ಭಾರತ ಶೀಘ್ರವೇ 3ನೇ ಅರ್ಥವ್ಯವಸ್ಥೆ ಆಗಲಿದೆ: ರಾಷ್ಟ್ರಪತಿ ಮುರ್ಮು

Date:

ಭಾರತದಲ್ಲಿನ ಮಧ್ಯಮವರ್ಗದ ಜನರು ಹೊಂದಿರುವ ಸ್ವಂತ ಸೂರು ಕಟ್ಟಿಕೊಳ್ಳಬೇಕೆಂಬ ಕನಸನ್ನು ಸಾಕಾರಗೊಳಿಸಲು ಸರ್ಕಾರ ಬದ್ದವಾಗಿದೆ. ದೇಶದಲ್ಲಿ ಮೆಟ್ರೋ ಜಾಲವು 1,000 ಕಿ.ಮೀ.ಗಳನ್ನು ದಾಟಿದೆ. ಶೀಘ್ರದಲ್ಲಿ ಭಾರತವು ವಿಶ್ವದ 3ನೇ ದೊಡ್ಡ ಆರ್ಥಿಕತೆಯನ್ನು ಹೊಂದಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಹೇಳಿದರು.

ಸಂಸತ್ತಿನಲ್ಲಿ ಆರಂಭವಾಗಿರುವ ಕೇಂದ್ರ ಬಜೆಟ್‌ ಅಧಿವೇಶನದ ಮೊದಲ ದಿನ ಸಂಸತ್‌ನ ಉಭಯ ಸದನಗಳನ್ನು ಉದ್ದೇಶಿಸಿ ಮುರ್ಮು ಮಾತನಾಡಿದರು. “ದೇಶದ ವಾಯುಯಾನ ವಲಯವು ಪ್ರಗತಿ ಸಾಧಿಸುತ್ತಿದೆ. ವಿಮಾನಯಾನ ಸೇವೆ ಒದಗಿಸುವ ಕಂಪನಿಗಳು ಸುಮಾರು 1,700 ಹೊಸ ವಿಮಾನಗಳ ಖರೀದಿಗೆ ಮುಂದಾಗಿವೆ. ರೈಲ್ವೇ ಜಾಲವೂ ವಿಸ್ತರಿಸುತ್ತಿದೆ” ಎಂದರು.

“ಭಾರತದಲ್ಲಿರುವ 70 ವರ್ಷ ಮೇಲ್ಪಟ್ಟ ಆರು ಕೋಟಿ ಜನರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಆರೋಗ್ಯ ವಿಮೆ ನೀಡಲಾಗುತ್ತಿದೆ. ಮಹಿಳೆಯರ ಸಬಲೀಕರಣಕ್ಕೆ ಒತ್ತುಕೊಡಲಾಗಿದೆ. ಗ್ರಾಮೀಣಾಭಿವೃದ್ಧಿ ಯೋಜನೆಯಡಿ 91 ಲಕ್ಷ ಸ್ವಸಹಾಯ ಗುಂಪುಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೊಸ ಶಿಕ್ಷಣ ನೀತಿಯಿಂದಾಗಿ ಯುವ ಸಮುದಾಯಕ್ಕೆ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಜನರನ್ನು ಆರ್ಥಿಕ ವ್ಯವಸ್ಥೆಯೊಳಗೆ ತರುವ ಕೆಲಸಗಳು ವೇಗವಾಗಿ ನಡೆದಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ನಾನಾ ಯೋಜನೆಗಳನ್ನು ಸರ್ಕಾರ ಅನುಷ್ಠಾನಗೊಳಿಸಿದೆ” ಎಂದರು.

“ವಕ್ಫ್‌ ಆಸ್ತಿ, ಒಂದು ದೇಶ – ಒಂದು ಚುನಾವಣೆ ವಿಷಯಗಳಲ್ಲಿ ಸರ್ಕಾರವು ದೃಢ ನಿರ್ಧಾರ ತೆಗೆದುಕೊಂಡಿದೆ. ವಿಶೇಷ ಸ್ಥಾನಮಾನ ರದ್ದತಿಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಬದಲಾಗಿದೆ. ಈಶಾನ್ಯ ರಾಜ್ಯಗಳ ಅಭಿವೃದ್ದಿಗೆ ಹೆಚ್ಚು ಒತ್ತುಕೊಡಲಾಗಿದೆ” ಎಂದು ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...