ಬಾಂಬೆ ಐಐಟಿ | ಸಸ್ಯಾಹಾರಿಗಳಿಗೆ ಮೀಸಲಾದ ಟೇಬಲ್‌ಗಳ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಗೆ ₹10 ಸಾವಿರ ದಂಡ

Date:

ಸಸ್ಯಾಹಾರಿಗಳಿಗೆ ಟೇಬಲ್‌ಗಳನ್ನು ಮೀಸಲಿಡುವುದನ್ನು ವಿರೋಧಿಸಿದ ವಿದ್ಯಾರ್ಥಿಯೊಬ್ಬನಿಗೆ ಬಾಂಬೆ ಐಐಟಿ 10 ಸಾವಿರ ರೂಪಾಯಿ ದಂಡ ವಿಧಿಸಿದೆ.

ಜುಲೈನಲ್ಲಿ ಸಸ್ಯಾಹಾರಿಗಳಿಗೆ ಅನಧಿಕೃತವಾಗಿ ಮೀಸಲಿಟ್ಟ ಕೆಲವು ಪ್ರದೇಶಗಳ ಅವ್ಯವಸ್ಥೆಯ ಕುರಿತು ಸಂಸ್ಥೆಯಲ್ಲಿ ವಿವಾದವು ಭುಗಿಲೆದ್ದಿತ್ತು.

ಹಾಸ್ಟೆಲ್ ಮೆಸ್‌ನ ಪ್ರಧಾನ ಕಾರ್ಯದರ್ಶಿ ಜುಲೈನಲ್ಲಿ ಇಮೇಲ್‌ ಮೂಲಕ ಯಾವುದೇ ಪ್ರದೇಶವನ್ನು ಯಾರಿಗೂ ಮೀಸಲಿಡಲಾಗುವುದಿಲ್ಲ ಎಂದು ತಿಳಿಸಿದ್ದರು. ಆದಾಗ್ಯೂ, ಸೆಪ್ಟೆಂಬರ್ 27 ರಂದು ಇನ್ನೊಂದು ಇಮೇಲ್‌ನಲ್ಲಿ “ಮೆಸ್ ಕೌನ್ಸಿಲ್ ವಿದ್ಯಾರ್ಥಿಗಳಿಗೆ, ಪ್ರತಿಯೊಬ್ಬರೂ ಶಾಂತಿಯುತ ವಾತಾವರಣದಲ್ಲಿ ತಮ್ಮ ಊಟವನ್ನು ಆನಂದಿಸಲು ಈ ಉಪಕ್ರಮವನ್ನು ಬೆಂಬಲಿಸಲು ನಾವು ಎಲ್ಲ ವಿದ್ಯಾರ್ಥಿಗಳನ್ನು ವಿನಂತಿಸುತ್ತೇವೆ. ಎಲ್ಲರಿಗೂ ಆರಾಮದಾಯಕ ಊಟ ನೀಡುವುದು ನಮ್ಮ ಮೆಸ್‌ ವ್ಯವಸ್ಥೆಯ ಜವಾಬ್ದಾರಿಯಾಗಿದೆ. ಊಟದ ಸಮಯದಲ್ಲಿ ಮಾಂಸಾಹಾರ ಸೇವಿಸದ ಕೆಲವರಿದ್ದಾರೆ. ಅವರ ಆರೋಗ್ಯದ ಹಿತದೃಷ್ಟಿಯಿಂದ ಮೆಸ್‌ನಲ್ಲಿ 6 ಟೇಬಲ್‌ಗಳನ್ನು ಗೊತ್ತುಪಡಿಸುವುದು ಅವಶ್ಯಕವಾಗಿದೆ” ಎಂದು ವಿದ್ಯಾರ್ಥಿಗಳಿಗೆ ತಿಳಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪೋಸ್ಟರ್‌ ವಿವಾದದ ನಂತರ ಸಸ್ಯಾಹಾರಿಗಳಿಗೆ ಪ್ರತ್ಯೇಕ ಸ್ಥಳ ಮೀಸಲಿಟ್ಟ ಬಾಂಬೆ ಐಐಟಿ: ಮತ್ತೊಂದು ವಿವಾದ

ಈ ಇಮೇಲ್‌ ನೋಟಿಸ್‌ನಿಂದ, ಕ್ಯಾಂಪಸ್‌ನಲ್ಲಿ ಹಲವಾರು ವಿದ್ಯಾರ್ಥಿ ಸಂಘಟನೆಗಳು ಆಹಾರ ತಾರತಮ್ಯದ ವಿಷಯವನ್ನು ಪ್ರಸ್ತಾಪಿಸಿ ಆಡಳಿತ ಮಂಡಳಿ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದ್ದವು.

ಮಂಗಳವಾರ (ಅ.03), ಬಾಂಬೆ ಐಐಟಿ ಹಾಸ್ಟೆಲ್ 12, 13 ಮತ್ತು 14 ರ ಮೆಸ್ ಕೌನ್ಸಿಲ್ ‘ಅಶಿಸ್ತಿನ ನಡವಳಿಕೆ’ ಮತ್ತು ‘ಅವ್ಯವಸ್ಥೆಯ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹಾಸ್ಟೆಲ್ 12ರ ವಿದ್ಯಾರ್ಥಿಯೊಬ್ಬನಿಗೆ 10,000 ರೂ. ದಂಡ ವಿಧಿಸಲು ನಿರ್ಧರಿಸಿದೆ. ವಿದ್ಯಾರ್ಥಿಯು ಇತರ ಇಬ್ಬರೊಂದಿಗೆ ಸಸ್ಯಾಹಾರಕ್ಕಾಗಿ ನಿಗದಿಪಡಿಸಿದ ಜಾಗದಲ್ಲಿ ಮಾಂಸಾಹಾರಿ ಆಹಾರವನ್ನು ಸೇವಿಸಿ ಆಹಾರ ಸೇವಿಸುವ ಸ್ಥಳವನ್ನು ಪ್ರತ್ಯೇಕಿಸುವುದನ್ನು ವಿರೋಧಿಸಿದ್ದಕ್ಕಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಲಾಗಿದೆ.

ಪ್ರತಿಭಟನೆ ವ್ಯಕ್ತಪಡಿಸಿದ ಇನ್ನಿಬ್ಬರನ್ನು ಗುರುತಿಸಿದ ನಂತರ ಅವರ ವಿರುದ್ಧವೂ ಶಿಸ್ತುಕ್ರಮವನ್ನು ಕೈಗೊಳ್ಳಲಾಗುವುದು ಎಂದು ಮೆಸ್ ಕೌನ್ಸಿಲ್ ತಿಳಿಸಿದೆ.

ಅಕ್ಟೋಬರ್ 2 ರಂದು ದಲಿತ ಹಾಗೂ ಶೋಷಿತ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪ್ರತಿನಿಧಿಸುವ ವಿದ್ಯಾರ್ಥಿ ಸಂಘಟನೆ ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ (ಎಪಿಪಿಎಸ್‌ಸಿ) ಟ್ವಿಟರ್‌ನಲ್ಲಿ ಮೆಸ್ ಕೌನ್ಸಿಲ್ ಸಭೆಯ ನಡಾವಳಿಗಳನ್ನು ಖಂಡಿಸಿದೆ.

“ಈ ಕೃತ್ಯವು ವಿದ್ಯಾರ್ಥಿಗಳ ಸಲಹೆಯನ್ನು ಧಿಕ್ಕರಿಸಿ ಮೆಸ್‌ನ ವ್ಯವಸ್ಥೆಯೊಳಗೆ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವ ಪೂರ್ವಯೋಜಿತ ಪ್ರಯತ್ನವಾಗಿದೆ. ಆಧುನಿಕ ಕಾಲದಲ್ಲಿ ಅಸ್ಪೃಶ್ಯತೆಯನ್ನು ಎತ್ತಿಹಿಡಿಯಲು ಖಾಪ್ ಪಂಚಾಯತ್ ಕಾರ್ಯನಿರ್ವಹಿಸುವಂತೆಯೇ ಇದೆ” ಎಂದು ಅದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...