‘ಎಎಲ್‌ಎಚ್‌ ಧ್ರುವ’ ಕಾರ್ಯಾಚರಣೆ ಸ್ಥಗಿತ: ಭಾರತೀಯ ಸೇನೆ

Date:

  • ಭಾರತೀಯ ಸೇನೆಯಲ್ಲಿ ಧ್ರುವ ಹೆಲಿಕಾಪ್ಟರ್‌ ಸೇವೆ
  • ಸೇನಾ ಹೆಲಿಕಾಪ್ಟರ್‌ ಪತನದ ನಂತರ ಸೇನೆ ಕ್ರಮ

ಸ್ವದೇಶಿ ಸುಧಾರಿತ ಲಘು ಹೆಲಿಕಾಪ್ಟರ್‌ (ಎಎಲ್‌ಎಚ್‌) ಧ್ರುವ ಸರಣಿಯ ಹಾರಾಟವನ್ನು ಸ್ಥಗಿತಗೊಳಿಸಲು ಸೇನೆ ನಿರ್ಧರಿಸಿದೆ.

ಭಾರತೀಯ ಸೇನೆಯು ತನ್ನ ಸ್ವದೇಶಿ ನಿರ್ಮಿತ ಧ್ರುವ ಹೆಲಿಕಾಪ್ಟರ್ ಕಾರ್ಯಾಚರಣೆ ನಿಲ್ಲಿಸಿದೆ ಎಂದು ಶನಿವಾರ (ಮೇ 6) ಮಾಧ್ಯಮಗಳು ವರದಿ ಮಾಡಿವೆ.

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ ಬಳಿ ಸೇನಾ ಹೆಲಿಕಾಪ್ಟರ್‌ವೊಂದು ಪತನವಾದ ಎರಡು ದಿನಗಳ ನಂತರ ಎಎಲ್‌ಎಚ್‌ ಧ್ರುವ ಕಾರ್ಯಾಚರಣೆ ನಿಲ್ಲಿಸಲು ಸೇನೆ ತೀರ್ಮಾನ ಕೈಗೊಂಡಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇನಾ ಹೆಲಿಕಾಪ್ಟರ್‌ ಪತನಗೊಂಡು ಒಬ್ಬ ತಾಂತ್ರಿಕ ಸಿಬ್ಬಂದಿ ಮೃತಪಟ್ಟು, ಇಬ್ಬರು ಪೈಲಟ್‌ ಗಾಯಗೊಂಡಿದ್ದರು.

ಮಾರ್ಚ್‌ನಲ್ಲಿ ಹೆಲಿಕಾಪ್ಟರ್‌ ಅಪಘಾತದ ಎರಡು ಘಟನೆಗಳ ನಂತರ ನೌಕಾದಳ ಮತ್ತು ಕರಾವಳಿ ಕಾವಲು ಪಡೆ ಇತ್ತೀಚೆಗೆ ಒಂದು ತಿಂಗಳಿಗೂ ಹೆಚ್ಚು ಅವಧಿಯವರೆಗೆ ಹೆಲಿಕಾಪ್ಟರ್‌ ಹಾರಾಟ ಸ್ಥಗಿತಗೊಳಿಸಿದ್ದವು.

ಆದರೆ ಕಾರ್ಯಾಚರಣೆಯ ಅಗತ್ಯದ ದೃಷ್ಟಿಯಿಂದ ಸೇನೆಯು ಕೆಲವು ಹೆಲಿಕಾಪ್ಟರ್‌ಗಳನ್ನು ಸಕ್ರಿಯಗೊಳಿಸಿತ್ತು.

ಧ್ರುವ ಹೆಲಿಕಾಪ್ಟರ್‌ ತನ್ನ ಕಾರ್ಯಾಚರಣೆಯನ್ನು ನೌಕಾದಳ ಮತ್ತು ಕರಾವಳಿ ಕಾವಲು ಪಡೆಯಲ್ಲಿ ಮತ್ತೆ ಕಾರ್ಯನಿರ್ವಹಿಸಲಿದೆಯೇ ಎಂಬುದನ್ನು ಸೇನೆ ಸ್ಪಷ್ಟಪಡಿಸಿಲ್ಲ.

ಧ್ರುವ ಹೆಲಿಕಾಪ್ಟರ್‌ ತನ್ನ ಕಾರ್ಯಾಚರಣೆ ಮತ್ತೆ ಆರಂಭಿಸಲು ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನಿಂದ (ಎಚ್‌ಎಎಲ್) ದೋಷರಹಿತ ಪ್ರಮಾಣಪತ್ರ ಪಡೆಯಬೇಕು.

ಧ್ರುವ ಹೆಲಿಕಾಪ್ಟರ್‌ ಅನ್ನು ಎಚ್‌ಎಎಲ್‌ ತಯಾರು ಮಾಡುತ್ತದೆ. ಎಎಲ್‌ಎಚ್‌ ಧ್ರುವ ಕಾರ್ಯಾಚರಣೆ ಸ್ಥಗಿತಗೊಳ್ಳುತ್ತಿರುವುದು ಎರಡು ತಿಂಗಳಲ್ಲಿ ಇದು ಮೂರನೇ ಘಟನೆ.

ಭಾರತೀಯ ನೌಕಾಪಡೆಯ ಧ್ರುವ ಹೆಲಿಕಾಪ್ಟರ್‌ ಅನ್ನು ಅರಬ್ಬೀ ಸಮುದ್ರದಲ್ಲಿ ಪೂರ್ವ ಯೋಜಿತವಾಗಿ ಇಳಿಸಲಾಗಿತ್ತು.

ಕೊಚ್ಚಿಯಿಂದ ಹಾರಾಟ ಪ್ರಾರಂಭಿಸಿದ ನಂತರ ಕರಾವಳಿ ಕಾವಲು ಪಡೆಯ ಧ್ರುವ ಹೆಲಿಕಾಪ್ಟರ್‌ ಅನ್ನು ಕೆಲವು ಕ್ಷಣಗಳ ನಂತರ ಬಲವಂತದ ಭೂಸ್ಪರ್ಶ ಮಾಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ಮೂವರು ಮಹಿಳೆಯರು ಸೇರಿ ಒಂದೇ ಕುಟುಂಬದ ಆರು ಮಂದಿಯ ಹತ್ಯೆ

ಎಎಲ್‌ಎಚ್‌ ಧ್ರುವ, ಭಾರತೀಯ ಸಶಸ್ತ್ರ ಪಡೆಗಳಿಗೆ ಒಂದು ಬಹುಪಯೋಗಿ ಯುದ್ಧ ಹೆಲಿಕಾಪ್ಟರ್‌. ಇದು ಸಿಯಾಚಿನ್‌ ಮತ್ತು ಲಡಾಖ್‌ನಂತಹ ಎತ್ತರದ ಪ್ರದೇಶಗಳಲ್ಲಿ ಹಾರುವ ಮೂಲಕ ಸೈನಿಕರಿಗೆ ನೆರವಾಗುತ್ತದೆ.

ಇತ್ತೀಚೆಗೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷಗಳು ಕಂಡು ಬರುತ್ತಿವೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...