ಸಿಎಎ ಜಾರಿ | ಪಾಕಿಸ್ತಾನದವ ನಿಮ್ಮ ಮನೆ ಬಳಿ ಬಂದು ಮೊಕ್ಕಾಂ ಹೂಡಿದರೆ ಸುಮ್ಮನಿರ್ತೀರಾ? ಕೇಜ್ರಿವಾಲ್

Date:

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶಾದ್ಯಂತ ಜಾರಿ ಮಾಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ, ದೇಶದ ಜನರನ್ನುದ್ದೇಶಿಸಿ ಮಾತನಾಡಿರುವ ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್, “ಸಿಎಎಯ ಮೂಲಕ ನಾಗರಿಕ ಪಡೆದ ಪಾಕಿಸ್ತಾನದವನೊಬ್ಬ, ನಿಮ್ಮ ಮನೆ ಬಳಿ ಬಂದು ಮೊಕ್ಕಾಂ ಹೂಡಿದರೆ ನೀವು ಸುಮ್ಮನಿರ್ತೀರಾ?” ಎಂದು ಕೇಳಿದ್ದಾರೆ.

“ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಸುಮಾರು 3 ಕೋಟಿ ಜನರು ಅಲ್ಪಸಂಖ್ಯಾತರಿದ್ದಾರೆ. ಇವೆಲ್ಲವೂ ಬಡ ರಾಷ್ಟ್ರಗಳು. ಈ ಪೈಕಿ 2.5-3 ಕೋಟಿ ಜನರು ಆಶ್ರಯ ಕೇಳಿಕೊಂಡು ನಮ್ಮ ದೇಶಕ್ಕೆ ವಲಸೆ ಬರಲು ಪ್ರಾರಂಭಿಸುತ್ತಾರೆ. ಒಂದು ವೇಳೆ ಒಂದೂವರೆ ಕೋಟಿ ಜನರು ಭಾರತಕ್ಕೆ ಬಂದರೆ ಅವರಿಗೆ ಎಲ್ಲಿ ನೆಲೆ ನೀಡುತ್ತೀರಾ? ಅವರಿಗೆ ನಾವು ಉದ್ಯೋಗ ಕೊಡುವುದು ಹೇಗೆ? ನಮ್ಮ ಜನರಿಗೆ ಇರುವ ಉದ್ಯೋಗಗಳು ಅವರಿಗೆ ಹೋಗುತ್ತವೆ. ಇಡೀ ಕಾನೂನು ಸುವ್ಯವಸ್ಥೆ ಕುಸಿಯಲಿದೆ. ದರೋಡೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತವೆ. ಗಲಭೆಗಳು ಕೂಡ ಆಗಬಹುದು. ನಮ್ಮ ದೇಶದ ಭದ್ರತೆಯ ಸ್ಥಿತಿ ಏನಾಗಬಹುದು? ಒಮ್ಮೆ ಯೋಚಿಸಿ” ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮ ಮನೆಯ ಬಳಿ ಪಾಕಿಸ್ತಾನದವನೊಬ್ಬ ಬಂದು ಮೊಕ್ಕಾಂ ಹೂಡಿದರೆ ನೀವು ಸುಮ್ಮನಿರ್ತೀರಾ?” ಎಂದು ದೇಶದ ನಾಗರಿಕರಲ್ಲಿ ಪ್ರಶ್ನಿಸಿದ ಕೇಜ್ರಿವಾಲ್, “ನಾವು ಬೇರೆ ದೇಶಗಳಿಂದ ಪಾಠ ಕಲಿಯಬೇಕು. ಯುಕೆ, ಕೆನಡಾದವರು ಕೂಡ ಬಂದವರಿಗೆಲ್ಲ ಪೌರತ್ವ ಕೊಡುತ್ತಾ ಹೋದರು. ಇವತ್ತು ಕೆನಡಾದ ಪರಿಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಬಂದವರಿಗೆಲ್ಲಾ ಪೌರತ್ವ ಕೊಟ್ಟು ಇಂದು ಕೆನಡಾದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆರ್ಥಿಕ ವ್ಯವಸ್ಥೆಯೇ ಬುಡಮೇಲಾಗಿದೆ. ಬುದ್ಧಿ ಬಂದ ಬಳಿಕ ಪೌರತ್ವ ನೀಡುವುದನ್ನು ನಿಲ್ಲಿಸಿದ್ದಾರೆ” ಎಂದು ತಿಳಿಸಿದರು.

“ಒಂದು ವೇಳೆ ನೀವು ಕರೆತರುವುದಾದದರೆ ದೇಶಬಿಟ್ಟು ಹೋಗಿರುವ 11 ಲಕ್ಷ ಶ್ರೀಮಂತರನ್ನು ಮರಳಿ ಕರೆತನ್ನಿ. ಅವರ ಮೂಲಕ ಕಂಪೆನಿಗಳನ್ನು ಆರಂಭಿಸಿ, ನಮ್ಮಲ್ಲಿನ ಯುವಕರಿಗೆ ಉದ್ಯೋಗ ನೀಡಿ” ಎಂದು ಮನವಿ ಮಾಡಿದ ಕೇಜ್ರಿವಾಲ್, “ಬಿಜೆಪಿಯ ನೀಚ ವೋಟ್‌ ಬ್ಯಾಂಕ್ ರಾಜಕಾರಣಕ್ಕಾಗಿ ನೆರೆ ರಾಷ್ಟ್ರಗಳಲ್ಲಿರುವ ಜನರನ್ನು ಭಾರತಕ್ಕೆ ಕರೆತರಲಾಗುತ್ತಿದೆ. ಸಿಎಎ ಈಶಾನ್ಯ ರಾಜ್ಯಗಳಿಗೆ ಹೆಚ್ಚಿನ ಹಾನಿಯನ್ನುಂಟು ಮಾಡುತ್ತದೆ. ಇತರ ದೇಶಗಳು ಹೊರಗಿನವರು ಬರುವುದನ್ನು ನಿಲ್ಲಿಸುತ್ತವೆ. ಆದರೆ ಬಿಜೆಪಿ ಚುನಾವಣಾ ಲಾಭಕ್ಕಾಗಿ ಸಿಎಎ ತಂದಿದೆ. ತಮ್ಮ ದೇಶದ ಹಕ್ಕುಗಳನ್ನು ಪಾಕಿಸ್ತಾನಿಗಳಿಗೆ ನೀಡುತ್ತಿದ್ದಾರೆ. ಸಿಎಎ ಹಿಂಪಡೆಯಬೇಕು ಎಂದು ದೇಶ ಒತ್ತಾಯಿಸುತ್ತಿದೆ” ಎಂದರು.

ಇದನ್ನು ಓದಿದ್ದೀರಾ? ‘ಫ್ರೇಸರ್‌ ಟೌನ್‌ ರಮಝಾನ್ ಫುಡ್ ಫೆಸ್ಟ್‌’ಗೆ ಬ್ರೇಕ್‌: ಸ್ಥಳೀಯರ ಗಟ್ಟಿ ನಿರ್ಧಾರಕ್ಕೆ ಬಿಬಿಎಂಪಿ ಸಾಥ್

“ಬಿಜೆಪಿಯವರಿಗೆ ಇಲ್ಲಿರುವ ನಮ್ಮ ಮಕ್ಕಳಿಗೆ ಕೆಲಸ ಕೊಡಲು ಸಾಧ್ಯವಿಲ್ಲ. ಆದರೆ ಪಾಕಿಸ್ತಾನದಿಂದ ಬರುವ ಮಕ್ಕಳಿಗೆ ಕೆಲಸ ಕೊಡಲು ಬಯಸುತ್ತಾರೆ. ನಮ್ಮ ಅನೇಕ ಜನರು ನಿರಾಶ್ರಿತರಾಗಿದ್ದಾರೆ. ಆದರೆ ಬಿಜೆಪಿ ಪಾಕಿಸ್ತಾನದಿಂದ ಬರುವ ಜನರನ್ನು ಇಲ್ಲಿ ನೆಲೆ ನೀಡಲು ಬಯಸುತ್ತದೆ. ಅವರು ನಮ್ಮ ಕೆಲಸವನ್ನು ವಿದೇಶಿ ಮಕ್ಕಳಿಗೆ ನೀಡಲು ಬಯಸುತ್ತಾರೆ. ಪಾಕಿಸ್ತಾನಿಗಳನ್ನು ನಮ್ಮ ಹಕ್ಕಿನ ಮನೆಗಳಲ್ಲಿ ನೆಲೆಸಲು ಬಿಜೆಪಿ ನಾಯಕರು ಬಯಸುತ್ತಾರೆ. ಭಾರತ ಸರ್ಕಾರದ ಬಳಿ ಇರುವ ಹಣವನ್ನು ನಮ್ಮ ಕುಟುಂಬ ಮತ್ತು ದೇಶದ ಅಭಿವೃದ್ಧಿಗೆ ಬಳಸಬೇಕು. ಆದರೆ ಪಾಕಿಸ್ತಾನಿಗಳನ್ನು ನೆಲೆಗೊಳಿಸಲು ಇದನ್ನು ಬಳಸಲಾಗುತ್ತಿದೆ” ಎಂದು ದೆಹಲಿ ಸಿಎಂ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...