ಡಿ. 26ರಿಂದ ರೈಲು ಪ್ರಯಾಣ ಇನ್ನಷ್ಟು ತುಟ್ಟಿ: ಟಿಕೆಟ್ ದರ ಹೆಚ್ಚಿಸಿದ ಭಾರತೀಯ ರೈಲ್ವೆ

Date:

ಡಿಸೆಂಬರ್ 26ರಿಂದ ರೈಲು ಪ್ರಯಾಣ ಇನ್ನಷ್ಟು ತುಟ್ಟಿಯಾಗಲಿದೆ. ಭಾರತೀಯ ರೈಲ್ವೆ ಭಾನುವಾರ ಹೊಸ ದರವನ್ನು ಪ್ರಕಟಿಸಿದ್ದು, ಟಿಕೆಟ್ ದರ ಹೆಚ್ಚಿಸಿದೆ. ಇದರಿಂದಾಗಿ ಭಾರತೀಯ ರೈಲ್ವೆಯು 600 ಕೋಟಿ ರೂಪಾಯಿ ಆದಾಯ ಗಳಿಸುವ ನಿರೀಕ್ಷೆಯಿದೆ.

ಹೊಸ ಟಿಕೆಟ್ ಬೆಲೆ ರಚನೆಯ ಪ್ರಕಾರ ಪ್ರಯಾಣಿಕರು ಸಾಮಾನ್ಯ ದರ್ಜೆಯಲ್ಲಿ 215 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣ ಮಾಡುವುದಾದರೆ ಪ್ರತಿ ಕಿ.ಮೀ.ಗೆ 1 ಪೈಸೆ ಮತ್ತು ಮೇಲ್/ಎಕ್ಸ್‌ಪ್ರೆಸ್ ನಾನ್-ಎಸಿ ಮತ್ತು ಎಸಿ ಕ್ಲಾಸ್‌ಗಳಲ್ಲಿ ಪ್ರತಿ ಕಿ.ಮೀ.ಗೆ 2 ಪೈಸೆ ಹೆಚ್ಚುವರಿ ಪಾವತಿಸಬೇಕಾಗುತ್ತದೆ. 215 ಕಿ.ಮೀ.ಗಿಂತ ಕಡಿಮೆ ಪ್ರಯಾಣಕ್ಕೆ ಟಿಕೆಟ್ ಬೆಲೆ ಹೆಚ್ಚಳವಿಲ್ಲ.

ಇದನ್ನು ಓದಿದ್ದೀರಾ? ಕೊಂಕಣ ರೈಲ್ವೆ ಭಾರತೀಯ ರೈಲ್ವೆಯಲ್ಲಿ ವಿಲೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು 500 ಕಿ.ಮೀ. ನಾನ್-ಎಸಿ ಪ್ರಯಾಣದ ಪ್ರಯಾಣಿಕರು ಹೆಚ್ಚುವರಿಯಾಗಿ ರೂ. 10 ಪಾವತಿಸಬೇಕಾಗುತ್ತದೆ. ಕಡಿಮೆ ಮತ್ತು ಮಧ್ಯಮ ಆದಾಯದ ಕುಟುಂಬಗಳಿಗೆ ಸಮಸ್ಯೆಯಾಗದಿರಲಿ ಎಂದು ರೈಲ್ವೆ ಉಪನಗರ ಮತ್ತು ಮಾಸಿಕ ಸೀಸನ್ ಟಿಕೆಟ್‌ಗಳ ದರವನ್ನು ಹೆಚ್ಚಿಸಿಲ್ಲ ಎಂದು ರೈಲ್ವೆ ಹೇಳಿಕೊಂಡಿದೆ. ರೈಲ್ವೆ ಸಚಿವಾಲಯದ ಪ್ರಕಾರ, 2025ರ ಜುಲೈನಲ್ಲಿ ದರ ಹೆಚ್ಚಳ ಮಾಡಿ ಈವೆರೆಗೆ ರೂ. 700 ಕೋಟಿ ಆದಾಯವನ್ನು ಗಳಿಸಲಾಗಿದೆ.

ಭಾರತದಲ್ಲಿ ರೈಲ್ವೆ ಸೇವೆಯು ಬಡ ಮತ್ತು ಮಧ್ಯಮ ವರ್ಗದ ಜನರ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿದೆ. ಹಾಗಾಗಿ ಈ ಸಾರಿಗೆ ವ್ಯವಸ್ಥೆಯ ಟಿಕೆಟ್ ದರ ಏರಿಕೆ ಮಾಡಿರುವುದು ನೇರವಾಗಿ ಬಡ, ಮಧ್ಯಮ ವರ್ಗದ ಜನರ ಮೇಲೆ ಪ್ರಭಾವ ಬೀರುತ್ತದೆ. 2018ರಿಂದ ಸರಕು ಸಾಗಣೆ ರೈಲುಗಳ ದರಗಳನ್ನು ಬದಲಾಯಿಸಲಾಗಿಲ್ಲ. ಆದರೆ ರೈಲ್ವೆ ಆದಾಯವನ್ನು ಪಡೆಯುವ ನಿಟ್ಟಿನಲ್ಲಿ ಪ್ರಯಾಣಿಕರ ಶುಲ್ಕವನ್ನು ಹೆಚ್ಚಿಸುವುದು ಸರಿಯಲ್ಲ ಎಂದು ಟೀಕಿಸಲಾಗುತ್ತಿದೆ.

“ರೈಲು, ಟೆಲಿಕಾಂ, ವಿಮಾನಯಾನ, ಮೆಟ್ರೋ ದರ, ಮನೆ ಬಾಡಿಗೆ ಹೆಚ್ಚಾಗುತ್ತಿದೆ. ಆದರೆ ನಮ್ಮ ಆದಾಯ ಮಾತ್ರ ಹೆಚ್ಚಾಗುತ್ತಿಲ್ಲ. ಇದು ಬೇಸರದ ಸಂಗತಿಯಾದರೂ ನಿಜ ವಿಷಯ” ಎಂದು ನೆಟ್ಟಿಗರು ಹೇಳಿದ್ದಾರೆ. “ಇಷ್ಟು ಟಿಕೆಟ್ ದರ ಏರಿಸಿದರೂ ಸೇವೆಯಲ್ಲಿ ಯಾವ ಬದಲಾವಣೆಯಿದೆ? 3ಎಸಿ ಅನ್ನು ಸ್ಲಿಪರ್ ಕ್ಲಾಸ್‌ನಂತೆ ಮಾಡಲಾಗಿದೆ, ಸ್ಲಿಪರ್ ಕ್ಲಾಸ್ ಜನರಲ್ ಬೋಗಿಯಾಗಿದೆ” ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...