ಉತ್ತರ ಪ್ರದೇಶ | ದೇಶದ ಹಿರಿಯ ಎಸ್‌ಪಿ ಸಂಸದ ಶಫೀಕುರ್ ರೆಹಮಾನ್ ಬರ್ಕ್ ನಿಧನ

Date:

ದೇಶದ ಹಿರಿಯ ಸಂಸದರಾಗಿದ್ದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫೀಕುರ್ ರೆಹಮಾನ್ ಬರ್ಕ್ ಮಂಗಳವಾರ ಬೆಳಗ್ಗೆ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಸಂಸದ ಶಫೀಕುರ್ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಈ ತಿಂಗಳ ಆರಂಭದಲ್ಲಿ, ಆರೋಗ್ಯ ಹದಗೆಟ್ಟ ಕಾರಣ, ಅವರನ್ನು ಮೊರಾದಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. ಪ್ರಸ್ತುತ ಇವರು ಸಂಭಾಲ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಫೀಕುರ್ ರೆಹಮಾನ್ ಬರ್ಕ್ ಅವರು ಜುಲೈ 11, 1930ರಂದು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಜನಿಸಿದ್ದರು. 1996ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಗೆದ್ದಿದ್ದರು. ಶಫೀಕುರ್ ರೆಹಮಾನ್ ಅವರು ನಾಲ್ಕು ಬಾರಿ ಶಾಸಕರಾಗಿ ಮತ್ತು ಐದು ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಐದು ಬಾರಿ ಸಂಸದರಾದ ಪೈಕಿ ನಾಲ್ಕು ಬಾರಿ ಎಸ್‌ಪಿಯಿಂದ ಗೆದ್ದಿದ್ದರೆ, 2009ರಲ್ಲಿ ಒಮ್ಮೆ ಬಿಎಸ್‌ಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಅದರಲ್ಲೂ ಮೂರು ಬಾರಿ ಮೊರಾದಾಬಾದ್‌ನಿಂದ ಸಂಸದರಾದರೆ, ಎರಡು ಬಾರಿ ಸಂಭಾಲ್‌ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಗೆಲುವು ಕಾಣುವ ಮೂಲಕ ಸಂಸದರಾಗಿದ್ದರಿಂದ ದೇಶದ ಅತೀ ಹಿರಿಯ ಸಂಸದ ಎಂಬ ಕೀರ್ತಿಗೂ ಇವರು ಪಾತ್ರರಾಗಿದ್ದರು.

ಶಫೀಕರ್ ರೆಹಮಾನ್ ಬರ್ಕ್‌ ಅವರ ನಿಧನಕ್ಕೆ ಎಸ್‌ಪಿ ಮುಖಂಡ ಹಾಗೂ ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಸಂತಾಪ ಸೂಚಿಸಿದ್ದು, ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ಸಮಾಜವಾದಿ ಪಕ್ಷದ ಐಟಿ ಸೆಲ್ ಕೂಡ ಸಂತಾಪ ಸೂಚಿಸಿ ಪೋಸ್ಟ್ ಹಾಕಿದ್ದು, “ನಮ್ಮ ಪಕ್ಷದ ಹಿರಿಯ ನಾಯಕ ಮತ್ತು ಹಲವು ಬಾರಿ ಸಂಸದರಾಗಿದ್ದ  ಶಫೀಕರ್ ರಹಮಾನ್ ಬರ್ಕ್ ಸಾಹೇಬ್ ಅವರ ನಿಧನವು ಅತ್ಯಂತ ದುಃಖಕರವಾದುದು. ಅವರ ಆತ್ಮಕೆ ಶಾಂತಿ ಸಿಗಲಿ. ಮೃತರ ಕುಟುಂಬದ ಸದಸ್ಯರಿಗೆ ಈ ಅಪಾರ ದುಃಖವನ್ನು ಭರಿಸುವ ಶಕ್ತಿ ಸಿಗಲಿ” ಎಂದು ತಿಳಿಸಿದೆ.

ಸಂಸತ್‌ನಲ್ಲಿ, “ನಾನು ಇಸ್ಲಾಂ ಧರ್ಮವನ್ನು ಅನುಸರಿಸುವವನು. ಹಾಗಾಗಿ, ನಾನು ವಂದೇ ಮಾತರಂ ಹಾಡನ್ನು ಹಾಡುವುದಿಲ್ಲ. ಅದು ನನ್ನ ನಂಬಿಕೆಗೆ ವಿರುದ್ಧವಾದುದು” ಎನ್ನುವ ಮೂಲಕ ಬಿಜೆಪಿಗರ ಕೆಂಗಣ್ಣಿಗೆ ಐದು ಬಾರಿಯ ಸಂಸದರಾದ ಶಫೀಕುರ್ ರೆಹಮಾನ್ ಬರ್ಕ್ ಗುರಿಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...