ನ್ಯಾಯಯುತ ವಿಚಾರಣೆ ಭರವಸೆ ಸಿಕ್ಕರೆ ಭಾರತಕ್ಕೆ ವಾಪಸ್‌: ವಿಜಯ್‌ ಮಲ್ಯ

Date:

ಭಾರತದ ವಿವಿಧ ಬ್ಯಾಂಕ್‌ಗಳಿಗೆ ಬಹುಕೋಟಿ ವಂಚನೆ ಮಾಡಿರುವ ಆರೋಪಗಳನ್ನು ಎದುರಿಸುತ್ತಿರುವ ಕಿಂಗ್‌ಫಿಷರ್‌ ಏರ್‌ಲೈನ್ಸ್‌ ಮಾಜಿ ಮುಖ್ಯಸ್ಥ ಉದ್ಯಮಿ ವಿಜಯ್ ಮಲ್ಯ ಭಾರತಕ್ಕೆ ವಾಪಾಸ್ಸಾಗುವ ಕುರಿತು ತನ್ನ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಪಾಡ್‌ಕಾಸ್ಟರ್‌ ರಾಜ್ ಶಮಾನಿ ಅವರೊಂದಿಗೆ ನಡೆದ ಸಂಭಾಷಣೆಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ನ್ಯಾಯಯುತ ವಿಚಾರಣೆ ಮತ್ತು ಗೌರವಾನ್ವಿತ ಅಸ್ತಿತ್ವದ ಭರವಸೆ ನನಗೆ ಇದ್ದರೆ ವಾಪಸ್‌ ಆಗುವುದಾಗಿ ಹೇಳಿದ್ದಾರೆ.

ಭಾರತಕ್ಕೆ ಹಿಂತಿರುಗದ ಕಾರಣ ಸಮಸ್ಯೆಗಳು ಮತ್ತಷ್ಟು ಬಿಗಡಾಯಿಸುತ್ತಿದೆಯೇ ಎಂದು ಪಾಡ್‌ಕಾಸ್ಟರ್‌ ರಾಜ್ ಶಮಾನಿ ಕೇಳಿದಾಗ, ಭಾರತದಲ್ಲಿ ನ್ಯಾಯಯುತ ವಿಚಾರಣೆ ಮತ್ತು ಗೌರವಾನ್ವಿತ ಅಸ್ತಿತ್ವದ ಭರವಸೆ ನನಗೆ ಇದ್ದರೆ, ನೀವು ಹೇಳಿದ್ದು ಸರಿ ಇರಬಹುದು, ಆದರೆ ನಾನು ಆ ರೀತಿ ಹೇಳುವುದಿಲ್ಲ ಎಂದು ವಿಜಯ್ ಮಲ್ಯ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಯುತ ವಿಚಾರಣೆಯ ಭರವಸೆ ಸಿಕ್ಕರೆ ಭಾರತಕ್ಕೆ ಮರಳಲು ಸಿದ್ಧರಿದ್ದೀರಾ ಎಂದು ಕೇಳಿದಾಗ, ʼನನಗೆ ಭರವಸೆ ಸಿಕ್ಕರೆ, ನಾನು ಅದರ ಬಗ್ಗೆ ಗಂಭೀರವಾಗಿ ಯೋಚಿಸುತ್ತೇನೆʼ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮಾರ್ಚ್ 1, 2027 ರಿಂದ ಕೇಂದ್ರದಿಂದ ಜಾತಿ, ಜನ ಗಣತಿ; ಕೆಲ ರಾಜ್ಯಗಳಲ್ಲಿ ಮುಂದಿನ ವರ್ಷದಿಂದ ಪ್ರಾರಂಭ

ಗಡೀಪಾರು ಪ್ರಕರಣದಲ್ಲಿ ಯುಕೆ ಹೈಕೋರ್ಟ್ ತೀರ್ಪನ್ನು ಅವರು ಉಲ್ಲೇಖಿಸಿದರು. ಕೆಲವರನ್ನು ಇಂಗ್ಲೆಂಡ್‌ನಿಂದ ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಕೇಳಿಕೊಂಡಿದೆ. ಭಾರತೀಯ ಬಂಧನದ ಷರತ್ತುಗಳು ಇಸಿಎಚ್‌ಆರ್‌ ಆರ್ಟಿಕಲ್ 3 ಅನ್ನು ಉಲ್ಲಂಘಿಸುತ್ತದೆ ಎಂದು ಕಂಡುಬಂದಿದೆ ಎಂದು ಹೇಳಿದರು.

ಭಾರತದಿಂದ ತೆರಳಿದ್ದಕ್ಕೆ ʼಪರಾರಿʼ ಎಂದು ಕರೆದಿರುವುದು ನ್ಯಾಯಯುತವಾದರೂ, ಕಳ್ಳ ಎಂದು ಏಕೆ ಕರೆಯುತ್ತಾರೆ ಮತ್ತು ಕಳ್ಳತನ ಮಾಡಿದ್ದೇನು ಎಂದು ಮಲ್ಯ ಪ್ರಶ್ನಿಸಿದರು.

2016ರ ಮಾರ್ಚ್ ನಂತರ ಭಾರತಕ್ಕೆ ವಾಪಾಸ್ಸಾಗಿಲ್ಲ ಎಂದು ನನ್ನನ್ನು ಪರಾರಿಯಾಗಿದ್ದಾನೆ ಎಂದು ಕರೆಯಿರಿ. ನಾನು ಓಡಿಹೋಗಲಿಲ್ಲ, ಪೂರ್ವನಿಗದಿತ ಭೇಟಿಗಾಗಿ ಭಾರತದಿಂದ ಬಂದಿದ್ದೆ. ಮಾನ್ಯವೆಂದು ಪರಿಗಣಿಸುವ ಕಾರಣಗಳಿಗಾಗಿ ನಾನು ಹಿಂತಿರುಗಲಿಲ್ಲ, ಆದ್ದರಿಂದ ನೀವು ನನ್ನನ್ನು ಪರಾರಿಯಾಗಿದ್ದಾನೆ ಎಂದು ಕರೆಯಲು ಬಯಸಿದರೆ, ಅದರಂತೆ ಮುಂದುವರಿಯಿರಿ, ಆದರೆ ಕಳ್ಳ ಎಂದು ಏಕೆ ಕರೆಯುತ್ತಾರೆ ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...