ಯುಎಇ ವಿಮಾನ ದುರಂತ: ಭಾರತ ಮೂಲದ ಯುವ ವೈದ್ಯ ಸಾವು

Date:

ಯುನೈಟೆಡ್ ಅರಬ್ ಎಮಿರೇಟ್ಸ್‌ನ ರಾಸಲ್ ಖೈಮಾದಲ್ಲಿ ಇತ್ತೀಚೆಗೆ ನಡೆದ ಲಘು ವಿಮಾನ ದುರಂತದಲ್ಲಿ ಪೈಲಟ್ ಹಾಗೂ ಭಾರತ ಮೂಲದ ವೈದ್ಯರೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ.

ವೈಮಾನಿಕ ಕ್ಲಬ್ ನಲ್ಲಿ ತಾಣಗಳ ವೀಕ್ಷಣೆಗಾಗಿ ವಿಮಾನವನ್ನು ಬಾಡಿಗೆಗೆ ಪಡೆದಿದ್ದ ಡಾ ಸುಲೈಮಾನ್ ಅವರ ಕುಟುಂಬದವರ ಕಣ್ಣೆದುರೇ ಈ ದುರಂತ ಸಂಭವಿಸಿದೆ.

ಡಾ.ಸುಲೈಮಾನ್ ಅವರ ಕಿರಿಯ ಸಹೋದರ ಆ ಬಳಿಕ ವಿಮಾನಯಾನ ಕೈಗೊಳ್ಳುವವರಿದ್ದರು. 26 ವರ್ಷ ವಯಸ್ಸಿನ ಸುಲೈಮಾನ್ ಅಲ್ ಮಜೀದ್ ಯುಎಇಯಲ್ಲೇ ಹುಟ್ಟಿ ಬೆಳೆದವರು. ಕೋವ್ ರೊಟಾನಾ ಹೋಟೆಲ್ ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಮಾನ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ದುರಂತ ಸಂಭವಿಸಿತು ಎಂದು ತಂದೆ ಮಜೀದ್ ಮುಕ್ರಮ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುರಂತದಲ್ಲಿ 26 ವರ್ಷ ವಯಸ್ಸಿನ ಪಾಕಿಸ್ತಾನಿ ಮಹಿಳಾ ಪೈಲಟ್ ಕೂಡಾ ಅಸು ನೀಗಿದ್ದಾರೆ. ಈ ಅಪಘಾತವನ್ನು ಜನರಲ್ ಸಿವಿಲ್ ಏವಿಯೇಷನ್ ಅಥಾರಿಟಿ ದೃಢಪಡಿಸಿದ್ದು, ದುರಂತಕ್ಕೆ ಕಾರಣ ಪತ್ತೆ ಮಾಡಲು ತನಿಖೆ ನಡೆಯುತ್ತಿದೆ ಎಂದು ಪ್ರಕಟಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೀರ್ತಿಶನಿ ಹೆಗಲೇರಿದರೆ, ಕ್ರೀಡಾಪಟುಗಳು ಕೂಡ ಕುರೂಪಿಗಳಾಗುತ್ತಾರೆ…

ದುರಂತಕ್ಕೀಡಾದ ವಿಮಾನ ಜಝೀರಾ ಏವಿಯೇಷನ್ ಕ್ಲಬ್ ಗೆ ಸೇರಿದ್ದು ಎಂದು ಖಲೀಜ್ ಟೈಮ್ಸ್ ವರದಿ ಮಾಡಿದೆ.ಡಾ.ಸುಲೈಮಾನ್ ತಾಣಗಳ ವೀಕ್ಷಣೆಗಾಗಿ ಲಘುವಿಮಾನವನ್ನು ಬಾಡಿಗೆಗೆ ಪಡೆದಿದ್ದರು. ಏವಿಯೇಷನ್ ಕ್ಲಬ್ ನಲ್ಲಿ ಈ ವಿಶೇಷ ಅನುಭವವನ್ನು ವೀಕ್ಷಿಸಲು ತಂದೆ, ತಾಯಿ ಹಾಗೂ ತಮ್ಮ ಹಾಜರಿದ್ದರು.ಮುಂದಿನ ಬಾರಿ ವಿಮಾನ ಏರಲು ತಮ್ಮ ಸಜ್ಜಾಗಿದ್ದರು.

“ಲಘು ವಿಮಾನ ರೇಡಿಯೊ ಸಂಪರ್ಕ ಕಳೆದುಕೊಂಡಿದೆ ಎಂಬ ಮಾಹಿತಿ ಮೊದಲು ಲಭ್ಯವಾಯಿತು. ಬಳಿಕ ವಿಮಾನ ತುರ್ತುಭೂಸ್ಪರ್ಷ ಮಾಡಿದ್ದು, ವಿಮಾನದಲ್ಲಿದ್ದವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹೇಳಿದರು.

ನಾವು ಆಸ್ಪತ್ರೆ ತಲುಪಿದಾಗ, ಇಬ್ಬರೂ ತೀವ್ರ ಗಾಯಗೊಂಡಿರುವುದಾಗಿ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ನೀಡಿದರು. ನಾವು ನೋಡುವ ಮುನ್ನವೇ ಸುಲೈಮಾನ್ ಕೊನೆಯುಸಿರೆಳೆದಿದ್ದ. ಸಂಜೆ 4.30ರ ವೇಳೆಗೆ ಆತ ಮೃತಪಟ್ಟಿದ್ದಾಗಿ ದಾಖಲಿಸಲಾಗಿದೆ” ಎಂದು ಮಜೀದ್ ಮುಕ್ರಂ ವಿವರಿಸಿದರು.

ಹೊಸ ವರ್ಷದ ಸಂಭ್ರಮಾಚರಣೆಗೆ ಸಜ್ಜಾಗಿದ್ದ ಪ್ರತಿಭಾವಂತ ಯುವ ವೈದ್ಯ ಸುಲೈಮಾನ್ ಕುಟುಂಬ ಇದೀಗ ದುಃಖತಪ್ತವಾಗಿದೆ.ತಮ್ಮ ಬಾಳಿಗೆ ಬೆಳಕಾಗಿದ್ದ ಸುಲೈಮಾನ್ ಇಲ್ಲದೇ ಭವಿಷ್ಯ ಕತ್ತಲಾಗಿದೆ ಎಂದು ಕುಟುಂಬದವರು ಶೋಕಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...