖ್ ಧರ್ಮ, ಇಸ್ಲಾಂ ಮತ್ತು ಇತರ ಧರ್ಮಗಳನ್ನು ಒಳಗೊಂಡಂತೆ ಪ್ರತಿಯೊಂದು ಧರ್ಮವನ್ನು ನಂಬುವ ನಿಜವಾದ ಜಾತ್ಯತೀತ ವ್ಯಕ್ತಿ ಎಂದು ಹೇಳಿದ್ದಾರೆ.

ಇದೇ ವೇಳೆ ‘ನಾನು ನನ್ನ ತಂದೆಯಿಂದ ಜಾತ್ಯತೀತರಾಗಿರಲು ಕಲಿತಿದ್ದೇನೆ, ಅವರು ನಿಜವಾದ ಜಾತ್ಯತೀತರೂ ಮತ್ತು ಡಾ. ಭೀಮರಾವ್ ಅಂಬೇಡ್ಕರ್ ಅವರ ಪಾಂಡಿತ್ಯಪೂರ್ಣ ಅನುಯಾಯಿಯೂ ಆಗಿದ್ದರು’ ಎಂದಿದ್ದಾರೆ.

“ಅವರೊಂದಿಗೆ (ನನ್ನ ತಂದೆ) ಬೆಳೆಯುತ್ತಿರುವಾಗ, ಅವರು ತಮ್ಮ ರಾಜಕೀಯ ಕಾರ್ಯಕ್ರಮಗಳಿಗಾಗಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿದಾಗಲೆಲ್ಲಾ, ಅವರ ಸ್ನೇಹಿತರು ಕಿ ಸರ್ ಯಹಾಂ ಚಲೋ ಯಹಾ ಕಾ ದರ್ಗಾ ಫೇಮಸ್ ಹೈ, ಗುರುದ್ವಾರ ಫೇಮಸ್ ಹೈ ಎಂದು ಹೇಳುತ್ತಿದ್ದರು, ಹಾಗಾಗಿ ನಾನು ಎಲ್ಲ ಧರ್ಮಗಳನ್ನು ಗೌರವಿಸುವ ರೀತಿಯಲ್ಲಿ ಬೆಳೆದಿದ್ದೇನೆ” ಎಂದು ಸಿಜೆಐ ಹೇಳಿದರು.

ಸಿಜೆಐ ಗವಾಯಿ ಅವರ ಅಧಿಕೃತ ನಿವೃತ್ತಿ ನವೆಂಬರ್ 23 ರಂದು ನಡೆಯಲಿದ್ದರೂ, ನವೆಂಬರ್ 21, ಶುಕ್ರವಾರದಂದು ದೇಶದ ಉನ್ನತ ನ್ಯಾಯಾಧೀಶರಾಗಿ ಅವರ ಕೊನೆಯ ಕೆಲಸದ ದಿನವಾಗಿತ್ತು. ಏಕೆಂದರೆ ವಾರಾಂತ್ಯದಲ್ಲಿ ಸುಪ್ರೀಂ ಕೋರ್ಟ್ ಅಧಿಕೃತವಾಗಿ ಮುಚ್ಚಲ್ಪಡುತ್ತದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಈ ʼಗಣ್ಯರುʼ ಸರ್ಕಾರದ ತುತ್ತೂರಿಯಾದರೆ ಸಾಕೇ? ಸತ್ಯವಂತ ಸಮಾಜಮುಖಿ ಆಗಲೂ ಬೇಕೇ? 

ಸುಮಾರು ಎರಡು ದಶಕಗಳ ಕಾಲ ನ್ಯಾಯಾಧೀಶರಾಗಿದ್ದ ನಾನು ಇಂದು ಏನೇ ಆಗಿದ್ದರೂ, ಅದಕ್ಕೆ ಈ ಸಂಸ್ಥೆ (ನ್ಯಾಯಾಂಗ) ಕಾರಣ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

“ದೇಶದ ನ್ಯಾಯಾಂಗ ಸಂಸ್ಥೆಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸಲೇಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಗವಾಯಿ ಹೇಳಿದರು.

ಇದಲ್ಲದೆ, ಪುರಸಭೆಯ ಶಾಲೆಯಲ್ಲಿ ಓದುವುದರಿಂದ ಹಿಡಿದು ದೇಶದ ಅತ್ಯುನ್ನತ ನ್ಯಾಯಾಂಗ ಕಚೇರಿಯನ್ನು ತಲುಪುವವರೆಗಿನ ಅವರ ಪ್ರಯಾಣವು ಭಾರತದ ಸಂವಿಧಾನ ಮತ್ತು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳಿಂದ ಸಾಧ್ಯವಾಯಿತು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

ಮುಖ್ಯ ನ್ಯಾಯಮೂರ್ತಿಯಾಗಿ ಆರು ತಿಂಗಳು ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಆರೂವರೆ ವರ್ಷಗಳನ್ನು ಕಳೆದಿದ್ದು, ಸಂಸ್ಥೆಯ ಸಾಮೂಹಿಕ ಶಕ್ತಿಗೆ ಸಲ್ಲುತ್ತದೆ ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಒಬ್ಬ ವ್ಯಕ್ತಿಯ ಸುತ್ತ ಎಂದಿಗೂ ಕೇಂದ್ರೀಕೃತವಾಗಿರಬಾರದು. ನ್ಯಾಯಾಂಗದ ಕಾರ್ಯನಿರ್ವಹಣೆಯು ನ್ಯಾಯಾಧೀಶರು, ಬಾರ್ ಕೌನ್ಸಿಲ್, ರಿಜಿಸ್ಟ್ರಿ ಮತ್ತು ಸಿಬ್ಬಂದಿ ಸೇರಿದಂತೆ ಎಲ್ಲ ಪಾಲುದಾರರ ಭಾಗವಹಿಸುವಿಕೆಯನ್ನು ಅವಲಂಬಿಸಿರುತ್ತದೆ ಎಂದು ಸಿಜೆಐ ಗವಾಯಿ ಹೇಳಿದರು.

SCBA ಮತ್ತು SCAORA ನಂತಹ ಸಂಸ್ಥೆಗಳನ್ನು, ವಿಶೇಷವಾಗಿ ಬಾರ್‌ ಕೌನ್ಸಿಲ್‌ಗೆ ಸಂಬಂಧಿಸಿದ ವಿಷಯಗಳಲ್ಲಿ ನಿಕಟವಾಗಿ ತೊಡಗಿಸಿಕೊಳ್ಳುವ ಅಗತ್ಯವನ್ನು ಮುಖ್ಯ ನ್ಯಾಯಾಧೀಶರು ಒತ್ತಿ ಹೇಳಿದರು.

ಸಂಪೂರ್ಣ ತೃಪ್ತಿಯೊಂದಿಗೆ ನಿರ್ಗಮಿಸುತ್ತಿದ್ದೇನೆ

ನಾಲ್ಕು ದಶಕದ ಕಾನೂನು ವೃತ್ತಿಯ ಪಯಣದ ಕೊನೆಯಲ್ಲಿ ‘ಸಂಪೂರ್ಣ ತೃಪ್ತಿ ಮತ್ತು ಸಂತೃಪ್ತಿ’ಯೊಂದಿಗೆ ‘ಕಾನೂನು ವಿದ್ಯಾರ್ಥಿ’ಯಾಗಿ ನಿರ್ಗಮಿಸುತ್ತಿದ್ದೇನೆ’ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ನುಡಿದರು.

ನಾಲ್ಕು ದಶಕಗಳ ವೃತ್ತಿ ಬದುಕಿನ ದಿನಗಳನ್ನು ನೆನಪಿಸಿಕೊಂಡ ಗವಾಯಿ ಅವರು,‘ಈ ದೇಶಕ್ಕಾಗಿ ನಾನು ಏನು ಮಾಡಬಹುದಿತ್ತೋ, ಅದನ್ನು ಮಾಡಿರುವ ಸಂಪೂರ್ಣ ತೃಪ್ತಿಯ ಭಾವನೆಯೊಂದಿಗೆ ನಿರ್ಗಮಿಸುತ್ತಿದ್ದೇನೆ. ಎಲ್ಲರಿಗೂ ಧನ್ಯವಾದಗಳು, ತುಂಬಾ ಧನ್ಯವಾದಗಳು’ ಎಂದು ಹೇಳಿದರು.

‘ನಾನು 1985ರಲ್ಲಿ ವಕೀಲ ವೃತ್ತಿಯ ಮೂಲಕ ಕಾನೂನು ಶಾಲೆಯನ್ನು ಪ್ರವೇಶಿಸಿದೆ. ಈಗಲೂ ನಾನು ಕಾನೂನು ವಿದ್ಯಾರ್ಥಿಯಾಗಿ ನಿರ್ಗಮಿಸುತ್ತಿದ್ದೇನೆ’ ಎಂದರು.

‘ಪ್ರತಿ ವಕೀಲರು, ನ್ಯಾಯಾಧೀಶರು ನಮ್ಮ ಸಂವಿಧಾನ ಪ್ರತಿಪಾದಿಸುವ ನ್ಯಾಯ, ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಎಂಬ ತತ್ವಗಳಿಗೆ ಒಳಪಡುತ್ತಾರೆ ಎಂದು ನಾನು ನಂಬುತ್ತೇನೆ. ನಮ್ಮೆಲ್ಲರಿಗೂ ತುಂಬಾ ಪ್ರಿಯವಾದ ಸಂವಿಧಾನದ ಈ ನಾಲ್ಕು ಅಂಶಗಳ ವ್ಯಾಪ್ತಿಯೊಳಗೆ ನನ್ನ ಕರ್ತವ್ಯಗಳನ್ನು ನಿರ್ವಹಿಸಲು ಪ್ರಯತ್ನಿಸಿದ್ದೇನೆ’ ಎಂದು ಅವರು ಹೇಳಿದರು.

‘ವಕೀಲ ವೃತ್ತಿಯ ನಂತರ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸಾಗಿರುವ ಈ 40 ವರ್ಷಗಳ ಪಯಣ ನನಗೆ ಬಹಳ ತೃಪ್ತಿ ನೀಡಿದೆ’ ಎಂದು ಬಣ್ಣಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...