ಮೀನು ತಿಂದರೆ ನಿಮ್ಮ ಕಣ್ಣು ಐಶ್ವರ್ಯ ರೈ ತರಹ ಆಗುತ್ತದೆ: ಮಹಾರಾಷ್ಟ್ರ ಬಿಜೆಪಿ ಮಂತ್ರಿಯ ವಿವಾದಾತ್ಮಕ ಹೇಳಿಕೆ

Date:

ದಿನವೂ ಮೀನು ತಿನ್ನುವುದರಿಂದ ನಿಮ್ಮ ಕಣ್ಣು ಐಶ್ವರ್ಯ ರೈ ತರಹ ಹೊಳೆಯುತ್ತದೆ ಎಂದು ಮಹಾರಾಷ್ಟ್ರದ ಬುಡಕಟ್ಟು ಸಚಿವ ವಿಜಯ್‌ಕುಮಾರ್ ಗವಿತ್ ಹೇಳಿಕೆ ನೀಡಿದ್ದಾರೆ.  

ಉತ್ತರ ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ರಾಜ್ಯ ಬುಡಕಟ್ಟು ಸಚಿವ ವಿಜಯಕುಮಾರ್ ಗವಿತ್ ನೀಡಿದ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

‘ಪ್ರತಿದಿನ ಮೀನು ಸೇವಿಸುವ ಜನರ ಚರ್ಮವು ನಯವಾಗುತ್ತದೆ ಮತ್ತು ಅವರ ಕಣ್ಣುಗಳು ಹೊಳೆಯುತ್ತವೆ. ಯಾರಾದರೂ ನಿಮ್ಮನ್ನು ನೋಡಿದರೆ, ಆ ವ್ಯಕ್ತಿಯು ನಿಮ್ಮತ್ತ ಆಕರ್ಷಿತನಾಗುತ್ತಾನೆ. ಐಶ್ವರ್ಯಾ ರೈ ಬಗ್ಗೆ ನಾನು ನಿಮಗೆ ಹೇಳಿದ್ದೆನಾ? ಅವರು ಮಂಗಳೂರಿನ ಸಮುದ್ರ ತೀರದ ಬಳಿ ವಾಸಿಸುತ್ತಿದ್ದರು. ಅವರು ಪ್ರತಿ ದಿನ ಮೀನು ತಿನ್ನುತ್ತಿದ್ದರು. ನೀವು ಅವರ ಕಣ್ಣು ನೋಡಿದ್ದೀರಾ. ನಿಮ್ಮ ಕಣ್ಣು ಕೂಡ ಅದೇ ಥರ ಆಗುತ್ತದೆ’ ಎಂದು ಸಚಿವರು ಬಾಯಿ ಹರಿಬಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮೀನಿನಲ್ಲಿ ಕೆಲವು ಎಣ್ಣೆಗಳಿವೆ, ಅದು ನಿಮ್ಮ ಚರ್ಮವನ್ನು ನಯವಾಗಿಸುತ್ತದೆ’ ಎಂದು 68 ವರ್ಷದ ಸಚಿವ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ: ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

ಅವರ ಹೇಳಿಕೆಯು ವಿವಾದಕ್ಕೆ ಈಡಾಗಿದ್ದು, ಹಲವರ ಟೀಕೆಗೆ ಗುರಿಯಾಗುತ್ತಿದೆ.

ಎನ್‌ಸಿಪಿ ಶಾಸಕ ಅಮೋಲ್ ಮಿತ್ಕರಿ ಮಾತನಾಡಿ, ‘ಸಚಿವರು ಇಂಥ ಕ್ಷುಲ್ಲಕ ವಿಚಾರಗಳನ್ನು ಬಿಟ್ಟು ಬುಡಕಟ್ಟು ಜನರು ಎದುರಿಸುತ್ತಿರುವ ಸಮಸ್ಯೆಗಳತ್ತ ಗಮನ ಹರಿಸಬೇಕು’ ಎಂದಿದ್ದಾರೆ. ಬಿಜೆಪಿಯ ಶಾಸಕರಾದ ನಿತೇಶ್ ರಾಣೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ‘ನಾನು ದಿನವೂ ಮೀನು ತಿನ್ನುತ್ತೇನೆ. ನನ್ನ ಕಣ್ಣುಗಳು ಐಶ್ವರ್ಯ ರೈ ಥರ ಆಗಬೇಕಿತ್ತಲ್ಲಾ. ಇದರ ಬಗ್ಗೆ ಏನಾದರೂ ಸಂಶೋಧನೆ ನಡೆದಿದೆಯೇ ಎಂದು ಗವಿತ್ ಸಾಹೇಬರನ್ನು ಕೇಳುತ್ತೇನೆ’ ಎಂದು ವ್ಯಂಗ್ಯ ಮಾಡಿದ್ದಾರೆ.

ವಿಜಯ್‌ಕುಮಾರ್ ಗವಿತ್ ಅವರ ಮಗಳು ಹೀನಾ ಗವಿತ್ ಬಿಜೆಪಿಯ ಲೋಕಸಭಾ ಸದಸ್ಯರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...