ಮುಂಬೈ | ಐಐಟಿ ಸಂಸ್ಥೆಯ ಕ್ಯಾಂಟೀನ್‌ ಗೋಡೆಗಳ ಮೇಲೆ ‘ಸಸ್ಯಾಹಾರಿಗಳಿಗೆ ಮಾತ್ರ’ ಎಂಬ ಪೋಸ್ಟರ್

Date:

ಮುಂಬೈನ ಐಐಟಿ ಶೈಕ್ಷಣಿಕ ಸಂಸ್ಥೆಯ ಕ್ಯಾಂಟೀನ್‌ ಒಂದರ ಗೋಡೆಗಳ ಮೇಲೆ ‘ಸಸ್ಯಾಹಾರಿಗಳಿಗೆ ಮಾತ್ರ’ ಎಂಬ ಪೋಸ್ಟರ್‌ಗಳನ್ನು ಅಂಟಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ದೇಶದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಬಾಂಬೆ ಐಐಟಿಯಲ್ಲಿ ಆಹಾರ ತಾರತಮ್ಯದ ಪೋಸ್ಟರ್‌ ಅಂಟಿಸಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ವಾರ ಬಾಂಬೆ ಐಐಟಿ ಹಾಸ್ಟೆಲ್ 12ರ ಕ್ಯಾಂಟೀನ್‌ನ ಗೋಡೆಗಳ ಮೇಲೆ ‘ಸಸ್ಯಾಹಾರಿಗಳಿಗೆ ಮಾತ್ರ ಇಲ್ಲಿ ಕುಳಿತುಕೊಳ್ಳಲು ಅವಕಾಶವಿದೆ’ ಎಂಬ ಪೋಸ್ಟರ್‌ಗಳನ್ನು ಕಳೆದ ವಾರ ಅಂಟಿಸಲಾಗಿತ್ತು ಮತ್ತು ಅದರ ಭಾವಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಸ್ಟರ್‌ಗಳ ಬಗ್ಗೆ ತಿಳಿದಿದ್ದರೂ, ಐಐಟಿ ಕ್ಯಾಂಟೀನ್‌ನಲ್ಲಿ ಯಾರು ಅಂಟಿಸಿದ್ದಾರೆ ಎಂಬುದು ನಮಗೆ ತಿಳಿದಿಲ್ಲ. ವಿವಿಧ ವರ್ಗದ ಆಹಾರ ಸೇವಿಸುವ ಜನರಿಗೆ ನಿಗದಿತ ಆಸನಗಳಿಲ್ಲ ಮತ್ತು ಪೋಸ್ಟರ್‌ಗಳನ್ನು ಯಾರು ಹಾಕಿದ್ದಾರೆ ಎಂಬ ಬಗ್ಗೆ ಸಂಸ್ಥೆಗೆ ತಿಳಿದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಈ ಸುದ್ದಿ ಓದಿದ್ದೀರಾ? 500 ಜನಕ್ಕೆ ಒಂದೇ ಕೊಠಡಿ, ಪತಿ-ಪುತ್ರನ ಶವ ನೋಡಬೇಕು; ಮಣಿಪುರ ಸಂತ್ರಸ್ತ ಶಿಬಿರಗಳಲ್ಲಿನ ಕರಾಳ ಅನುಭವಗಳು

ಐಐಟಿ ಸಂಸ್ಥೆಗಳಲ್ಲಿ ದಲಿತ ಹಾಗೂ ಶೋಷಿತ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪ್ರತಿನಿಧಿಸಿಸುವ ವಿದ್ಯಾರ್ಥಿ ಸಂಘಟನೆ ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ (ಎಪಿಪಿಎಸ್‌ಸಿ) ಘಟನೆಯನ್ನು ಖಂಡಿಸಿ ಪೋಸ್ಟರ್‌ಗಳನ್ನು ಹರಿದು ಹಾಕಿದೆ.

“ಹಾಸ್ಟೆಲ್‌ನ ಪ್ರಧಾನ ಕಾರ್ಯದರ್ಶಿಗೆ ಆರ್‌ಟಿಐಗಳು ಇಮೇಲ್‌ ಮೂಲಕ ಸಂಸ್ಥೆಯಲ್ಲಿ ಆಹಾರ ಪ್ರತ್ಯೇಕತೆಗೆ ಯಾವುದೇ ನೀತಿಯಿಲ್ಲ ಎಂದು ಬಹಿರಂಗಪಡಿಸಿದ್ದರೂ, ಕೆಲವರು ಮಾಂಸಾಹಾರ ವಿದ್ಯಾರ್ಥಿಗಳನ್ನು ಪ್ರತ್ಯೇಕಿಸಲು ಹಾಗೂ ‘ಸಸ್ಯಾಹಾರಿಗಳು ಮಾತ್ರ’ ಎಂಬ ನಾಮಫಲಕ ಅಂಟಿಸಿ ತಾರತಮ್ಯ ಮನಸ್ಥಿತಿ ಪ್ರದರ್ಶಿಸಿದ್ದಾರೆ” ಎಂದು ಎಪಿಪಿಎಸ್‌ಸಿ ಖಂಡಿಸಿದೆ.

ಘಟನೆಯ ನಂತರ ಹಾಸ್ಟೆಲ್‌ನ ಪ್ರಧಾನ ಕಾರ್ಯದರ್ಶಿ ಎಲ್ಲ ವಿದ್ಯಾರ್ಥಿಗಳಿಗೆ ಇಮೇಲ್ ಕಳುಹಿಸಿದ್ದು,”ಹಾಸ್ಟೆಲ್‌ನ ಮೆಸ್‌ನಲ್ಲಿ ಜೈನ್ ಸಮುದಾಯದ ಆಹಾರ ವಿತರಣೆಗೆ ಪ್ರತ್ಯೇಕ ಕೌಂಟರ್ ಇದೆ. ಆದರೆ ಜೈನ ಆಹಾರ ಸೇವಿಸುವವರಿಗೆ ಗೊತ್ತುಪಡಿಸಿದ ಪ್ರತ್ಯೇಕ ಸ್ಥಳವಿಲ್ಲ. ಕೆಲವರು ಜೈನ ಸಮುದಾಯವರಿಗೆ ಪ್ರತ್ಯೇಕ ಸ್ಥಳವಿದೆ ಎಂದುಕೊಂಡು ಮಾಂಸಾಹಾರ ಆಹಾರ ತರುವ ವ್ಯಕ್ತಿಗಳನ್ನು ಆ ಪ್ರದೇಶಗಳಲ್ಲಿ ಕುಳಿತುಕೊಳ್ಳಲು ಅನುಮತಿಸುತ್ತಿರಲಿಲ್ಲ. ಆದರೆ ಇಂತಹ ನಡವಳಿಕೆಯು ಸ್ವೀಕಾರಾರ್ಹವಲ್ಲ ಮತ್ತು ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿದೆ ಎಂಬ ಕಾರಣಕ್ಕಾಗಿ ಯಾವುದೇ ವಿದ್ಯಾರ್ಥಿಯನ್ನು ಯಾವುದೇ ಪ್ರದೇಶದಿಂದ ನಿರಾಕರಿಸುವ ಹಕ್ಕನ್ನು ಯಾರೂ ಹೊಂದಿರುವುದಿಲ್ಲ. ಇಂತಹ ಘಟನೆ ಮರುಕಳಿಸಿದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...