ಇಂಡಿಯಾ ಒಕ್ಕೂಟವು ಮತ ಬ್ಯಾಂಕ್‌ಗಾಗಿ ‘ಮುಜ್ರಾ ನೃತ್ಯ’ ಮಾಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ

Date:

ಇಂಡಿಯಾ ಮೈತ್ರಿಕೂಟದ ನಾಯಕರು ತಮ್ಮ ಮತ ಬ್ಯಾಂಕ್‌ಗಾಗಿ ‘ಮುಜ್ರಾ’ (ಒಂದು ಪ್ರಕಾರದ ನೃತ್ಯ) ಮಾಡುತ್ತಿದೆ ಎಂದ ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಬಿಹಾರದ ಪಾಟಲೀಪುತ್ರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ಇಂಡಿಯಾ ಮೈತ್ರಿಕೂಟ ತನ್ನ ಮತ ಬ್ಯಾಂಕ್‌ನ ಗುಲಾಮಗಿರಿಯನ್ನು ಸ್ವೀಕರಿಸಲು ಬಯಸುತ್ತದೆ. ಆದರೆ ನಮಗೆ ಸಂವಿಧಾನವು ಸರ್ವೋಚ್ಚವಾಗಿದೆ. ಯಾವುದೇ ಸಂದರ್ಭದಲ್ಲಿಯೂ ಭಾರತದ ಸಂವಿಧಾನ ಎಸ್‌ಸಿ/ಎಸ್ ಟಿ, ಒಬಿಸಿಗಳಿಗೆ ನೀಡಿರುವ ಮೀಸಲಾತಿ ಪ್ರಯೋಜನಗಳನ್ನು ಕಸಿದುಕೊಳ್ಳಲು ನಾನು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

“ನಾನು ಬಿಹಾರ, ಎಸ್‌ಸಿ/ಎಸ್‌ಟಿ/ಒಬಿಸಿ ಸಮುದಾಯಗಳಿಗೆ ಭರವಸೆ ನೀಡುತ್ತಿದ್ದೇನೆ. ಮೋದಿ ಬದುಕಿರುವವರೆಗೆ ಅವರ ಹಕ್ಕುಗಳನ್ನು ಕಸಿದುಕೊಳ್ಳಲು ನಾನು ಬಿಡುವುದಿಲ್ಲ. ಮೋದಿಗೆ ಸಂವಿಧಾನವೇ ಸರ್ವಶ್ರೇಷ್ಠ. ಮೋದಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವನೆಗಳು ಸರ್ವೋಚ್ಚ. ಇಂಡಿಯಾ ಮೈತ್ರಿಕೂಟ ತನ್ನ ಮತ ಬ್ಯಾಂಕ್‌ನ ಜೀತ ಸ್ವೀಕರಿಸಲು ಬಯಸುತ್ತದೆ. ಅವರು ಹಾಗೆ ಮಾಡಲು ಸ್ವತಂತ್ರರು. ಅವರು ಮುಜ್ರಾ (ನೃತ್ಯ) ಮಾಡಲು ಬಯಸಿದರೆ ಅವರು ಸ್ವತಂತ್ರರು. ನಾನು ಯಾವಾಗಲೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರವಾಗಿ ನಿಂತಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಭಾಷಣದಲ್ಲಿ ಪ್ರಧಾನಿ ಮೋದಿ ‘ಮುಜ್ರಾ’ ಎಂಬ ಪದವನ್ನು ಬಳಸಿದ್ದಾರೆ. ಮುಜ್ರಾ ಎಂದರೆ ಮೊಘಲರ ಆಡಳಿತದ ಕಾಲದಲ್ಲಿ ಬಂದ ಒಂದು ನೃತ್ಯದ ಪ್ರಕಾರ. ಇದನ್ನು ಮೊದಲು ಹೆಚ್ಚಾಗಿ ರಾಜರು ಮತ್ತು ಗಣ್ಯರ ಆಸ್ಥಾನಗಳಲ್ಲಿ ಮಹಿಳೆಯರು ಪ್ರದರ್ಶಿಸುತ್ತಿದ್ದರು. ನೃತ್ಯ ಪ್ರದರ್ಶನದ ಬಳಿಕ ಉಡುಗೊರೆಗಳನ್ನು ನೀಡಲಾಗುತ್ತಿತ್ತು. ಇದು 60ರ ದಶಕದ ಹಿಂದಿ ಸಿನಿಮಾಗಳಲ್ಲಿ ವ್ಯಾಪಕವಾಗಿ ಬಳಕೆಯಲ್ಲಿತ್ತು.

ತಮ್ಮ ವೋಟ್ ಬ್ಯಾಂಕ್ ಅನ್ನು ಸಂತೋಷಪಡಿಸಲು ಕಾಂಗ್ರೆಸ್ ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಸಂಬಂಧಿಸಿದ ಕಾನೂನನ್ನು ಬದಲಾಯಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದು, “ಈ ಮೊದಲು ಎಸ್‌ಸಿ/ಎಸ್‌ಟಿ/ಒಬಿಸಿಗಳು ಸಂಪೂರ್ಣ ಮೀಸಲಾತಿಯನ್ನು ಪಡೆಯುತ್ತಿದ್ದರು. ನಂತರ ಸಾವಿರಾರು ಸಂಸ್ಥೆಗಳನ್ನು ಅಲ್ಪಸಂಖ್ಯಾತ ಸಂಸ್ಥೆಗಳೆಂದು ಘೋಷಿಸಲಾಯಿತು” ಎಂದು ಮೋದಿ ಹೇಳಿದರು.

“ಭಾರತದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ಇರುವುದಿಲ್ಲ ಎಂದು ನಮ್ಮ ಸಂವಿಧಾನ ಹೇಳುತ್ತದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಧರ್ಮದ ಆಧಾರದ ಮೇಲೆ ಮೀಸಲಾತಿ ಇರುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಆರ್​​ಜೆಡಿ-ಕಾಂಗ್ರೆಸ್ ಎಸ್‌ಸಿ, ಎಸ್‌ಟಿ, ಒಬಿಸಿ ಕೋಟಾವನ್ನು ಕೊನೆಗೊಳಿಸುವ ಮೂಲಕ ತಮ್ಮ ಮತಬ್ಯಾಂಕ್‌ಗೆ ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ನೀಡಲು ಬಯಸುತ್ತಿವೆ” ಎಂದು ಮೋದಿ ಹೇಳಿಕೆ ನೀಡಿದ್ದಾರೆ.

ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ದೇಶದ ಜನರ ಸಂಪತ್ತನ್ನು ಕಸಿದುಕೊಂಡು ಅನೇಕ ಮಕ್ಕಳನ್ನು ಹೊಂದಿರುವವರಿಗೆ ಹಂಚುತ್ತದೆ ಎಂದು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈಗ ಮುಜ್ರಾ ಎಂಬ ಹೇಳಿಕೆ ನೀಡುವ ಮೂಲಕ, ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...