ಅಕ್ರಮವಾಗಿ ‘ಕೆಂಪು ಬೀಕನ್’ ಅಳವಡಿಸಿದ್ದ ಐಎಎಸ್ ಅಧಿಕಾರಿಯ ಆಡಿ ಕಾರು ವಶ

Date:

ತಮ್ಮ ಐಷಾರಾಮಿ ಕಾರಿಗೆ ಅಕ್ರಮವಾಗಿ ‘ಕೆಂಪು ಬೀಕನ್’ ದೀಪವನ್ನು ಅಳವಡಿಸಿದ ಆರೋಪದ ಮೇಲೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಆಡಿ ಕಾರನ್ನು ಪುಣೆ ಪೊಲೀಸರು ಭಾನುವಾರ ಜಪ್ತಿ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖೇಡ್ಕರ್ ಅವರು ತರಬೇತಿಗಾಗಿ ಪುಣೆಗೆ ನಿಯೋಜನೆಯಾದ ಸಮಯದಲ್ಲಿ ತಮಗೆ ಪ್ರತ್ಯೇಕ ಕ್ಯಾಬಿನ್ ಮತ್ತು ಸಿಬ್ಬಂದಿಗಳು ಬೇಕೆಂದು ಬೇಡಿಕೆ ಇಟ್ಟಿದ್ದರು. ಆಮೂಲಕ ವಿವಾದ ಸೃಷ್ಟಿಸಿಕೊಂಡು ಸುದ್ದಿಯಾಗಿದ್ದರು. ಮಾತ್ರವಲ್ಲದೆ, ಐಎಎಸ್‌ ಪಡೆಯುವ ವೇಳೆ, ಅಂಗವೈಕಲ್ಯ ಮತ್ತು ಇತರ ಹಿಂದುಳಿದ ವರ್ಗ (OBC) ಕೋಟಾವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದೂ ಆರೋಪಿಸಲಾಗಿತ್ತು.

ಇದೀಗ, ಖೇಡ್ಕರ್ ಅವರು ತಮ್ಮ ಆಡಿ ಕಾರಿನ ಮೇಲೆ ಅಕ್ರಮವಾಗಿ ‘ಕೆಂಪು ಬೀಕನ್ ಲೈಟ್’ ಬಳಸಿದ್ದಾರೆ. ಮಾತ್ರವಲ್ಲದೆ, ಅನುಮತಿ ಪಡೆಯದೆ ‘ಮಹಾರಾಷ್ಟ್ರ ಸರ್ಕಾರ’ ಎಂದೂ ಕಾರಿನ ಮೇಲೆ ಬರೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ವಿವಾದದ ಬಳಿಕ ಆಕೆಯ ತರಬೇತಿ ಪೂರ್ಣಗೊಳ್ಳುವ ಮೊದಲೇ ಆಕೆಯನ್ನು ಪುಣೆಯಿಂದ ವಾಶಿಮ್ ಜಿಲ್ಲೆಗೆ ವರ್ಗಾಯಿಸಲಾಗಿದೆ.

“ಖೇಡ್ಕರ್ ಬಳಸುತ್ತಿದ್ದ ಖಾಸಗಿ ಕಾರಿನ ಮೇಲೆ ‘ಬೀಕನ್’ ಮತ್ತು ಸರ್ಕಾರದ ಹೆಸರನ್ನು ಅನಧಿಕೃತವಾಗಿ ಅಳವಡಿಸಿರುವುದರ ವಿರುದ್ಧ ಗುರುವಾರ ನೋಟಿಸ್ ನೀಡಲಾಗಿದೆ. ಭಾನುವಾರ ಕಾರನ್ನು ಜಪ್ತಿ ಮಾಡಲಾಗಿದೆ. ಅದರ ದಾಖಲೆಗಳನ್ನು ಪರಿಶೀಲಿಸಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕೇಂದ್ರ ಮೋಟಾರು ವಾಹನಗಳ ನಿಯಮಗಳು (CMVR)-1989ರ ಸೆಕ್ಷನ್ 108ರ ಪ್ರಕಾರ, ರಾಜ್ಯ ಸರ್ಕಾರವು ವಿಐಪಿಗಳು, ವಿವಿಐಪಿಗಳು ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಅಧಿಕೃತ ವಾಹನಗಳಲ್ಲಿ ಕೆಂಪು ಅಥವಾ ಅಂಬರ್ (ಹಳದಿ) ಬೀಕನ್ ದೀಪಗಳನ್ನು ಬಳಸಲು ಅನುಮತಿ ನೀಡಬಹುದು.

ನಿಯಮದ ಪ್ರಕಾರ, ರಾಜ್ಯ ಸರ್ಕಾರದ ಕಾರ್ಯದರ್ಶಿ ಮಟ್ಟಕ್ಕಿಂತ ಮೇಲಿನ ಉನ್ನತ ಅಧಿಕಾರಿಗಳು, ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಮತ್ತು ಪ್ರಾದೇಶಿಕ ಆಯುಕ್ತರ ಶ್ರೇಣಿಯ ಪೊಲೀಸ್ ಅಧಿಕಾರಿಗಳು ಮಾತ್ರ ಫ್ಲ್ಯಾಷರ್‌ಗಳಿಲ್ಲದೆ ಅಂಬರ್ ಬೀಕನ್‌ಗಳನ್ನು ಬಳಸಲು ಅನುಮತಿಸಲಾಗಿದೆ ಹಾಗೂ ಉನ್ನತ ಮಟ್ಟದ ಜಿಲ್ಲಾ ಅಧಿಕಾರಿಗಳು ನೀಲಿ ಬೀಕನ್‌ಗಳನ್ನು ಬಳಸಲು ಅರ್ಹರಾಗಿರುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...