30 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಶ್ರಮ ಅಗತ್ಯ; ವಾರಕ್ಕೆ 80-90 ಗಂಟೆ ಕೆಲಸ ಮಾಡಬೇಕು: ನೀತಿ ಆಯೋಗ ಮಾಜಿ ಸಿಇಒ

Date:

2047ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಸಾಧನೆಯನ್ನು ಮಾಡಬೇಕಾದರೆ ಭಾರತೀಯರು ಅಧಿಕ ಶ್ರಮ ಅಗತ್ಯವಾಗಿದೆ. ನಾನು ಪರಿಶ್ರಮಪಟ್ಟು ಕೆಲಸ ಮಾಡುವುದರ ಮೇಲೆ ನಂಬಿಕೆ ಹೊಂದಿದ್ದೇನೆ. ವಾರಕ್ಕೆ 80 ಗಂಟೆಯಾಗಲಿ ಅಥವಾ 90 ಗಂಟೆಯಾಗಲಿ ಭಾರತೀಯರು ಕಠಿಣ ಶ್ರಮಪಡುವುದು ಅಗತ್ಯವಾಗಿದೆ” ಎಂದು ನೀತಿ ಆಯೋಗದ ಮಾಜಿ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ.

ಪ್ರಸ್ತುತ ದೇಶದಲ್ಲಿ ಜನರ ಅದರಲ್ಲೂ ಮುಖ್ಯವಾಗಿ ಯುವಕರ ಉದ್ಯೋಗವಧಿ ಬಗ್ಗೆ ಅಧಿಕ ಚರ್ಚೆ ನಡೆಯುತ್ತಿದೆ. ಕೆಲವು ಕಾರ್ಪೋರೇಟ್ ಸಂಸ್ಥೆಗಳ ಮಾಲೀಕರುಗಳು ಯುವಕರು ವಾರಕ್ಕೆ 70 ಗಂಟೆ, 90 ಗಂಟೆ ಕೆಲಸ ಮಾಡಬೇಕು ಎಂಬ ಹೇಳಿಕೆಗಳನ್ನು ನೀಡಿ ತೀವ್ರ ವಾಗ್ದಾಳಿಗೆ ಗುರಿಯಾಗಿದ್ದಾರೆ. ಇವೆಲ್ಲವುದರ ನಡುವೆ ಇದೀಗ ನೀತಿ ಆಯೋಗದ ಮಾಜಿ ಸಿಇಒ ಕೂಡಾ ವಾರಕ್ಕೆ 80-90 ಗಂಟೆಗಳು ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಹೇಳಿ ಕಾರ್ಮಿಕ ಸಂಘಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇದನ್ನು ಓದಿದ್ದೀರಾ? 70 ಗಂಟೆ, 90 ಗಂಟೆ ಕೆಲಸ: ಉದ್ಯೋಗಿಗಳ ರಕ್ತ ಹೀರುವುದು ಲಾಭಕೋರ ಬಂಡವಾಳಿಗರ ಸಂಚು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಬಲವಾದ ಉದ್ಯೋಗ ನೀತಿಯಿಂದಾಗಿ ಜಪಾನ್, ದಕ್ಷಿಣ ಕೊರಿಯಾ ಮತ್ತು ಚೀನಾ ಆರ್ಥಿಕವಾಗಿ ಯಶಸ್ಸು ಕಂಡಿದೆ. ಭಾರತವೂ ಇದೇ ರೀತಿಯ ಮನಸ್ಥಿತಿ ಬೆಳೆಸುವ ಅಗತ್ಯವಿದೆ. ವಾರಕ್ಕೆ 80 ಆಗಲಿ ಅಥವಾ 90 ಗಂಟೆಯಾಗಲಿ ಭಾರತೀಯರು ಪರಿಶ್ರಮಪಟ್ಟು ಕೆಲಸ ಮಾಡಬೇಕು. 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಿಂದ 30 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಬೆಳೆಯುವುದು ನಿಮ್ಮ ಗುರಿಯಾಗಿದ್ದರೆ, ಮನರಂಜನೆ ಅಥವಾ ಸಿನಿಮಾ ಸ್ಟಾರ್‌ಗಳನ್ನು ಫಾಲೋ ಮಾಡುವುದರಿಂದ ಸಾಧಿಸಲು ಸಾಧ್ಯವಿಲ್ಲ” ಎಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಭಾರತವು 2047ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಬಹುದು ಎಂದು ಕೇಂದ್ರ ಸರ್ಕಾರವು ಅಂದಾಜಿಸಿದೆ. ಆದರೆ ಆ ಗುರಿ ತಲುಪಲು ಯುವಕರು ಮಿಷನ್‌ನಂತೆ ಕೆಲಸ ಮಾಡುವ ಅಗತ್ಯವಿದೆ ಎಂದು ಸ್ಪಷ್ಟಪಡಿಸುವ ಹೇಳಿಕೆಯನ್ನು ಅಮಿತಾಬ್ ಕಾಂತ್ ನೀಡಿದ್ದಾರೆ. ಈ ಗುರಿಯನ್ನು ತಲುಪಲು ಸರ್ಕಾರ ಯುವಕರ ಮೇಲೆ ಹೆಚ್ಚು ಒತ್ತಡ ಹೇರುವ, ಉದ್ಯೋಗ ಅವಧಿ ಹೆಚ್ಚಿಸುವಂತಹ ನೀತಿ ಜಾರಿ ಮಾಡುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? 70, 90 ಗಂಟೆ ಬಿಡಿ ವಾರಕ್ಕೆ 120 ಗಂಟೆ ಕೆಲಸ ಮಾಡಿ ಎಂದ ಎಲಾನ್‌ ಮಸ್ಕ್‌

ಇನ್ನು ಉದ್ಯೋಗ ಮತ್ತು ವೈಯಕ್ತಿಕ ಜೀವನದ ಸಮತೋಲನ ಬಗ್ಗೆ ಮಾತನಾಡಿದ ಅವರು, “ನಾನು ಪ್ರತಿದಿನ ಕೆಲಸ ಮಾಡುತ್ತೇನೆ, ವ್ಯಾಯಾಮ ಮಾಡುತ್ತೇನೆ. ಗೋಲ್ಫ್ ಆಟವಾಡುತ್ತೇನೆ. ಇವೆಲ್ಲವೂ ಮಾಡಿದರೂ ನಾನು ಅಧಿಕ ಕೆಲಸ ಮಾಡುತ್ತೇನೆ. ನಿಮಗಾಗಿ ದಿನಕ್ಕೆ ಒಂದುವರೆ ಗಂಟೆ ಇರಿಸಿ. ಅದನ್ನು ಬಿಟ್ಟು ಇನ್ನೂ 22.5 ಗಂಟೆ ಇರುತ್ತದೆ. ನಿಮ್ಮ ವೈಯಕ್ತಿಕ ಜೀವನ, ಉದ್ಯೋಗ ಜೀವನದ ಸಮತೋಲನ ಕಾಯ್ದುಕೊಳ್ಳಲು ಇಷ್ಟೊಂದು ಸಮಯ ಸಾಕಾಗುತ್ತದೆ. ಜನರು ಅತೀ ಅಧಿಕ ಕೆಲಸ ಮಾಡಬಾರದು ಎಂದು ಹೇಳುವುದನ್ನೇ ಫ್ಯಾಷನ್ ಮಾಡಿಕೊಳ್ಳಬೇಡಿ” ಎಂದರು.

ಈ ಹಿಂದೆ ಎಲ್‌&ಟಿ ಅಧ್ಯಕ್ಷ ಎಸ್‌ ಎನ್ ಸುಬ್ರಹ್ಮಣ್ಯ ಅವರು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು, ಭಾನುವಾರವೂ ಕೆಲಸ ಮಾಡಬೇಕು ಎಂದು ಹೇಳುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಅದಕ್ಕೂ ಮುನ್ನ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ವಾರಕ್ಕೆ 70 ದಿನ ಕೆಲಸ ಮಾಡಬೇಕು ಎಂದು ಹೇಳಿ, ತನ್ನ ಹೇಳಿಕೆಯನ್ನು ಪದೇ ಪದೇ ಸಮರ್ಥಿಸಿಕೊಂಡು ವಿವಾದದಲ್ಲಿ ಸಿಲುಕಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...