ಪಾಕಿಸ್ತಾನ ಸಂಘರ್ಷದಲ್ಲಿ ಭಾರತ ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ: ದೃಢಪಡಿಸಿದ ಉನ್ನತ ರಕ್ಷಣಾ ಅಧಿಕಾರಿ

Date:

ಮೇ ತಿಂಗಳಲ್ಲಿ ಪಾಕಿಸ್ತಾನದೊಂದಿಗಿನ ಘರ್ಷಣೆಯಲ್ಲಿ ಅನಿರ್ದಿಷ್ಟ ಸಂಖ್ಯೆಯ ಯುದ್ಧ ವಿಮಾನಗಳನ್ನು ಕಳೆದುಕೊಂಡಿರುವುದಾಗಿ ಭಾರತೀಯ ಸೇನೆ ಮೊದಲ ಬಾರಿಗೆ ದೃಢಪಡಿಸಿದೆ. ಆದರೆ ನಾಲ್ಕು ದಿನಗಳ ಸಂಘರ್ಷ ಪರಮಾಣು ಯುದ್ಧದ ಹಂತಕ್ಕೆ ಬಂದಿರಲಿಲ್ಲ ಎಂದೂ ಹೇಳಿದೆ.

ಈ ಬಗ್ಗೆ ಬ್ಲೂಮ್‌ಬರ್ಗ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಭಾರತೀಯ ಸಶಸ್ತ್ರ ಪಡೆಗಳ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, “ಜೆಟ್ ಪತನಗೊಂಡಿದೆಯೇ ಎಂಬುದಕ್ಕಿಂತ ಜೆಟ್‌ಗಳನ್ನು ಏಕೆ ಪತನಗೊಳಿಸಲಾಗಿದೆ ಎಂಬುದು ಮುಖ್ಯ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಭಾರತ-ಪಾಕಿಸ್ತಾನ ಸಂಘರ್ಷ | ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳು ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂಬ ಪಾಕಿಸ್ತಾನ ಹೇಳಿಕೊಂಡಿದೆ. ಆದರೆ ಈ ಹೇಳಿಕೆ ‘ಸಂಪೂರ್ಣವಾಗಿ ತಪ್ಪು’ ಎಂದೂ ಉನ್ನತ ರಕ್ಷಣಾ ಅಧಿಕಾರಿ ಅನಿಲ್ ಚೌಹಾಣ್ ಹೇಳಿದ್ದಾರೆ. ಆದರೆ ಭಾರತ ಎಷ್ಟು ಜೆಟ್‌ಗಳನ್ನು ಕಳೆದುಕೊಂಡಿದೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಲು ನಿರಾಕರಿಸಿದರು. “ಯಾವ ತಪ್ಪಿನಿಂದಾಗಿ ಜೆಟ್ ವಿಮಾನ ಪತನಗೊಂಡಿತು ಎಂಬುದು ಮುಖ್ಯವೇ ಹೊರತು, ಎಷ್ಟು ಪತನವಾಗಿದೆ ಎಂಬುದಲ್ಲ” ಎಂದು ಹೇಳಿದ್ದಾರೆ.

“ನಾವು ಮಾಡಿದ ಯುದ್ಧತಂತ್ರದ ತಪ್ಪನ್ನು ಅರ್ಥಮಾಡಿಕೊಳ್ಳಲು, ಅದನ್ನು ಸರಿಪಡಿಸಲು, ಎರಡು ದಿನಗಳ ನಂತರ ಅದನ್ನು ಮತ್ತೆ ಕಾರ್ಯಗತಗೊಳಿಸಲು ನಮಗೆ ಸಾಧ್ಯವಾಗುತ್ತಿರುವುದು ಒಳ್ಳೆಯ ವಿಚಾರ. ಎಲ್ಲಾ ಜೆಟ್‌ಗಳನ್ನು ಮತ್ತೆ ಹಾರಿಸಲು ಸಾಧ್ಯವಾಗುತ್ತದೆ” ಎಂದು ಜನರಲ್ ಚೌಹಾಣ್ ಹೇಳಿದರು.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕಾ ದಾಳಿ ನಡೆಸಿ 26 ಮಂದಿಯನ್ನು ಕೊಂದಿದೆ. ಇದಕ್ಕೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕಾ ನೆಲೆಗಳ ಮೇಲೆ ದಾಳಿ ನಡೆಸಿ 100ಕ್ಕೂ ಅಧಿಕ ಉಗ್ರರನ್ನು ಹತ್ಯೆ ಮಾಡಿದೆ.

ಇದಾದ ಬಳಿಕ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಹೆಚ್ಚಾಗಿದೆ. ದಾಳಿ, ಪ್ರತಿದಾಳಿ ಹೆಚ್ಚಾಗುತ್ತಿದ್ದಂತೆ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...