ಕೋವಿಡ್ ನಂತರ ಭಾರತದ ಅತಿದೊಡ್ಡ ಆರೋಗ್ಯ ಬಿಕ್ಕಟ್ಟು ‘ವಾಯು ಮಾಲಿನ್ಯ’; ವೈದ್ಯರ ಎಚ್ಚರಿಕೆ

Date:

ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ ಭಾರತ ಎದುರಿಸುತ್ತಿರುವ ಅತಿದೊಡ್ಡ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟು ವಾಯು ಮಾಲಿನ್ಯವಾಗಿದೆ. ತುರ್ತು ಕ್ರಮ ಕೈಗೊಳ್ಳದಿದ್ದರೆ ಪ್ರತಿ ವರ್ಷವೂ ಪರಿಸ್ಥಿತಿ ಭೀಕರವಾಗಿ ಹದಗೆಡುತ್ತಲೇ ಇರುತ್ತದೆ ಎಂದು ಯುಕೆ ಮೂಲದ ಭಾರತೀಯ ಶ್ವಾಸಕೋಶಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ. ತ್ವರಿತ ಮತ್ತು ಶಾಶ್ವತ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಗಳಿಗೆ ಸೂಚನೆ ನೀಡಿದ್ದಾರೆ.

ವಾಯು ಮಾಲಿನ್ಯದಿಂದ ಎದುರಾಗುವ ಕಾಯಿಲೆಗಳು ಸುನಾಮಿಯಂತೆ ಹೆಚ್ಚಾಗುತ್ತಿದೆ. ರೋಗನಿರ್ಣಯ ಮಾಡದೆ, ಚಿಕಿತ್ಸೆ ದೊರೆಯದೆ ಹಲವರು ಬಳಲುತ್ತಿದ್ದಾರೆ. ವಾಯು ಮಾಲಿನ್ಯವು ಭಾರತೀದ ಆರೋಗ್ಯ ವ್ಯವಸ್ಥೆ ಮತ್ತು ನಾಗರಿಕರ ಮೇಲೆ ಭಾರೀ, ಶಾಶ್ವತವಾದ ಹಾನಿಯನ್ನುಂಟುಮಾಡುತ್ತದೆ ಎಂದು ವೈದ್ಯರು ಪ್ರತಿಪಾದಿಸಿದ್ದಾರೆ.

ಡಿಸೆಂಬರ್‌ನಲ್ಲಿ, ದೆಹಲಿ ಆಸ್ಪತ್ರೆಗಳಲ್ಲಿ ಉಸಿರಾಟದ ಸಮಸ್ಯೆ ಎದುರಿಸುತ್ತಿರುವ ರೋಗಿಗಳ ಸಂಖ್ಯೆ 20ರಿಂದ 30%ರಷ್ಟು ಹೆಚ್ಚಾಗಿದೆ. ದೆಹಲಿಯ ವಾಯು ಮಾಲಿನ್ಯಕ್ಕೆ ವಾಹನಗಳು 40% ಕೊಡುಗೆ ನೀಡುತ್ತಿವೆ. ಪಳೆಯುಳಿಕೆ ಇಂಧನಗಳ ಬಳಕೆಯು ವಾಹನಗಳಿಂದ ವಾಯು ಮಾಲಿನ್ಯ ಹೆಚ್ಚಲು ಕಾರಣವಾಗಿದೆ. ಇದನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕೂಡ ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಇತ್ತೀಚೆಗೆ ನಡೆದ ಸಂಸತ್ ಅಧಿವೇಶನದಲ್ಲಿ ವಾಯು ಮಾಲಿನ್ಯದ ಕುರಿತು ಚರ್ಚೆಗಳು ನಡೆಯಲೇ ಇಲ್ಲ. ಭಾರತೀಯರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆಯನ್ನು ಬದಿಗೊತ್ತಿ, ಅಧಿವೇಶನ ಮುಗಿದೇ ಹೋಯಿತು. ಈ ಬಗ್ಗೆ, ವಿಪಕ್ಷಗಳು, ಪರಿಸರ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ವಾಯು ಮಾಲಿನ್ಯವನ್ನು ನಿಯಂತ್ರಿಸುವತ್ತ ಭಾರತ ಸರ್ಕಾರವು ತುರ್ತು ಗಮನ ಹರಿಸಬೇಕಿತ್ತು. ಆದರೆ, ಈಗಾಗಲೇ ಬಹಳ ತಡವಾಗಿದೆ. ಉತ್ತರ ಭಾರತದಲ್ಲಿ ವಾಸಿಸುವ ಲಕ್ಷಾಂತರ ಜನರಿಗೆ ಈಗಾಗಲೇ ಹಾನಿಯುಂಟು ಮಾಡಿದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು” ಎಂದು ಲಿವರ್‌ಪೂಲ್‌ನ ಸಲಹೆಗಾರ ಶ್ವಾಸಕೋಶಶಾಸ್ತ್ರಜ್ಞ ಮತ್ತು ಭಾರತದ ‘ಕೋವಿಡ್-19 ಸಲಹಾ ಸಮಿತಿ’ಯ ಮಾಜಿ ಸದಸ್ಯ ಮನೀಶ್ ಗೌತಮ್ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ವಾಯು ಮಾಲಿನ್ಯದ ಚರ್ಚೆಯೇ ಇಲ್ಲದೆ ಮುಗಿಯಿತು ಸಂಸತ್ ಅಧಿವೇಶನ!

“ಮಾಲಿನ್ಯ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕ್ರಮಗಳು ನಿರ್ಣಾಯಕವಾಗಿದ್ದರೂ, ಸದ್ಯದ ಪರಿಸ್ಥಿತಿಗೆ ಅದಷ್ಟೇ ಸಾಕಾಗುವುದಿಲ್ಲ. ಭಾರತವು ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ವಿಸ್ತರಿಸಬೇಕು. ಸರ್ಕಾರದ ಕ್ರಮಗಳು ಆರಂಭಿಕ ರೋಗನಿರ್ಣಯ ಮತ್ತು ರಚನಾತ್ಮಕ ಚಿಕಿತ್ಸಾ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತುಕೊಡಬೇಕು” ಎಂದು ಅವರು ಹೇಳಿದ್ದಾರೆ.

ಲಂಡನ್‌ನ ಸೇಂಟ್ ಜಾರ್ಜ್ ವಿಶ್ವವಿದ್ಯಾಲಯ ಆಸ್ಪತ್ರೆಯ ಹೃದ್ರೋಗತಜ್ಞ ರಾಜಯ್ ನಾರಾಯಣ್ ಅವರ ಪ್ರಕಾರ, ವಾಯುಮಾಲಿನ್ಯವು ಹೃದಯರಕ್ತನಾಳ, ಉಸಿರಾಟ, ನರವಿಜ್ಞಾನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದಕ್ಕೆ, ಹಲವಾರು ವೈಜ್ಞಾನಿಕ ಪುರಾವೆಗಳು ಇವೆ. ಸಮಸ್ಯೆಯನ್ನು ಪರಿಹರಿಸುವಲ್ಲಿ ಯಾವುದೇ ವಿಳಂಬವು ಆರೋಗ್ಯ ಮತ್ತು ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ.

ಅಲ್ಪಾವಧಿಯ ಕ್ರಮಗಳು ತಕ್ಷಣದ ಸೋಂಕಿಗೆ ಒಳಗಾಗುವಿಕೆಯನ್ನು ಕಡಿಮೆ ಮಾಡಬಹುದಾದರೂ, ಶುದ್ಧ ಗಾಳಿಗೆ ಆದ್ಯತೆ ನೀಡುವ, ದುರ್ಬಲ ಜನಸಂಖ್ಯೆಯನ್ನು ರಕ್ಷಿಸುವ ಹಾಗೂ ಎಲ್ಲ ಕ್ಷೇತ್ರಗಳನ್ನು ಒಳಗೊಂಡು ವೈಜ್ಞಾನಿಕ ನೀತಿಗಳನ್ನು ರೂಪಿಸುವುದರಲ್ಲಿ ನಿಜವಾದ ಪರಿಹಾರವಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...