ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಐಎಎಸ್ ಅಧಿಕಾರಿ; ವಿಡಿಯೋ ವೈರಲ್

Date:

ಮಧ್ಯಪ್ರದೇಶದ ಭಿಂಡ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಐಎಎಸ್ ಅಧಿಕಾರಿ ಸಂಜೀವ್ ಶ್ರೀವಾಸ್ತವ ಅವರು ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷಾ ಕೊಠಡಿಯಲ್ಲಿ ಹಲವು ಬಾರಿ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಘಟನೆ ಎಪ್ರಿಲ್ 1ರಂದು ದೀನದಯಾಳ್ ದಂಗ್ರೌಲಿಯಾ ಮಹಾವಿದ್ಯಾಲಯದಲ್ಲಿ ಬಿಎಸ್ಸಿ 2ನೇ ವರ್ಷದ ಗಣಿತ ಪರೀಕ್ಷೆಯ ಸಮಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ವಿಡಿಯೋದಲ್ಲಿ ಸಂಜೀವ್ ಶ್ರೀವಾಸ್ತವ ಅವರು ವಿದ್ಯಾರ್ಥಿಯನ್ನು ತನ್ನ ಆಸನದಿಂದ ಎಳೆದು ಪದೇ ಪದೇ ಕಪಾಳಮೋಕ್ಷ ಮಾಡುತ್ತಿರುವುದು ಕಂಡು ಬಂದಿದೆ.

ಕಾಲೇಜಿನಲ್ಲಿ ಸಾಮೂಹಿಕ ಪರೀಕ್ಷಾ ಅಕ್ರಮ ನಡೆಯುತ್ತಿದೆ ಎಂಬ ಸುಳಿವು ನಮಗೆ ಸಿಕ್ಕಿತ್ತು. ನಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಎಲ್ಲವೂ ಸಾಮಾನ್ಯವಾಗಿದ್ದಂತೆ ಕಂಡುಬಂದಿದೆ. ಪರೀಕ್ಷಾ ಕೊಠಡಿಯಲ್ಲಿ ಎಲ್ಲರೂ ಸದ್ದಿಲ್ಲದೆ ಕುಳಿತಿದ್ದರು. ಅದು ಗಣಿತ ಪತ್ರಿಕೆಯಾಗಿತ್ತು. ಓರ್ವ ವಿದ್ಯಾರ್ಥಿಯ ಬಳಿ ಮಾತ್ರ ಪ್ರಶ್ನೆ ಪತ್ರಿಕೆ ಇರಲಿಲ್ಲ. ಆತನನ್ನು ಪ್ರಶ್ನಿಸಿದಾಗ ಆತ ತನ್ನ ಪ್ರಶ್ನೆ ಪತ್ರಿಕೆಯನ್ನು ಉತ್ತರಕ್ಕಾಗಿ ಹೊರಗೆ ಕಳುಹಿಸಿರುವುದಾಗಿ ಹೇಳಿದ್ದಾನೆ. ಸಾಮೂಹಿಕ ನಕಲನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆʼ ಎಂದು ಶ್ರೀವಾಸ್ತವ ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ

ʼನಾನು ಶೌಚಾಲಯಕ್ಕೆ ಹೋಗಿದ್ದೆ. ನನ್ನ ಪ್ರಶ್ನೆ ಪತ್ರಿಕೆ ಮೇಜಿನ ಮೇಲಿತ್ತು. ಆದರೆ, ನಾನು ಹಿಂತಿರುಗಿದಾಗ ಅದು ಅಲ್ಲಿರಲಿಲ್ಲ. ತಕ್ಷಣ ಜಿಲ್ಲಾಧಿಕಾರಿ ಬಂದರು. ಪರಿಶೀಲನೆಯ ಸಮಯದಲ್ಲಿ ಓರ್ವ ವಿದ್ಯಾರ್ಥಿಯ ಬಳಿ ಎರಡು ಪ್ರಶ್ನೆ ಪತ್ರಿಕೆಗಳಿದ್ದವು. ನಾನು ಎರಡನೇ ಟೇಬಲ್‌ನಲ್ಲಿ ಕುಳಿತಿದ್ದೆ. ನನ್ನ ಬಳಿ ಪ್ರಶ್ನೆ ಪತ್ರಿಕೆ ಇರಲಿಲ್ಲ. ಸರ್ ನನ್ನನ್ನು ಎದ್ದು ನಿಲ್ಲುವಂತೆ ಮಾಡಿ, ಎರಡು ಬಾರಿ ಹೊಡೆದರು. ನಂತರ ಕೆಳಗಡೆ ಕರೆದೊಯ್ದು ಮತ್ತೆ ಹೊಡೆದರು. ನನಗೆ ನೋವಾಯಿತು, ನನ್ನ ತಂದೆಯ ಮೆಡಿಕಲ್ ಶಾಪ್‌ನಿಂದ ಔಷಧಿ ತೆಗೆದುಕೊಂಡೆ. ಉತ್ತರಕ್ಕಾಗಿ ಪ್ರಶ್ನೆ ಪತ್ರಿಕೆಯನ್ನು ಹೊರಗೆ ಕಳುಹಿಸಿಲ್ಲʼ ಎಂದು ವಿದ್ಯಾರ್ಥಿ ರೋಹಿತ್ ರಾಥೋಡ್ ಹೇಳಿದ್ದಾನೆ.

ಐಎಎಸ್ ಅಧಿಕಾರಿ ಸಂಜೀವ್ ಶ್ರೀವಾಸ್ತವ ವಿವಾದ ಹೊಸದೇನು ಇಲ್ಲ. ಈ ಹಿಂದೆ ಅಧಿಕಾರಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಗ್ವಾಲಿಯರ್‌ ಪೀಠ ಛೀಮಾರಿ ಹಾಕಿತ್ತು. ಹಾಗೆಯೇ ಮುಖ್ಯ ಕಾರ್ಯದರ್ಶಿ ಕೂಡ ಶ್ರೀವಾಸ್ತವ ಅವರಿಗೆ ಎಚ್ಚರಿಕೆ ನೀಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...