ಸುಪ್ರೀಂ ಕೋರ್ಟ್ ಸಿಜೆಐಗೆ ಚಪ್ಪಲಿ ಎಸೆದ ಘಟನೆ; ದೇಶಾದ್ಯಂತ ವಕೀಲರ ಪ್ರತಿಭಟನೆಗೆ ಕರೆ, ತೆಲಂಗಾಣದಲ್ಲಿ ಕೋರ್ಟ್ ಕಲಾಪ ಬಹಿಷ್ಕಾರ

Date:

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ನಡೆದ ಚಪ್ಪಲಿ ಎಸೆದ ಘಟನೆಯ ವಿರುದ್ಧ ದೇಶದಾದ್ಯಂತ ವಕೀಲರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಕ್ಟೋಬರ್ 7 ಮತ್ತು 8ರಂದು ರಾಷ್ಟ್ರಮಟ್ಟದ ಪ್ರತಿಭಟನೆ ನಡೆಸಲು ಕರೆ ನೀಡಿವೆ. ತೆಲಂಗಾಣದ ಹನುಮಕೊಂಡ ವಕೀಲರ ಸಂಘ ಸೇರಿದಂತೆ ಅನೇಕ ರಾಜ್ಯಗಳ ಬಾರ್ ಅಸೋಸಿಯೇಷನ್‌ಗಳು ಕೋರ್ಟ್ ಕಲಾಪ ಬಹಿಷ್ಕಾರ ಘೋಷಿಸಿದ್ದು, ನ್ಯಾಯಾಂಗದ ಗೌರವ ಮತ್ತು ಸ್ವಾಯತ್ತತೆಯನ್ನು ರಕ್ಷಿಸಲು ಇದು ಅಗತ್ಯ ಕ್ರಮವೆಂದು ತಿಳಿಸಿವೆ.

ನ್ಯಾಯಾಂಗದ ಗೌರವಕ್ಕೆ ಧಕ್ಕೆ ತರುವ ಈ ಘಟನೆ ಸೋಮವಾರ (ಅಕ್ಟೋಬರ್ 6) ನವದೆಹಲಿಯ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ವಿಚಾರಣೆಯ ವೇಳೆ ವಕೀಲ ರಾಕೇಶ್ ಕಿಶೋರ್ ಎಂಬಾತ ಸಿಜೆಐ ಗವಾಯಿ ಅವರತ್ತ ಶೂ ಎಸೆಯಲು ಪ್ರಯತ್ನಿಸಿದರು. ಭದ್ರತಾ ಸಿಬ್ಬಂದಿ ತಕ್ಷಣ ಕ್ರಮ ಕೈಗೊಂಡು ಅವರನ್ನು ಬಂಧಿಸಿದರೂ, ಸುಪ್ರೀಂ ಕೋರ್ಟ್ ರಜಿಸ್ಟ್ರಿಯು ಯಾವುದೇ ದೂರು ದಾಖಲಿಸದೆ ಬಿಡುಗಡೆ ಮಾಡಿರುವುದು ವಿವಾದ ಹುಟ್ಟಿಸಿದೆ.

ಈ ಘಟನೆಯನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಗಂಭೀರವಾಗಿ ಪರಿಗಣಿಸಿ ಕಿಶೋರ್ ಅವರ ವಕೀಲ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. BCI ಪ್ರಕಟಣೆಯಲ್ಲಿ, ಈ ಕೃತ್ಯ “ನ್ಯಾಯಾಂಗದ ಗೌರವಕ್ಕೆ ವಿರುದ್ಧವಾದ ಅಸಹ್ಯ ಕೃತ್ಯ” ಎಂದು ಖಂಡಿಸಿದೆ. ಸುಪ್ರೀಂ ಕೋರ್ಟ್‌ನ ಒಳಗೆ ನಡೆದ ಈ ರೀತಿಯ ಕೃತ್ಯವು ಕೇವಲ ನ್ಯಾಯಾಧೀಶರ ಮೇಲೆ ನಡೆದ ದಾಳಿ ಅಲ್ಲ, ಭಾರತದ ನ್ಯಾಯಾಂಗದ ಮೂಲಭೂತ ಮೌಲ್ಯಗಳ ಮೇಲಿನ ಆಘಾತವೆಂದು ವಕೀಲರ ಸಂಘಟನೆಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಶನ್ ಫಾರ್ ಜಸ್ಟಿಸ್ ಈ ಘಟನೆಯನ್ನು “ಪ್ರಜಾಸತ್ತಾತ್ಮಕ ಸಂವೇದನೆಗಳ ಕುಸಿತ” ಎಂದು ಆಘಾತ ವ್ಯಕ್ತಪಡಿಸಿ, ಎಲ್ಲ ವಕೀಲರು ಶಾಂತ ಪ್ರತಿಭಟನೆಗಳ ಮೂಲಕ ನ್ಯಾಯಾಂಗದ ಬೆಂಬಲಕ್ಕೆ ನಿಲ್ಲಬೇಕು ಎಂದು ಕರೆ ನೀಡಿದೆ.

ತೆಲಂಗಾಣದಲ್ಲಿ ಕಲಾಪ ಬಹಿಷ್ಕಾರ

ಪ್ರತಿಭಟನೆಯ ಭಾಗವಾಗಿ ತೆಲಂಗಾಣದ ಹನುಮಕೊಂಡ ಜಿಲ್ಲಾ ವಕೀಲರ ಸಂಘ ಅಕ್ಟೋಬರ್ 7ರಂದು ಕಲಾಪ ಬಹಿಷ್ಕಾರ ನಡೆಸಲು ನಿರ್ಧರಿಸಿದೆ. ಸಂಘದ ಕಾರ್ಯಕಾರಿ ಸಮಿತಿಯು ಸಭೆ ಸೇರಿ “ಸುಪ್ರೀಂ ಕೋರ್ಟ್ ಸಿಜೆಐ ಮೇಲೆ ನಡೆದ ದಾಳಿ ಭಾರತೀಯ ನ್ಯಾಯಾಂಗದ ಮೇಲೆ ನಡೆದ ದಾಳಿ” ಎಂದು ಘೋಷಿಸಿ, ಎಲ್ಲ ಸದಸ್ಯರು ಒಂದು ದಿನದ ಕಾಲ ಕೋರ್ಟ್ ಕಾರ್ಯದಿಂದ ದೂರ ಇರಬೇಕೆಂದು ಕರೆ ನೀಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಸೋಮಣ್ಣ, ಡಿಕೆಶಿ ಉದ್ಧಟತನ ಅಕ್ಷಮ್ಯ

ಇದೇ ವೇಳೆ, ‘ತೆಲಂಗಾಣ ನ್ಯಾಯಾಧೀಶರ ಸಂಘ ಕೂಡ ಈ ದಾಳಿಯನ್ನು ಖಂಡಿಸಿ, “ಇಂತಹ ಕೃತ್ಯಗಳು ನ್ಯಾಯಾಂಗದ ಪ್ರಾಮಾಣಿಕತೆಗೆ ಧಕ್ಕೆ ತರುತ್ತವೆ ಮತ್ತು ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಅಪಾಯ ಉಂಟುಮಾಡುತ್ತವೆ” ಎಂದು ಹೇಳಿದೆ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಅನೇಕ ರಾಜ್ಯಗಳ ವಕೀಲರ ಸಂಘಗಳೂ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕಿಶೋರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿವೆ.

ಘಟನೆಯ ನಂತರ ಸಿಜೆಐ ಬಿ ಆರ್ ಗವಾಯಿ ಶಾಂತ ಪ್ರತಿಕ್ರಿಯೆ ನೀಡುತ್ತಾ, “ಈ ರೀತಿಯ ಘಟನೆಗಳಿಂದ ನನ್ನ ಕೆಲಸದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ; ನ್ಯಾಯ ಮತ್ತು ಸಂವಿಧಾನದ ಮಾರ್ಗದಲ್ಲೇ ನಾನು ಮುಂದುವರೆಯುತ್ತೇನೆ” ಎಂದು ಹೇಳಿದ್ದಾರೆ. ಅವರ ಈ ನಿಲುವು ನ್ಯಾಯಾಂಗದ ಶಿಸ್ತು, ತಾಳ್ಮೆ ಮತ್ತು ಪ್ರಜಾಸತ್ತಾತ್ಮಕ ಬದ್ಧತೆಯ ಸಂಕೇತವೆಂದು ಕಾನೂನು ವಲಯ ಪ್ರಶಂಸಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...