ಭಾರತ- ಪಾಕಿಸ್ತಾನ ಯುದ್ಧದ ಸ್ಥಿತಿ | ದಾಳಿ ಬೆನ್ನಲ್ಲೇ ಎಲ್ಲೆಲ್ಲಿ ಬ್ಲ್ಯಾಕ್‌ ಔಟ್?

Date:

ಭಾರತದ ಗಡಿ ರಾಜ್ಯಗಳ ಹಲವೆಡೆ ಪಾಕಿಸ್ತಾನ ದಾಳಿ ಮಾಡಲು ಯತ್ನಿಸಿದೆ. ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಪಂಜಾಬ್ ಭಾಗದಲ್ಲಿ ದಾಳಿ ನಡೆಸಲಾಗಿದ್ದು, ಭಾರತದ ವಾಯುಪಡೆಯು ಪಾಕಿಸ್ತಾನ ದಾಳಿಯನ್ನು ಹೊಡೆದುರುಳಿಸಿದೆ. ಗಡಿ ರಾಜ್ಯಗಳಲ್ಲಿ ಬ್ಲ್ಯಾಕ್ ಔಟ್ ಘೋಷಿಸಲಾಗಿದೆ.

ಪಾಕಿಸ್ತಾನದ ಸರ್ಗೋಧಾ ವಾಯುನೆಲೆಯಿಂದ ಹಾರಿದ ಕ್ಷಿಪಣಿಗಳನ್ನು ಭಾರತೀಯ ಪಡೆಗಳು ತಡೆದು ನಿಲ್ಲಿಸಿವೆ.

ಪಂಜಾಬ್‌ನ ಪಠಾಣ್‌ಕೋಟ್ ಅಂತಾರಾಷ್ಟ್ರೀಯ ಗಡಿಯಿಂದ ಕೇವಲ 30 ಕಿಮೀ ದೂರದಲ್ಲಿದೆ. ಈ ಭಾಗದ ಮೇಲೆ ಪಾಕಿಸ್ತಾನ ದಾಳಿ ನಡೆಸಿದೆ. ಈ ಪ್ರದೇಶವು ಯುದ್ಧತಂತ್ರದ ಭಾಗವಾಗಿದ್ದು, ಜಮ್ಮು ಕಡೆಗೆ ಪ್ರವೇಶ ಬಿಂದುವಾಗಿಯೂ ಕಾರ್ಯನಿರ್ವಹಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂಜಾಬ್, ರಾಜಸ್ಥಾನ, ಗುಜರಾತ್‌ನಲ್ಲಿ ಬ್ಲ್ಯಾ ಕೌಟ್‌ಗಳು

ಜಮ್ಮು ಮತ್ತು ಕಾಶ್ಮೀರದ ಗಡಿ ಪ್ರದೇಶಗಳು ಈಗ ಸಂಪೂರ್ಣ ಬ್ಲಾಕೌಟ್‌ಗೆ ಒಳಗಾಗಿವೆ. ಪಂಜಾಬ್‌ನ ಚಂಡೀಗಢ, ಫಿರೋಜ್‌ಪುರ, ಮೊಹಾಲಿ ಮತ್ತು ಗುರುದಾಸ್ಪುರ ಹಾಗೂ ಪಾಕಿಸ್ತಾನದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಮತ್ತೊಂದು ರಾಜ್ಯವಾದ ರಾಜಸ್ಥಾನದ ಕೆಲವು ಭಾಗಗಳಲ್ಲಿಯೂ ಬ್ಲಾಕೌಟ್ ಘೋಷಿಸಲಾಗಿದೆ. ಗುಜರಾತ್‌ನಲ್ಲೂ ಬ್ಲಾಕೌಟ್ ಘೋಷಿಸಲಾಗಿದೆ.

ವಿಮಾನಯಾನ ಸಂಸ್ಥೆಗಳಿಗೆ ಸೂಚನೆ

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ಪ್ರಕಟಣೆಯನ್ನು ಹೊರಡಿಸಿದ್ದು, ಭದ್ರತೆ ಕ್ರಮಗಳನ್ನು ಹೆಚ್ಚಿಸಲು ದೇಶಾದ್ಯಂತ ಎಲ್ಲಾ ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿರಿ: ಪಾಕಿಸ್ತಾನದಿಂದ ಮುಂದುವರಿದ ದಾಳಿ: ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಗಡಿಭಾಗದ ಜನರಿಗೆ ಸೂಚನೆ

ಬೋರ್ಡಿಂಗ್ ಮೊದಲು ಎಲ್ಲಾ ಪ್ರಯಾಣಿಕರಿಗೆ ಕಡ್ಡಾಯವಾಗಿ ದ್ವಿತೀಯ ಭದ್ರತಾ ತಪಾಸಣೆ, ಟರ್ಮಿನಲ್ ಪ್ರವೇಶ ನಿರ್ಬಂಧ, ಮಾನ್ಯತೆ ಹೊಂದಿದ ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ಅವಕಾಶ, ಸಿಸಿಟಿವಿ ಕಣ್ಗಾವಲು, ವಿಮಾನಗಳಲ್ಲಿ ಏರ್ ಮಾರ್ಷಲ್‌ಗಳ ಹೆಚ್ಚಿನ ನಿಯೋಜನೆ, ಬ್ಯಾಗೇಜ್ ಸ್ಕ್ರೀನಿಂಗ್ ಮೊದಲಾದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ.

ಐಪಿಎಲ್ ಪಂದ್ಯ ರದ್ದು

ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎಚ್‌ಪಿಸಿಎ ಕ್ರೀಡಾಂಗಣವನ್ನು ಸ್ಥಳಾಂತರಿಸಲಾಗಿದೆ. ಲೈಟ್‌ಗಳನ್ನು ಹಾರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...