ಅಕ್ರಮ ವಲಸೆಗಾರರ ಮೇಲೆ ಭಾರಿ ದಂಡ, ಜೈಲು ಶಿಕ್ಷೆ ವಿಧಿಸಲು ಕೇಂದ್ರ ನಿರ್ಧಾರ

Date:

ಅಧಿಕೃತ ಪಾಸ್‌ಪೋರ್ಟ್‌ ಅಥವಾ ವೀಸಾ ಇಲ್ಲದೇ ಅಕ್ರಮವಾಗಿ ಭಾರತವನ್ನು ಪ್ರವೇಶಿಸುವ ವಿದೇಶಿಯರಿಗೆ ಐದು ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಲು ಭಾರತ ಚಿಂತನೆ ನಡೆಸಿದೆ.

ನಕಲಿ ಪಾಸ್‌ಪೋರ್ಟ್ ಅಥವಾ ಪ್ರವಾಸದ ದಾಖಲೆಯೊಂದಿಗೆ ಭಾರತವನ್ನು ಪ್ರವೇಶಿಸುವುದು, ಭಾರತದಲ್ಲಿ ತಂಗುವುದು ಅಥವಾ ಭಾರತದಿಂದ ನಿರ್ಗಮಿಸಿದಲ್ಲಿ ಎರಡರಿಂದ ಏಳು ವರ್ಷ ವರೆಗೆ ಜೈಲು ಶಿಕ್ಷೆ ಹಾಗೂ ಒಂದು ಲಕ್ಷದಿಂದ ಹತ್ತು ಲಕ್ಷ ರೂಪಾಯಿವರೆಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ.

ವಲಸೆ ಮತ್ತು ವಿದೇಶಿಯರ ಮಸೂದೆ-2025ನ್ನು ಪ್ರಸಕ್ತ ಲೋಕಸಭಾ ಅಧಿವೇಶನದಲ್ಲೇ ಮಂಡಿಸಲು ಸಿದ್ಧತೆ ನಡೆದಿದ್ದು, ವಲಸೆ ಮತ್ತು ವಿದೇಶಿಯರನ್ನು ನಿಯಂತ್ರಿಸುವ ವಿದೇಶಿಯರ ಕಾಯ್ದೆ-1946 ಪಾಸ್ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ-1920, ವಿದೇಶಿಯರ ನೋಂದಣಿ ಕಾಯ್ದೆ-1939 ಮತ್ತು ಇಮಿಗ್ರೇಶನ್ (ಕ್ಯಾರಿಯರ್ಸ್ ಲಯಾಬಿಲಿಟಿ) ಕಾಯ್ದೆ-2000 ಹೀಗೆ ನಾಲ್ಕು ಕಾಯ್ದೆಗಳ ವಿವಿಧ ನಿಬಂಧನೆಗಳು ಒಂದರ ಮೇಲೊಂದು ವ್ಯಾಪಿಸುವ ಹಿನ್ನೆಲೆಯಲ್ಲಿ ಇವುಗಳ ಬದಲಾಗಿ ಒಂದೇ ಸಮಗ್ರ ಶಾಸನ ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚೀನಾಕ್ಕೆ ತಲೆನೋವಾಗಿರುವ ಜನಸಂಖ್ಯೆ- ಭಾರತ ಕಲಿಯಬೇಕಿರುವ ಪಾಠಗಳು!

ಸದ್ಯಕ್ಕೆ ಮೌಲಿಕ ಪಾಸ್ಪೋರ್ಟ್ ಅಥವಾ ಪ್ರಯಾಣದ ದಾಖಲೆ ಇಲ್ಲದೇ ಭಾರತವನ್ನು ಪ್ರವೇಶಿಸುವ ವಿದೇಶಿಯರಿಗೆ ಐದು ವರ್ಷ ಜೈಲು ಮತ್ತು ದಂಡ ವಿಧಿಸಬಹುದಾಗಿದೆ. ನಕಲಿ ದಾಖಲೆಗಳ ಮೂಲಕ ಭಾರತಕ್ಕೆ ಪ್ರವೇಶ ಪಡೆಯುವವರಿಗೆ 8 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ.

ಹೊಸ ಮಸೂದೆಯ ಅನ್ವಯ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳು, ಇಂತಹ ವರ್ಗದ ವಿದೇಶಿಯರಿಗೆ ನಿರ್ದಿಷ್ಟಪಡಿಸಿದ ನೋಂದಣಿ ಅಧಿಕಾರಿ ಜತೆಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ವಿವರಗಳನ್ನು ಹಂಚಿಕೊಳ್ಳಬೇಕಾಗುತ್ತದೆ. ಈ ನಿಬಂಧನೆಯು ಎಲ್ಲ ಆಸ್ಪತ್ರೆಗಳು, ನರ್ಸಿಂಗ್‌ಹೋಮ್‌ಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಹಾಗೂ ಅವರ ಅವರಣದಲ್ಲಿರುವ ವಸತಿ ವ್ಯವಸ್ಥೆಗಳಿಗೂ ಅನ್ವಯಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...