ರೈಲುಗಳಲ್ಲಿ ಹಲಾಲ್ ಮಾಂಸ ಮಾತ್ರ ಬಳಕೆ: NHRC ನೋಟಿಸ್ ಬಳಿಕ ರೈಲ್ವೆ ಹೇಳಿದ್ದೇನು?

Date:

ಸದ್ಯ ರೈಲುಗಳಲ್ಲಿ ನೀಡುವ ಮಾಂಸಾಹಾರಿ ಊಟಗಳಲ್ಲಿ ಹಲಾಲ್ ಮಾಂಸವನ್ನು ಮಾತ್ರ ಬಳಸಲಾಗುತ್ತಿದೆ ಎಂಬ ವಿಚಾರವು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಈಗಾಗಲೇ ದೂರಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ರೈಲ್ವೆಗೆ ನೋಟಿಸ್ ನೀಡಿದೆ. ಈ ಎಲ್ಲ ಬೆಳವಣಿಗೆ ಬೆನ್ನಲ್ಲೇ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಗುರುವಾರ ಸ್ಪಷ್ಟೀಕರಣವನ್ನು ನೀಡಿದೆ.

2023ರಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಒಳಗಾಗಿದ್ದ ಈ ಹಲಾಲ್ ವಿವಾದ ಇತ್ತೀಚೆಗೆ ಮತ್ತೆ ಮುನ್ನೆಲೆಗೆ ಬಂದಿದೆ. ಹಾಗೆಯೇ NHRC ರೈಲ್ವೆಗೆ ನೋಟಿಸ್ ನೀಡಿದೆ ಎಂದು ವರದಿಗಳಾಗಿವೆ. ಈ ಬೆನ್ನಲ್ಲೇ “ರೈಲುಗಳಲ್ಲಿ ಬಡಿಸುವ ಊಟಗಳಿಗೆ ಹಲಾಲ್ ಪ್ರಮಾಣೀಕರಣಗೊಂಡ ಮಾಂಸವನ್ನು ಕಡ್ಡಾಯಗೊಳಿಸುವ ಯಾವುದೇ ಮಾರ್ಗಸೂಚಿಗಳಿಲ್ಲ” ಎಂದು IRCTC ಪುನರುಚ್ಚರಿಸಿದೆ.

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಕೃಷಿ ಕಾಯ್ದೆ ರದ್ದಾಗದಿದ್ದರೆ ದೆಹಲಿ ಮಾದರಿಯಲ್ಲಿ ಹೋರಾಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಕಂಪನಿಯು ಈ ಹಿಂದೆಯೂ ಇದೇ ರೀತಿಯ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, ಮಾಂಸಾಹಾರಿ ಆಹಾರವನ್ನು ಮುಖ್ಯವಾಗಿ ಕೋಳಿ ಮಾಂಸವನ್ನು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ, 2006ರ ಅಡಿಯಲ್ಲಿ ನಿಗದಿಪಡಿಸಿದ ಮಾನದಂಡಗಳ ಪ್ರಕಾರ ನೀಡಲಾಗುತ್ತದೆ ಎಂದು ಹೇಳಿದೆ.

ಕೇಂದ್ರ ಸರ್ಕಾರವು ನಿಗದಿಪಡಿಸಿದ ಮತ್ತು ಅನುಮೋದಿಸಿದ ಆಹಾರದ ವಿಚಾರದಲ್ಲಿ ರೈಲ್ವೆಗಳು ಬಹಳ ಕಟ್ಟುನಿಟ್ಟಾದ ಮಾನದಂಡಗಳನ್ನು ಅನುಸರಿಸುತ್ತವೆ. ಪರವಾನಗಿದಾರರು ಮತ್ತು ಆಹಾರ ಮಾರಾಟಗಾರರು FSSAI ನಿಗದಿಪಡಿಸಿದ ಎಲ್ಲಾ ಮಾನದಂಡಗಳನ್ನು ಪಾಲಿಸುವಂತೆ ನೋಡಿಕೊಳ್ಳಲಾಗುತ್ತದೆ ಎಂದೂ IRCTC ಒತ್ತಿಹೇಳಿದೆ.

ದೂರುದಾರರು ಭಾರತೀಯ ರೈಲ್ವೆಗಳು ಹಲಾಲ್ ಮಾಂಸವನ್ನು ಬಳಸಿ ತಯಾರಿಸಿದ ಮಾಂಸಾಹಾರಿ ಆಹಾರವನ್ನು ಮಾತ್ರ ನೀಡುತ್ತವೆ ಎಂದು ದೂರಿದ್ದರು. ಇದು ಧಾರ್ಮಿಕ ಆಧಾರದಲ್ಲಿ ತಾರತಮ್ಯಕ್ಕೆ ಕಾರಣವಾಗುತ್ತದೆ, ಪ್ರಯಾಣಿಕರ ಆಯ್ಕೆಯ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ. ಇದು ಹಿಂದೂ ಮತ್ತು ಸಿಖ್ ಪ್ರಯಾಣಿಕರಿಗೆ ಅವರ ಧಾರ್ಮಿಕ ನಂಬಿಕೆಗೆ ಅನುಗುಣವಾಗಿ ಊಟವನ್ನು ಪಡೆಯುವ ಅವಕಾಶವನ್ನು ನಿರಾಕರಿಸುತ್ತದೆ. ಧಾರ್ಮಿಕ ಸ್ವಾತಂತ್ರ್ಯ, ಸಮಾನತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ದೂರುದಾರರು ಹೇಳಿದ್ದರು.

ಈ ಸಂಬಂಧ ಮಾನವ ಹಕ್ಕುಗಳ ಆಯೋಗ ಭಾರತೀಯ ರೈಲ್ವೆಗೆ ನೋಟಿಸ್ ನೀಡಿದ್ದು, ಹಲಾಲ್ ಮಾಂಸವನ್ನು ಮಾತ್ರ ಬಳಕೆ ಮಾಡುವ ಪ್ರಕ್ರಿಯೆ ಮೂಲಭೂತವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗುವ ಸಾಧ್ಯತೆಯಿದೆ ಎಂದು ಮಾನವ ಹಕ್ಕುಗಳ ಆಯೋಗದ ಸದಸ್ಯ ಪ್ರಿಯಾಂಕ್ ಕನೂಂಗೊ ಅವರಿದ್ದ ಪೀಠ ಅಭಿಪ್ರಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...