ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಬಿಎನ್ಪಿ ನಾಯಕ ತಾರಿಕ್ ರೆಹಮಾನ್ ಅವರ ಪ್ರಮಾಣ ವಚನ ಸಮಾರಂಭಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾರತದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ. ಓಂ ಬಿರ್ಲಾ ಅವರೊಂದಿಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕೂಡ ಢಾಕಾಕ್ಕೆ ತೆರಳಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
2026ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್ಪಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದ್ದು, ತಾರಿಕ್ ರೆಹಮಾನ್ ಅವರು ಮಂಗಳವಾರ(ಫೆ.17) ರಾಷ್ಟ್ರೀಯ ಸಂಸತ್ತಿನ ದಕ್ಷಿಣ ಪ್ಲಾಜಾದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಬಾಂಗ್ಲಾದೇಶ ಸರ್ಕಾರ ಭಾರತ ಸೇರಿದಂತೆ 13 ದೇಶಗಳ ನಾಯಕರಿಗೆ ಆಹ್ವಾನ ನೀಡಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!
2024ರ ಆಗಸ್ಟ್ನಲ್ಲಿ ಬಾಂಗ್ಲಾದೇಶದಲ್ಲಿ ಉಂಟಾದ ಪ್ರತಿಭಟನೆಗಳಿಂದ ಮಾಜಿ ಪ್ರಧಾನಿ ಶೇಖ್ ಹಸೀನಾ ಅಧಿಕಾರದಿಂದ ಪದಚ್ಯುತರಾಗಿ ಭಾರತಕ್ಕೆ ಆಶ್ರಯ ಪಡೆದ ನಂತರ ಎರಡು ದೇಶಗಳ ಸಂಬಂಧಗಳು ಹಳಸಿತ್ತು. ಶೇಖ್ ಹಸೀನಾ ಅವರ ಪ್ರತಿಸ್ಪರ್ಧಿ ಪಕ್ಷ ಬಿಎನ್ಪಿ ಈಗ ಅಧಿಕಾರಕ್ಕೆ ಬಂದಿದ್ದಾರೆ





