ಕಡಲುಗಳ್ಳರಿಂದ 23 ಪಾಕ್ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ

Date:

ಅರಬ್ಬಿ ಸಮುದ್ರದಲ್ಲಿ ಕಡಲುಗಳ್ಳರ ದಾಳಿಯಿಂದ 23 ಪಾಕಿಸ್ತಾನಿ ಪ್ರಜೆಗಳನ್ನು ಭಾರತೀಯ ನೌಕಾಪಡೆ ರಕ್ಷಿಸಿದೆ. ಕಡಲುಗಳ್ಳರ ವಿರುದ್ಧ ಭಾರತೀಯ ನೌಕಾಪಡೆಯು ಸುಮಾರು 12 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದು, ಇರಾನ್ ಮೀನುಗಾರಿಕಾ ಹಡಗು ಮತ್ತು 23 ಪಾಕಿಸ್ತಾನಿ ಪ್ರಜೆಗಳ ಸಿಬ್ಬಂದಿಯನ್ನು ರಕ್ಷಿಸಿದೆ.

“ಮಾರ್ಚ್ 28 ರಂದು ತಡರಾತ್ರಿ ಇರಾನಿನ ಮೀನುಗಾರಿಕಾ ನೌಕೆ ”ಅಲ್-ಕಂಬಾರ್ 786’ನಲ್ಲಿ ಕಡಲ್ಗಳ್ಳತನ ನಡೆಯುವ ಸಾಧ್ಯತೆ ಬಗ್ಗೆ ಮಾಹಿತಿ ಆಧಾರದಲ್ಲಿ ಎರಡು ಭಾರತೀಯ ನೌಕಾಪಡೆಯ ಹಡಗುಗಳು ಕಡಲ ಭದ್ರತಾ ಕಾರ್ಯಾಚರಣೆಯನ್ನು ಅರಬ್ಬಿ ಸಮುದ್ರದಲ್ಲಿ ನಡೆಸಿದೆ. ಈ ಸಂದರ್ಭದಲ್ಲಿ ಅಪಹರಣಕ್ಕೊಳಗಾದ ಮೀನುಗಾರಿಕಾ ಹಡಗನ್ನು ರಕ್ಷಿಸಲಾಗಿದೆ” ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ?  ಸೊಮಾಲಿ ಕಡಲ್ಗಳ್ಳರಿಂದ 19 ಪಾಕ್ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾ ಪಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಮಾರು 12 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಅಪಹರಿಸಲಾದ ಮೀನುಗಾರಿಕಾ ಹಡಗಿನಲ್ಲಿದ್ದ ಕಡಲ್ಗಳ್ಳರು ಶರಣಾಗುವಂತೆ ಮಾಡಲಾಗಿದೆ. 23 ಪಾಕಿಸ್ತಾನಿ ಪ್ರಜೆಗಳನ್ನು ಒಳಗೊಂಡಿರುವ ಸಿಬ್ಬಂದಿಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಬಳಿಕ ಹಡಗಿನ ಪರಿಶೀಲನೆ ನಡೆಸಿ, ಶುಚಿಗೊಳಿಸಲಾಗಿದೆ. ಸಾಮಾನ್ಯ ಮೀನುಗಾರಿಕೆ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುವ ಸ್ಥಿತಿಯಲ್ಲಿ ಹಡಗು ಇದೆಯೇ ಎಂದು ಪರಿಶೀಲಿಸಲಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮಾರ್ಚ್ 29 ರಂದು, ಐಎನ್‌ಎಸ್ ಸುಮೇಧಾ ಮೀನುಗಾರಿಕಾ ಹಡಗು ಅಲ್-ಕಂಬಾರ್ ಅನ್ನು ಮುಂಜಾನೆ ತಡೆಯಲಾಗಿದೆ. ಒಂಬತ್ತು ಶಸ್ತ್ರಸಜ್ಜಿತ ಕಡಲ್ಗಳ್ಳರು ಹಡಗಿಗೆ ದಾಳಿ ಮಾಡಿದ್ದಾರೆ. ಇನ್ನು ಈ ತಿಂಗಳ ಆರಂಭದಲ್ಲಿ ಭಾರತೀಯ ನೌಕಾಪಡೆಯು ಕಡಲ್ಗಳ್ಳರ ದಾಳಿಗೆ ಒಳಗಾದ ರುಯೆನ್ ಎಂಬ ಹಡಗನ್ನು ತಡೆದಿದ್ದರು. ಸುಮಾರು 40 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ 35 ಕಡಲ್ಗಳ್ಳರು ಶರಣಾಗುವಂತೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...