ಭಾರತ ನಿರ್ಧರಿಸಿದೆ, ರಕ್ತ ಮತ್ತು ನೀರು ಒಟ್ಟಿಗೆ ಹರಿಯದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ದೇಶವನ್ನುದ್ದೇಶಿಸಿ ಮಾತನಾಡಿದರು.
ರಾಜಘಾಟ್ನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆಗೆ ಆಗಮಿಸಿ ಮೋದಿ ಧ್ವಜಾರೋಹಣ ಮಾಡಿದರು. ಇನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, “ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ಮತ್ತು ವೀಕ್ಷಿತ ಭಾರತವನ್ನು ನಿರ್ಮಿಸಲು ಈ ದಿನವು ನಮಗೆ ಸ್ಫೂರ್ತಿ ನೀಡಲಿ. ಜೈ ಹಿಂದ್” ಎಂದು ಬರೆದಿದ್ದಾರೆ.
ಇದನ್ನು ಓದಿದ್ದೀರಾ? ಯುದ್ಧದ ಪರಿಣಾಮಗಳು ಯುದ್ಧಭೂಮಿಗೆ ಮಾತ್ರ ಸೀಮಿತವಾಗುವುದಿಲ್ಲ…
ಇನ್ನು ಕೆಂಪು ಕೋಟೆಯಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ, “ಭಾರತವು ಇನ್ನು ಮುಂದೆ ಪರಮಾಣು ಬೆದರಿಕೆಗಳನ್ನು ಸಹಿಸುವುದಿಲ್ಲ ಎಂದು ನಿರ್ಧರಿಸಿದೆ. ನಾವು ಯಾವುದೇ ಬ್ಲ್ಯಾಕ್ಮೇಲ್ಗೆ ಬಲಿಯಾಗುವುದಿಲ್ಲ” ಎಂದು ಹೇಳಿದರು.
“ಪಾಕಿಸ್ತಾನದಲ್ಲಿ ನಮ್ಮ ಸಶಸ್ತ್ರ ಪಡೆಗಳು ಮಾಡಿದ ವಿನಾಶವು ವಿಸ್ತಾರವಾಗಿದೆ, ಪ್ರತಿದಿನ ಹೊಸ ದಾಳಿಗಳನ್ನು ನಡೆಸಲಾಗುತ್ತಿದೆ. ಏಪ್ರಿಲ್ 22 (ಪಹಲ್ಗಾಮ್ ದಾಳಿ) ನಂತರ, ಭಯೋತ್ಪಾದಕರಿಗೆ ತಕ್ಕ ಪ್ರತಿಕ್ರಿಯೆ ನೀಡಲು ನಾವು ಸಶಸ್ತ್ರ ಪಡೆಗಳಿಗೆ ಮುಕ್ತ ಅವಕಾಶವನ್ನು ನೀಡಿದ್ದೇವೆ” ಎಂದು ತಿಳಿಸಿದರು.
“ಭಾರತ ಈಗ ನಿರ್ಧರಿಸಿದೆ, ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ. ಸಿಂಧೂ ಜಲ ಒಪ್ಪಂದವು ಅನ್ಯಾಯ ಎಂಬುದನ್ನು ಜನರು ಅರಿತುಕೊಂಡಿದ್ದಾರೆ. ಸಿಂಧೂ ನದಿ ಒಪ್ಪಂದದಿಂದಾಗಿ ಶತ್ರುಗಳ ಭೂಮಿಗೆ ನೀರು ಹರಿಯುತ್ತಿದೆ. ಆದರೆ ನಮ್ಮ ಸ್ವಂತ ರೈತರು ಬಳಲುತ್ತಿದ್ದಾರೆ. ಕಳೆದ ಏಳು ದಶಕಗಳಿಂದ ನಮ್ಮ ರೈತರಿಗೆ ಅಪಾರ ನಷ್ಟವನ್ನುಂಟುಮಾಡಿರುವ ಇದು ಯಾವ ರೀತಿಯ ಒಪ್ಪಂದ” ಎಂದು ಪ್ರಶ್ನಿಸಿದರು.





