ಕೆನಡಾ ಪ್ರಜೆಗಳಿಗೆ ಇ – ವೀಸಾ ಸೇವೆಗಳನ್ನು ಪುನರಾರಂಭಿಸಿದ ಭಾರತ

Date:

ಭಾರತ ಹಾಗೂ ಕೆನಡಾ ನಡುವೆ ರಾಜತಾಂತ್ರಿಕ ವಿವಾದ ಏರ್ಪಟ್ಟ ಎರಡು ತಿಂಗಳ ನಂತರ ಕೆಂದ್ರ ಸರ್ಕಾರವು ಕೆನಡಾ ಪ್ರಜೆಗಳಿಗೆ ಇ – ವೀಸಾ ಸೇವೆಗಳನ್ನು ಪುನರಾರಂಭಿಸಿದೆ.

ಎರಡು ತಿಂಗಳ ಹಿಂದೆ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಬಗ್ಗೆ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಭಾರತದ ಮೇಲೆ ಆರೋಪ ಮಾಡಿದ ನಂತರ ಎರಡು ದೇಶಗಳ ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಉಭಯ ದೇಶಗಳಿಂದ ರಾಯಭಾರಿಗಳು ಹಾಗೂ ಸಿಬ್ಬಂದಿಗಳನ್ನು ವಾಪಸ್‌ ಕರೆಸಿಕೊಳ್ಳಲಾಗಿತ್ತು.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್ 18ರಂದು, ‘ಕೆನಡಾದ ಭದ್ರತಾ ಏಜೆನ್ಸಿಗಳು ಭಾರತೀಯ ಸರ್ಕಾರಿ ಏಜೆಂಟರು ಮತ್ತು ನಿಜ್ಜರ್ ಸಾವಿನ ನಡುವಿನ ಸಂಬಂಧವನ್ನು ತನಿಖೆ ನಡೆಸುತ್ತಿವೆ’ ಎಂದು ಹೇಳಿದರು. ಅಲ್ಲದೆ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಅವರು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದೇವಸ್ಥಾನಗಳಲ್ಲಿ ಅನ್ಯ ಧರ್ಮದವರಿಗೆ ಉದ್ಯೋಗಾವಕಾಶವಿಲ್ಲ: ಆಂಧ್ರ ಹೈಕೋರ್ಟ್

ಟ್ರುಡೊ ಹೇಳಿಕೆಯ ನಂತರ, ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಪ್ರಾರಂಭವಾಯಿತು. ಭಾರತದ ಸೂಚನೆಗಳನ್ನು ಅನುಸರಿಸಿ, ಕೆನಡಾವು 41 ಕೆನಡಾದ ರಾಜತಾಂತ್ರಿಕರನ್ನು ನವದೆಹಲಿಯಿಂದ ತಮ್ಮ ದೇಶಕ್ಕೆ ಕರೆಸಿಕೊಂಡಿತ್ತು.

ಜಸ್ಟಿನ್ ಟ್ರುಡೊ ಆರೋಪವನ್ನು ನಿರಾಕರಿಸಿದ್ದ ವಿದೇಶಾಂಗ ಇಲಾಖೆಯ ಅಧಿಕಾರಿಗಳು, ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತೀಯ ಏಜೆಂಟ್‌ಗಳು ಭಾಗಿಯಾಗಿಲ್ಲ. ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿದ್ದರೂ, ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸಲು ಮತ್ತು ವ್ಯಾಪಾರ ಒಪ್ಪಂದವನ್ನು ಮಾತುಕತೆ ನಡೆಸಲು ಕೆನಡಾದೊಂದಿಗೆ ಭಾರತವು ಚರ್ಚೆಗೆ ಮರಳಲು ಬಯಸುತ್ತದೆ ಎಂದು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...