ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡ ಸಿದ್ದ; ಶುಭಮನ್ ಗಿಲ್‌ಗೆ ನಾಯಕತ್ವ – ತಂಡಕ್ಕೆ ಮರಳಿದ ಕೊಹ್ಲಿ, ರೋಹಿತ್

Date:

ಅಕ್ಟೋಬರ್ 19ರಿಂದ ಆಸ್ಟ್ರೇಲಿಯಾ ಮತ್ತು ಭಾರತ ಕ್ರಿಕೆಟ್ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಭಾರತ ತಂಡವು ಆಸ್ಟ್ರೇಲಿಯಾಗೆ ಪ್ರಯಾಣ ನಡೆಸಲು ಸಿದ್ದವಾಗಿದೆ. ಸರಣಿಗಾಗಿ ಬಿಸಿಸಿಐ ತಂಡದಲ್ಲಿನ ಆಟಗಾರರ ಪಟ್ಟಿಯನ್ನು ಪ್ರಕಟಿಸಿದ್ದು, ಯುವ ಬ್ಯಾಟರ್ ಶುಭಮನ್ ಗಿಲ್ ಅವರಿಗೆ ತಂಡದ ನಾಯಕತ್ವ ನೀಡಿದೆ. ಸ್ಟಾರ್‌ ಆಟಗಾರರಾದ ರೋಹಿತ್ ಶರ್ಮಾ ಮತ್ತು ಮಿರಾಟ್‌ ಕೊಹ್ಲಿ ತಂಡಕ್ಕೆ ಮರಳಿದ್ದಾರೆ.

ಅಹಮದಾಬಾದ್‌ನಲ್ಲಿ ಬಿಸಿಸಿಐ ಸಭೆ ನಡೆದಿದ್ದು, ತಂಡದ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಆಟಗಾರರ ಪಟ್ಟಿಯನ್ನು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಘೋಷಿಸಿದ್ದಾರೆ. ತಂಡವನ್ನು ಶುಭಮನ್ ಗಿಲ್ ಮುನ್ನಡೆಸಿದ್ದರೆ, ಅವರಿಗೆ ಶ್ರೇಯಸ್ ಅಯ್ಯರ್ ಸಾಥ್ ಕೊಡಲಿದ್ದಾರೆ. ಅಯ್ಯರ್ ಅವರನ್ನು ಉಪ ನಾಯಕನಾಗಿ ಆಯ್ಕೆ ಮಾಡಲಾಗಿದೆ.

ಈವರೆಗೆ ಏಕದಿನ ಟೂರ್ನಿಗಳಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸುತ್ತಿದ್ದರು. ಇದೀಗ, ರೋಹಿತ್ ಬದಲಾಗಿ ಗಿಲ್ ಅವರಿಗೆ ನಾಯಕತ್ವ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಗರ್ಕರ್, “ನಾಯಕತ್ವ ಬದಲಾವಣೆಯ ಬಗ್ಗೆ ರೋಹಿತ್ ಶರ್ಮಾ ಅವರಿಗೆ ಈ ಮುಂಚೆಯೇ ತಿಳಿಸಲಾಗಿದೆ” ಎಂದು ಹೇಳಿದ್ದಾರೆ.

ತಂಡದ ಆಟಗಾರರು: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮುಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಧ್ರುವ ಜುರೆಲ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...