ಮತ ಚಲಾವಣೆಯ ಅಂಕಿಅಂಶ ಪ್ರಕಟಕ್ಕಾಗಿ ‘ಇಂಡಿಯಾ’ ಒಕ್ಕೂಟದ ನಾಯಕರಿಂದ ಚುನಾವಣಾ ಆಯೋಗದ ಭೇಟಿ

Date:

ಆದಷ್ಟು ಶೀಘ್ರ ಮೂರು ಹಂತಗಳ ಲೋಕಸಭಾ ಚುನಾವಣೆಯ ಮತದಾನದ ನಿಖರವಾದ ಅಂಕಿಅಂಶಗಳನ್ನು ಪ್ರಕಟಿಸಲು ಹಾಗೂ ಎನ್‌ಡಿಎ ಒಕ್ಕೂಟ ಚುನಾವಣಾ ಪ್ರಚಾರದಲ್ಲಿ ಕೋಮುವಾದ ಬಳಸುತ್ತಿರುವುದರ ವಿರುದ್ಧ ದೂರು ಸಲ್ಲಿಸಲು ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳನ್ನು ‘ಇಂಡಿಯಾ’ ಒಕ್ಕೂಟದ ನಾಯಕರು ಇಂದು ಸಂಜೆ ಭೇಟಿಯಾಗಲಿದ್ದಾರೆ.

ಇಂಡಿಯಾ ಒಕ್ಕೂಟದ ನಾಯಕರು ಒಟ್ಟಾಗಿ ಭೇಟಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಈ ಮೊದಲು ಮಾರ್ಚ್‌ನಲ್ಲಿ ದೆಹಲಿ ಮುಖ್ಯಮಂತ್ರಿ ಬಂಧನದ ವಿರುದ್ಧ ಹಾಗೂ ಕೇಂದ್ರೀಯ ತನಿಖಾ ಸಂಸ್ಥೆಗಳು ವಿಪಕ್ಷ ನಾಯಕರನ್ನು ಬಂಧಿಸುವುದನ್ನು ತಡೆಯಬೇಕೆಂದು ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದರು. ಆದರೆ ಆಯೋಗವು ಕೇಂದ್ರೀಯ ತನಿಖಾ ಸಂಸ್ಥೆಗಳ ಬಗ್ಗೆ ಮಧ್ಯಸ್ಥಿಕೆ ವಹಿಸಲು ನಿರಾಕರಿಸಿತ್ತು.

ಆರಂಭದಲ್ಲಿ ಸಭೆಯನ್ನು ಗುರುವಾರ(ಮೇ.9) ಸಂಜೆ ಎಂದು ನಿರ್ಧರಿಸಲಾಗಿತ್ತು. ಆದರೆ ತಡ ರಾತ್ರಿಯಲ್ಲಿ ಶುಕ್ರವಾರಕ್ಕೆ ನಿಗದಿಪಡಿಸಲಾಯಿತು ಎಂದು ವಿಪಕ್ಷ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಒಕ್ಕೂಟದ ನಾಯಕರಿಗೆ ಚುನಾವಣಾ ಆಯೋಗದ ಬಗ್ಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಚುನಾವಣಾ ಆಯೋಗವು ನೈಜ ಮತದಾನದ ಅಂಕಿಅಂಶವನ್ನು ಪ್ರಕಟಪಡಿಸಲು ಹಾಗೂ ಮತದಾನದ ಅಂಕಿಅಂಶವನ್ನು ಬಿಡುಗಡೆ ಮಾಡದಿರುವುದಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದರು.

ಈ ಸುದ್ದಿ ಓದಿದ್ದಾರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ಅಲ್ಲದೆ ಮುಂದಿನ ಹಂತಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸದಿರುವುದು ವಿಷಾದನೀಯ ಎಂದು ಖರ್ಗೆ ಬೇಸರ ವ್ಯಕ್ತಪಡಿಸಿದ್ದರು.

ತೃಣಮೂಲ ಕಾಂಗ್ರೆಸ್ ಕೂಡ ಚುನಾವಣಾ ಆಯೋಗಕ್ಕೆ ಪತ್ರ ಬರೆದು ತಕ್ಷಣವೇ ಮತದಾರರ ನೈಜ ಅಂಕಿಅಂಶಗಳು ಹಾಗೂ ಇತರ ವಿವರಗಳನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿತ್ತು.

ಚುನಾವಣಾ ಆಯೋಗವು ಮೊದಲ ಹಂತದ ಮತದಾನ ನಡೆದ 11 ದಿನಗಳ ನಂತರ ಹಾಗೂ ಎರಡನೇ ಹಂತದ ಮತದಾನ ನಡೆದ 4 ದಿನದ ನಂತರ ಮತದಾನದ ಶೇಕಡವಾರು ಪ್ರಮಾಣವನ್ನು ಬಿಡುಗಡೆಗೊಳಿಸಿತ್ತು. ಅಲ್ಲದೆ ಎರಡು ಕಡೆಗಳಲ್ಲಿ ಚುನಾವಣಾ ಆಯೋಗವು ಮತದಾನದ ನಿರ್ದಿಷ್ಟ ಅಂಕಿಅಂಶಗಳನ್ನು ಒದಗಿಸಿಲ್ಲ.

ಒಟ್ಟು ಮತದಾನದ ವಿವರವನ್ನು ನೀಡುತ್ತಿದ್ದ ಮತದಾರರ ಮತದಾನದ ಆಪ್‌ನಲ್ಲಿ ಮೊದಲ ಹಂತದ ಮತದಾನ ನಡೆಯುವ ಸಂದರ್ಭದಲ್ಲಿ ಒಟ್ಟು ಮತದಾನದ ವಿವರವನ್ನು ನೀಡಿರಲಿಲ್ಲ. ಮೂರನೇ ಹಂತದ ಮತದಾನದ ವೇಳೆಯಲ್ಲಿ ಇದನ್ನು ಪ್ರಾರಂಭಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...