ಇಂಡಿಯಾ ಮೈತ್ರಿಕೂಟದ ನಾಯಕರು ತಮ್ಮ ಮತ ಬ್ಯಾಂಕ್ಗಾಗಿ ‘ಮುಜ್ರಾ’ (ಒಂದು ಪ್ರಕಾರದ ನೃತ್ಯ) ಮಾಡುತ್ತಿದೆ ಎಂದ ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಬಿಹಾರದ ಪಾಟಲೀಪುತ್ರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ಇಂಡಿಯಾ ಮೈತ್ರಿಕೂಟ ತನ್ನ ಮತ ಬ್ಯಾಂಕ್ನ ಗುಲಾಮಗಿರಿಯನ್ನು ಸ್ವೀಕರಿಸಲು ಬಯಸುತ್ತದೆ. ಆದರೆ ನಮಗೆ ಸಂವಿಧಾನವು ಸರ್ವೋಚ್ಚವಾಗಿದೆ. ಯಾವುದೇ ಸಂದರ್ಭದಲ್ಲಿಯೂ ಭಾರತದ ಸಂವಿಧಾನ ಎಸ್ಸಿ/ಎಸ್ ಟಿ, ಒಬಿಸಿಗಳಿಗೆ ನೀಡಿರುವ ಮೀಸಲಾತಿ ಪ್ರಯೋಜನಗಳನ್ನು ಕಸಿದುಕೊಳ್ಳಲು ನಾನು ಬಿಡುವುದಿಲ್ಲ” ಎಂದು ಹೇಳಿದ್ದಾರೆ.
“ನಾನು ಬಿಹಾರ, ಎಸ್ಸಿ/ಎಸ್ಟಿ/ಒಬಿಸಿ ಸಮುದಾಯಗಳಿಗೆ ಭರವಸೆ ನೀಡುತ್ತಿದ್ದೇನೆ. ಮೋದಿ ಬದುಕಿರುವವರೆಗೆ ಅವರ ಹಕ್ಕುಗಳನ್ನು ಕಸಿದುಕೊಳ್ಳಲು ನಾನು ಬಿಡುವುದಿಲ್ಲ. ಮೋದಿಗೆ ಸಂವಿಧಾನವೇ ಸರ್ವಶ್ರೇಷ್ಠ. ಮೋದಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವನೆಗಳು ಸರ್ವೋಚ್ಚ. ಇಂಡಿಯಾ ಮೈತ್ರಿಕೂಟ ತನ್ನ ಮತ ಬ್ಯಾಂಕ್ನ ಜೀತ ಸ್ವೀಕರಿಸಲು ಬಯಸುತ್ತದೆ. ಅವರು ಹಾಗೆ ಮಾಡಲು ಸ್ವತಂತ್ರರು. ಅವರು ಮುಜ್ರಾ (ನೃತ್ಯ) ಮಾಡಲು ಬಯಸಿದರೆ ಅವರು ಸ್ವತಂತ್ರರು. ನಾನು ಯಾವಾಗಲೂ ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿ ಪರವಾಗಿ ನಿಂತಿದ್ದೇನೆ” ಎಂದು ಹೇಳಿದ್ದಾರೆ.
BIG BREAKING
Narendra ‘Shameless’ Modi stoops another low 🚨
Listen how he is shamelessly using derogatory words like ‘Mujra’ for INDIA.
This man is not mentally fit to be Prime Minister but calls himself a God’s incarnation. What a shame!#LoksabhaElecetion #LokSabhaPolls pic.twitter.com/X4oNuufJqL
— Ankit Mayank (@mr_mayank) May 25, 2024
ತನ್ನ ಭಾಷಣದಲ್ಲಿ ಪ್ರಧಾನಿ ಮೋದಿ ‘ಮುಜ್ರಾ’ ಎಂಬ ಪದವನ್ನು ಬಳಸಿದ್ದಾರೆ. ಮುಜ್ರಾ ಎಂದರೆ ಮೊಘಲರ ಆಡಳಿತದ ಕಾಲದಲ್ಲಿ ಬಂದ ಒಂದು ನೃತ್ಯದ ಪ್ರಕಾರ. ಇದನ್ನು ಮೊದಲು ಹೆಚ್ಚಾಗಿ ರಾಜರು ಮತ್ತು ಗಣ್ಯರ ಆಸ್ಥಾನಗಳಲ್ಲಿ ಮಹಿಳೆಯರು ಪ್ರದರ್ಶಿಸುತ್ತಿದ್ದರು. ನೃತ್ಯ ಪ್ರದರ್ಶನದ ಬಳಿಕ ಉಡುಗೊರೆಗಳನ್ನು ನೀಡಲಾಗುತ್ತಿತ್ತು. ಇದು 60ರ ದಶಕದ ಹಿಂದಿ ಸಿನಿಮಾಗಳಲ್ಲಿ ವ್ಯಾಪಕವಾಗಿ ಬಳಕೆಯಲ್ಲಿತ್ತು.
ತಮ್ಮ ವೋಟ್ ಬ್ಯಾಂಕ್ ಅನ್ನು ಸಂತೋಷಪಡಿಸಲು ಕಾಂಗ್ರೆಸ್ ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಸಂಬಂಧಿಸಿದ ಕಾನೂನನ್ನು ಬದಲಾಯಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದು, “ಈ ಮೊದಲು ಎಸ್ಸಿ/ಎಸ್ಟಿ/ಒಬಿಸಿಗಳು ಸಂಪೂರ್ಣ ಮೀಸಲಾತಿಯನ್ನು ಪಡೆಯುತ್ತಿದ್ದರು. ನಂತರ ಸಾವಿರಾರು ಸಂಸ್ಥೆಗಳನ್ನು ಅಲ್ಪಸಂಖ್ಯಾತ ಸಂಸ್ಥೆಗಳೆಂದು ಘೋಷಿಸಲಾಯಿತು” ಎಂದು ಮೋದಿ ಹೇಳಿದರು.
पाटलिपुत्र की जनता का मूड बता रहा है कि 4 जून को बिहार के साथ पूरे देश में भाजपा-एनडीए जीत का नया रिकॉर्ड बनाने जा रहा है। pic.twitter.com/MZXkIxGJGy
— Narendra Modi (@narendramodi) May 25, 2024
“ಭಾರತದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ಇರುವುದಿಲ್ಲ ಎಂದು ನಮ್ಮ ಸಂವಿಧಾನ ಹೇಳುತ್ತದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಧರ್ಮದ ಆಧಾರದ ಮೇಲೆ ಮೀಸಲಾತಿ ಇರುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಆರ್ಜೆಡಿ-ಕಾಂಗ್ರೆಸ್ ಎಸ್ಸಿ, ಎಸ್ಟಿ, ಒಬಿಸಿ ಕೋಟಾವನ್ನು ಕೊನೆಗೊಳಿಸುವ ಮೂಲಕ ತಮ್ಮ ಮತಬ್ಯಾಂಕ್ಗೆ ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ನೀಡಲು ಬಯಸುತ್ತಿವೆ” ಎಂದು ಮೋದಿ ಹೇಳಿಕೆ ನೀಡಿದ್ದಾರೆ.
ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ದೇಶದ ಜನರ ಸಂಪತ್ತನ್ನು ಕಸಿದುಕೊಂಡು ಅನೇಕ ಮಕ್ಕಳನ್ನು ಹೊಂದಿರುವವರಿಗೆ ಹಂಚುತ್ತದೆ ಎಂದು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈಗ ಮುಜ್ರಾ ಎಂಬ ಹೇಳಿಕೆ ನೀಡುವ ಮೂಲಕ, ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ.




