ಮುಸಲ್ಮಾನರಿಗೆ ವೋಟ್ ಜಿಹಾದ್ ನಡೆಸುವಂತೆ ಇಂಡಿಯಾ ಒಕ್ಕೂಟದಿಂದ ಕರೆ: ಪ್ರಧಾನಿ ಮೋದಿ ಮತ್ತೆ ದ್ವೇಷ ಭಾಷಣ

Date:

ರಾಜಸ್ಥಾನದಲ್ಲಿ ಮುಸಲ್ಮಾನರ ವಿರುದ್ಧ ದ್ವೇಷ ಭಾಷಣಗೈದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುವಂತೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಮತ್ತೊಮ್ಮೆ ದ್ವೇಷ ಭಾಷಣಗೈದಿದ್ದಾರೆ.

“ಇಂಡಿಯಾ ಮೈತ್ರಿಕೂಟದ ಇನ್ನೊಂದು ರಣ ನೀತಿ ಹೊರಗಡೆ ಬಂದಿದೆ. ಅದರ ನಾಯಕರೇ ದೇಶದ ಮುಂದಿಟ್ಟಿದ್ದಾರೆ. ಇಂಡಿಯಾ ಒಕ್ಕೂಟವು ಮುಸಲ್ಮಾನರಿಗೆ ವೋಟ್ ಜಿಹಾದ್ ನಡೆಸುವಂತೆ ಕರೆ ನೀಡಿದೆ‌.” ಎಂದು ಪ್ರಧಾನಿ ನರೇಂದ್ರ ಮೋದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ಲವ್‌ ಜಿಹಾದ್‌, ಲ್ಯಾಂಡ್‌ ಜಿಹಾದ್‌ನಂತೆ ಇದೀಗ ವೋಟ್‌ ಜಿಹಾದ್‌ ಪ್ರಾರಂಭಿಸಲಿದ್ದಾರೆ. ಎಲ್ಲಾ ಮುಸಲ್ಮಾನರು ಒಗ್ಗಟ್ಟಾಗಿ ವೋಟ್ ಜಿಹಾದ್ ಮಾಡುವಂತೆ ಹೇಳಲಾಗಿದೆ. ವಿಪಕ್ಷಗಳ ಈ ನಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನವಾಗಿದೆ” ಎಂದು ಮೋದಿ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, “ಲವ್ ಜಿಹಾದ್ ಬಗ್ಗೆ ಕೇಳಿದ್ದೆವು, ಲ್ಯಾಂಡ್‌ ಜಿಹಾದ್‌ ಬಗ್ಗೆ ಕೇಳಿದ್ದೆವು. ಈಗ ವೋಟ್ ಜಿಹಾದ್ ಕೇಳುತ್ತಿದ್ದೇವೆ. ಅದು ಕೂಡ ಸುಶಿಕ್ಷಿತ ಮುಸ್ಲಿಂ ಕುಟುಂಬದ ಈ ಮಾತು ಹೊರಗೆ ಬಂದಿದೆ. ಸಾಮಾನ್ಯ ಮದ್ರಸಾದಿಂದ ಹೊರಬಂದ ಮಕ್ಕಳು ಇದನ್ನು ಹೇಳಿದ್ದಲ್ಲ. ಅತ್ಯಂತ ಸುಶಿಕ್ಷಿತ ಕುಟುಂಬ, ಕಾಂಗ್ರೆಸ್‌ನ ಉನ್ನತ ಸ್ಥಾನದಲ್ಲಿರುವ ಕುಟುಂಬದಿಂದ ಈ ಮಾತು ಕೇಳಿಬಂದಿದೆ. ಮುಸಲ್ಮಾನರಿಗೆ ವೋಟ್ ಜಿಹಾದ್ ನಡೆಸುವಂತೆ ಕರೆ ನೀಡಲಾಗಿದೆ ಎಂದು ಈ ಮುಸಲ್ಮಾನ ಕುಟುಂಬವು ಹೇಳಿದೆ” ಎಂದು ಪ್ರಧಾನಿ ಹೇಳಿಕೆ ನೀಡಿದ್ದಾರೆ.

“ಜಿಹಾದ್ ಎಂದರೆ ಏನು ಎಂಬುದು ನಿಮಗೆ ಗೊತ್ತಲ್ಲವೇ? ಜಿಹಾದ್ ಯಾರ ವಿರುದ್ಧ ಮಾಡಲಾಗುತ್ತದೆ. ಎಲ್ಲ ಮುಸಲ್ಮಾನರು ಒಟ್ಟಾಗಿ ವೋಟ್ ಜಿಹಾದ್ ನಡೆಸುವಂತೆ ಇಂಡಿಯಾ ಒಕ್ಕೂಟವು ಕರೆ ನೀಡಿದೆ. ವೋಟ್ ಜಿಹಾದಿನ ಮಾತುಗಳನ್ನು ಆಡುವ ಮೂಲಕ ಇಂಡಿಯಾ ಮೈತ್ರಿಕೂಟವು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಅಪಮಾನ ಮಾಡಿದೆ. ಈವರೆಗೆ ಕಾಂಗ್ರೆಸ್‌ನ ಒಬ್ಬನೇ ಒಬ್ಬ ನಾಯಕ ಇದುವರೆಗೆ ಇದನ್ನು ವಿರೋಧಿಸಿಲ್ಲ. ಮೌನ ಸಮ್ಮತಿ ನೀಡಿದ್ದಾರೆ. ವೋಟ್ ಜಿಹಾದ್‌ನ ಮಾತುಗಳು ಕಾಂಗ್ರೆಸ್‌ನ ತುಷ್ಟೀಕರಣ ನೀತಿಯನ್ನು ಮುಂದುವರಿಸಿದೆ” ಎಂದು ಪ್ರಧಾನಿ ಮೋದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ಒಂದು ಕಡೆ ಇಂಡಿಯಾ ಮೈತ್ರಿಕೂಟವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇನ್ನೊಂದು ಕಡೆ ವೋಟ್ ಜಿಹಾದ್ ನಡೆಸುವಂತೆ ಕರೆ ಕೊಡುತ್ತಿದ್ದಾರೆ. ಇಂಡಿಯಾ ಮೈತ್ರಿಕೂಟದ ಉದ್ದೇಶ ಅದೆಷ್ಟು ಭಯಾನಕ ಎಂಬುದನ್ನು ಇದರಿಂದ ತಿಳಿಯಬಹುದು” ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...