ಭಾರತೀಯ ಕ್ರಿಕೆಟ್ ತಂಡವು ತವರು ನೆಲದಲ್ಲೇ ನ್ಯೂಜಿಲೆಂಡ್ ಜೊತೆಗಿನ 5 ಪಂದ್ಯಗಳ ಟಿ20 ಟೂರ್ನಿ ಆಡುತ್ತಿದೆ. ಟೂರ್ನಿಯಲ್ಲಿ ಈವರೆಗೆ ಆಡಿರುವ 2 ಪಂದ್ಯಗಳನ್ನೂ ‘ಟೀಮ್ ಇಂಡಿಯಾ’ ಗೆದ್ದಿದೆ. ಇಂದು (ಭಾನುವಾರ) 3ನೇ ಪಂದ್ಯ ನಡೆಯಲಿದ್ದು, ಈ ಪಂದ್ಯವನ್ನೂ ಗೆದ್ದರೆ, ಟೂರ್ನಿಯನ್ನು ಟೀಮ್ ಇಂಡಿಯಾ ಗೆಲುವು ಸಾಧಿಸಲಿದೆ.
3ನೇ ಗೆಲುವಿಗಾಗಿ ಭಾರತ ತಂಡ ಭಾರೀ ಕಸರತ್ತು ನಡೆಯುತ್ತಿದೆ. ತಂಡದಲ್ಲಿ ಕೊಂಚ ಬದಲಾವಣೆಗೂ ಮುಂದಾಗಿದೆ ಎಂದು ಹೇಳಲಾಗಿದೆ. ಗುವಾಹಟಿಯಲ್ಲಿ ನಡೆಯಲಿರುವ ಪಂದ್ಯದಲ್ಲಿ ವೇಗೀ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಆಡಲಿದ್ದಾರೆ ಎಂದು ತಿಳಿದುಬಂದಿದೆ.
ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ ಬುಮ್ರಾ ಕ್ರೀಡಾಂಗಣಕ್ಕೆ ಇಳಿದಿರಲಿಲ್ಲ. ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್ಗಾಗಿ ಕೆಲಸದ ಒತ್ತಡವನ್ನು ನಿಭಾಯಿಸಲು ಅವರು ವಿಶ್ರಾಂತಿ ಪಡೆದಿದ್ದರು. ಆದಾಗ್ಯೂ, ಈ ಟೂರ್ನಿಯನ್ನು ಟೀಮ್ ಇಂಡಿಯಾ ಗೆಲ್ಲುವ ಉದ್ದೇಶದಿಂದ ಬುಮ್ರಾ ಮತ್ತೆ ತಂಡಕ್ಕೆ ಮರಳಲಿದ್ದಾರೆ ಎನ್ನಲಾಗಿದೆ.
ಅವರ ಸೇರ್ಪಡೆಯು ಟೀಮ್ ಇಂಡಿಯಾದ ನ್ಯೂ-ಬಾಲ್ ವೇಗವನ್ನು ಹೆಚ್ಚಿಸಲಿದೆ. ಇದು ನ್ಯೂಜಿಲೆಂಡ್ ತಂಡಕ್ಕೆ ಬೆದರಿಕೆಯನ್ನು ತೀಕ್ಷ್ಣಗೊಳಿಸುತ್ತದೆ. ಬುಮ್ರಾ ಮರಳಿದರೆ, ತಂಡದ ವೇಗಿ ಬೌಲರ್ಗಳ ವಿಭಾಗದಲ್ಲಿ ಬದಲಾವಣೆ ಮಾಡಬೇಕಾಗುತ್ತದೆ. ಅದಕ್ಕಾಗಿ, ಅರ್ಶದೀಪ್ ಸಿಂಗ್ ಅವರು ತಂಡದಿಂದ ಹೊರಗುಳಿಯುವ ಸಾಧ್ಯತೆ ಇರಲಿದೆ.
ಇನ್ನು, ಬೆರಳಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಅಕ್ಷರ್ ಪಟೇಲ್ ಬದಲಿಗೆ ರಿಂಕು ಸಿಂಗ್ ಆಡುವ ಸಾಧ್ಯತೆಗಳಿವೆ. ಆದಾಗ್ಯೂ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ತಂಡಕ್ಕೆ ಮರಳುವ ಸಾಧ್ಯತೆಗಳಿಲ್ಲ ಎನ್ನಲಾಗಿದೆ. ಅಂತೆಯೇ, ಬ್ಯಾಟಿಂಗ್ ವಿಭಾಗದಲ್ಲಿ ತಿಲಕ್ ವರ್ಮಾ ಅನುಮಸ್ಥಿತಿ ಇದೆ. ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ತಂಡದಲ್ಲಿ ಮುನ್ನಡೆಯಲಿದ್ದಾರೆ.
ಭಾನುವಾರದ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ; ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ಸಿ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ ಇರಲಿದ್ದಾರೆ!




