ʼಆಜ್ ತಕ್ʼನ ನಿರೂಪಕ ಸುಧೀರ್ ಚೌಧರಿ ಕಾರ್ಯಕ್ರಮ ರದ್ದುಗೊಳಿಸಿದ ಐಐಟಿ-ಬಾಂಬೆ

Date:

ಆಜ್‌ ತಕ್‌ ನ ನಿರೂಪಕ ಸುಧೀರ್‌ ಚೌಧರಿ ಅವರನ್ನು ಇ-ಸಮ್ಮಿಟ್‌ 2024 ರಲ್ಲಿ ರವಿವಾರ ಭಾಷಣ ನೀಡಲು ಅಹ್ವಾನಿಸಿದ್ದ ಐಐಟಿ-ಬಾಂಬೆ, ಆದಿವಾಸಿಗಳು ಮತ್ತು ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಕುರಿತಂತೆ ಚೌಧರಿ ಅವರ ಹೇಳಿಕೆಗಳಿಗೆ ವಿದ್ಯಾರ್ಥಿಗಳ ಆಕ್ಷೇಪದ ಹಿನ್ನೆಲೆಯಲ್ಲಿ ಅವರ ಭಾಷಣವನ್ನು ಸಂಸ್ಥೆ ರದ್ದುಗೊಳಿಸಿದೆ.

ಸಂಸ್ಥೆಯ ಸಭಾಂಗಣದಲ್ಲಿ ಚೌಧರಿ ಭಾಷಣ ನೀಡಬೇಕಿತ್ತು, ಆದರೆ ಅವರ ಸ್ಥಾನದಲ್ಲಿ ಶಾಪ್‌ಕ್ಲೂಸ್‌ ಸ್ಥಾಪಕಿ ರಾಧಿಕಾ ಅಗರ್ವಾಲ್‌ ಅವರನ್ನು ಸಂಸ್ಥೆ ಆಹ್ವಾನಿಸಿದ ಕಾರಣ ಅವರು ಭಾಷಣ ನೀಡಿದ್ದಾರೆ.

ಕಳೆದ ಶನಿವಾರ ಆರಂಭಗೊಂಡ ಈ ಕಾರ್ಯಕ್ರಮವನ್ನು ವಿದ್ಯಾರ್ಥಿ ಸಂಘಟನೆ ಇ-ಸೆಲ್‌ ಆಯೋಜಿಸಿತ್ತು. ಆದರೆ ಕಾರ್ಯಕ್ರಮದ ಭಾಷಣಕಾರರ ಕುರಿತ ಅಂತಿಮ ನಿರ್ಧಾರವನ್ನು ಸಂಸ್ಥೆಯ ಆಡಳಿತ ತೆಗೆದುಕೊಳ್ಳುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

ಚೌಧರಿ ಈ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಮತ್ತು ಉದ್ಯಮಶೀಲತೆಯ ಕುರಿತು ಮಾತನಾಡಬೇಕಿತ್ತು. ಆದರೆ ಅವರ ಭಾಷಣ ಕೈಬಿಡಲಾಗಿರುವ ಕುರಿತು ಅವರಿಗೆ ಶನಿವಾರ ರಾತ್ರಿ ಮಾಹಿತಿ ನೀಡಲಾಯಿತು.

ಜನವರಿ 31ರ ತಮ್ಮ ಪ್ರೈಮ್‌ ಟೈಮ್‌ ಶೋ “ಬ್ಲ್ಯಾಕ್‌ ಎಂಡ್‌ ವೈಟ್‌”ನಲ್ಲಿ ಈಡಿಯಿಂದ ಬಂಧಿತ ಹೇಮಂತ್‌ ಸೊರೇನ್‌ ಕುರಿತು ಪ್ರತಿಕ್ರಿಯಿಸಿದ್ದ ಚೌಧರಿ, ಸೊರೇನ್‌ ಮತ್ತವರ ಕುಟುಂಬ “ಆದಿವಾಸಿಗಳಲ್ಲ” ಏಕೆಂದರೆ ಅವರು ದೊಡ್ಡ ಬಂಗಲೆಗಳಲ್ಲಿ ವಾಸಿಸುತ್ತಾರೆ ಎಂದಿದ್ದರು.

ಸೊರೇನ್‌ ಜೈಲಿನಲ್ಲಿ ದಿನದೂಡಬೇಕಾದ ಕುರಿತು ಪ್ರತಿಕ್ರಿಯಿಸಿದ್ದ ಅವರು “ಕಾಡಿನಲ್ಲಿ ವಾಸಿಸುವ ಆದಿವಾಸಿಯಂತೆ 20, 30, 40 ವರ್ಷ ಹಿಂದೆ ಹೋಗುವುದು,” ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...