ಇರಾನ್ ಯುದ್ಧ ಪರಿಣಾಮ: ಭಾರತದಲ್ಲಿ ಗೃಹ ಬಳಕೆಯ ಎಲ್‌ಪಿಜಿ 60 ರೂ. ಏರಿಕೆ

Date:

ಭಾರತದಲ್ಲಿ ಮಾರ್ಚ್‌ 7ರ ಶನಿವಾರದಿಂದ ಜಾರಿಗೆ ಬರುವಂತೆ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿದೆ. 14.2 ಕೆಜಿ ತೂಕದ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ನ ಬೆಲೆ 60 ರೂ. ಏರಿಕೆ ಏರಿಕೆಯಾಗಿದ್ದರೆ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 115 ರೂ. ಹೆಚ್ಚಳವಾಗಿದೆ.

ಗೃಹ ಬಳಕೆಯ ಸಿಲಿಂಡರ್‌ ಬೆಲೆ ಹೆಚ್ಚಳವು ದೇಶವಾಸಿಗಳ ಮೇಲೆ ಪರಿಣಾಮ ಬೀರಿದೆ. ಅಂತೆಯೇ, ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆಯು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಸಣ್ಣ ವಾಣಿಜ್ಯ ಸಂಸ್ಥೆಗಳಂತಹ ವ್ಯವಹಾರಗಳ ಮೇಲೆ ಪರಿಣಾಮ ಬೀರುತ್ತಿದೆ.

ಮೂಲದ ಪ್ರಕಾರ, ದೆಹಲಿಯಲ್ಲಿ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 853 ರೂ.ಗಳಿಂದ 913 ರೂ.ಗಳಿಗೆ ಏರಿಕೆಯಾಗಿದೆ. ಮುಂಬೈನಲ್ಲಿ, 852.50 ರೂ.ಗಳಿಂದ 912.50 ರೂ.ಗೆ ಏರಿಕೆ ಕಂಡಿದೆ. ಕೋಲ್ಕತ್ತಾದಲ್ಲಿ 879 ರೂ.ಗಳಿಂದ 930 ರೂ.ಗಳಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ 868.50 ರೂ.ಗಳಿಂದ 928.50 ರೂ.ಗಳಿಗೆ ಏರಿಕೆಯಾಗಿದ್ದರೆ, ಬೆಂಗಳೂರಿನಲ್ಲಿ 855.50ಗಳಿಂದ 905.50 ರೂ.ಗಳಿಗೆ ಏರಿಕೆ ಕಂಡಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ದೆಹಲಿಯಲ್ಲಿ 1,768.50 ರೂ.ಗಳಿಂದ 1,883 ರೂ.ಗೆ, ಮುಂಬೈನಲ್ಲಿ ಬೆಲೆ 1,720.50 ರೂ.ಗಳಿಂದ 1835 ರೂ.ಗೆ, ಕೋಲ್ಕತ್ತಾದಲ್ಲಿ 1,875.50 ರೂ.ಗಳಿಂದ 1,990 ರೂ.ಗೆ, ಚೆನ್ನೈನಲ್ಲಿ 1,929 ರೂ.ಗಳಿಂದ 2,043.50 ರೂ.ಗೆ ಹಾಗೂ ಬೆಂಗಳೂರಿನಲ್ಲಿ 1,814 ರೂ.ಗಳಿಂದ 1,929 ರೂ.ಗೆ ಏರಿಕೆಯಾಗಿದೆ.

ಇರಾನ್‌ ಮೇಲೆ ಇಸ್ರೇಲ್-ಅಮೆರಿಕ ಜಂಟಿ ದಾಳಿ ನಡೆಸಿ, ಯುದ್ಧ ಆರಂಭಿಸಿದ ಪರಿಣಾಮವಾಗಿ ಭಾರತದಲ್ಲಿ ಇಂಧನ ಕೊರತ ಎದುರಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಬೆಲೆಯೂ ಏರಿಕೆಯಾಗಿದೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...