ಲೈಂಗಿಕ ದೌರ್ಜನ್ಯ, ಆತ್ಮಹತ್ಯೆಗೆ ಪ್ರೇರಣೆ ಆರೋಪ; ಐಎಎಸ್ ಅಧಿಕಾರಿ ಪೊಲೀಸರಿಗೆ ಶರಣು

Date:

ಅರುಣಾಚಲ ಪ್ರದೇಶದ ಐಎಎಸ್ ಅಧಿಕಾರಿ ತಲೋ ಪೊಟಮ್, 19 ವರ್ಷದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಆತ್ಮಹತ್ಯೆಗೆ ಪ್ರೇರೇಪಣೆ ಆರೋಪಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಭಾನುವಾರ ರಾತ್ರಿ ಪೊಲೀಸರ ಮುಂದೆ ಶರಣಾಗಿದ್ದಾರೆ.

ಪೊಟೊಮ್ ವಿರುದ್ಧ ರಾಷ್ಟ್ರವ್ಯಾಪಿ ಶೋಧ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ. ಈ ಪ್ರಕರಣದಿಂದ ರಾಜ್ಯದಲ್ಲಿ ಜನರ ಆಕ್ರೋಶ ಉಂಟಾಗಿದ್ದು, ಪ್ರತಿಭಟನೆಗಳೂ ನಡೆದಿವೆ. ಪ್ರಕರಣದಲ್ಲಿ ಪೊಟಮ್, ವಿರುದ್ಧ ಎರಡು ಆತ್ಮಹತ್ಯೆ, ಲೈಂಗಿಕ ದೌರ್ಜನ್ಯ ಆರೋಪಗಳು ಸೇರಿವೆ.

53 ವರ್ಷದ ಪೊಟಮ್, ಈ ಹಿಂದೆ ರಾಜಧಾನಿ ಇಟಾನಗರ್‌ನ ಉಪ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರು ನವದೆಹಲಿಯಲ್ಲಿ ಸಾರ್ವಜನಿಕ ಕಾರ್ಯಗಳ ಇಲಾಖೆ (PWD)ಯಲ್ಲಿ ಉಪ ಸಚಿವಾಲಯದ ವಿಶೇಷ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಟಮ್ ಇಟಾನಗರ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ ಎಂದು ಇಟಾನಗರ್ ವ್ಯಾಪ್ತಿಯ ಉಪ ಪೊಲೀಸ್ ಮಹಾನಿರ್ದೇಶಕ ತುಮ್ಮೆ ಅಮೋ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ತಲೆ ಮೇಲೆ ಹೊತ್ತು ಮೆರೆಸಿದವರು ಈಗ ಪಲಾಯನ ಮಾಡುವುದು ತರವೇ?

19 ವರ್ಷದ ಯುವಕನೊಬ್ಬ ಅಕ್ಟೋಬರ್ 23ರಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದ. ಆತ PWD ಇಲಾಖೆಯಲ್ಲಿ ಬಹುಮುಖ ಸಿಬ್ಬಂದಿಯಾಗಿ (MTS) ಕೆಲಸ ಮಾಡುತ್ತಿದ್ದ. ಆತ ಬರೆದ ಆತ್ಮಹತ್ಯೆ ಪತ್ರದಲ್ಲಿ ಪೊಟೊಮ್ ಹಾಗೂ ಇನ್ನೊಬ್ಬ ಕಾರ್ಯನಿರ್ವಾಹಕ ಎಂಜಿನಿಯರ್ ತಮ್ಮ ಮೇಲೆ ಲೈಂಗಿಕ ಶೋಷಣೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾನೆ. ಎರಡನೇ ಆರೋಪಿಯ ಲೈಂಗಿಕ ದೌರ್ಜನ್ಯದಿಂದಾಗಿ ತನಗೆ ಎಚ್‌ಐವಿ ಸೋಂಕು ಹರಡಿದೆ ಎಂದು ಸಂತ್ರಸ್ತ ಹೇಳಿದ್ದಾನೆ. ಈ ಆರೋಪದ ನಂತರ ಎರಡನೇ ಆರೋಪಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಕೂಡ ಅದೇ ದಿನ ರಾತ್ರಿ (ಅಕ್ಟೋಬರ್ 23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂತ್ರಸ್ತನ ಪ್ರಕಾರ, ಪೊಟಮ್ 2021ರಿಂದ 2025ರವರೆಗೆ ಇಟಾನಗರ್‌ನ ಉಪ ಜಿಲ್ಲಾಧಿಕಾರಿಯಾಗಿದ್ದಾಗ ಆತನಿಗೆ ಉದ್ಯೋಗ ನೀಡಲಾಗಿತ್ತು. ಇತ್ತೀಚೆಗೆ ಅವನನ್ನು ದೆಹಲಿಗೆ ಕಳುಹಿಸಲಾಗಿತ್ತು. ಪೊಲೀಸರ ಪ್ರಕಾರ, ಇಬ್ಬರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಬಾಲಕನ ದೇಹದ ಮೇಲೆ ಎಚ್‌ಐವಿ ಪರೀಕ್ಷೆಯನ್ನು ಮಾಡಲಾಗಿದ್ದು, ವರದಿಗಳಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನ ಕುಟುಂಬ ಸದಸ್ಯರು ಭಾನುವಾರ ಇಟಾನಗರದಲ್ಲಿ ನಡೆದ ಸಾರ್ವಜನಿಕ ಪ್ರತಿಭಟನೆಯಲ್ಲಿ ಪಾಲ್ಗೊಂಡು ಪೊಟೊಮ್ ಅವರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...