ಭಾರತದ 144 ಕೋಟಿ ಜನಸಂಖ್ಯೆಯಲ್ಲಿ 14ರೊಳಗಿನ ವಯಸ್ಸಿನವರೇ ಹೆಚ್ಚು

Date:

ಭಾರತದ ಜನಸಂಖ್ಯೆ ಅಂದಾಜು 144 ಕೋಟಿ ಇದ್ದು, 14 ವಯೋಮಾನದವರು ಶೇ.24 ರಷ್ಟಿದ್ದಾರೆ ಎಂದು ವಿಶ್ವಸಂಸ್ಥೆಯ ಜನಸಂಖ್ಯೆ ನಿಧಿಯ ವಿಶ್ವ ಜನಸಂಖ್ಯಾ ಸ್ಥತಿ (ಯುಎನ್‌ಎಫ್‌ಪಿಎ)ಯ 2024ರ ವರದಿಯ ಅಂಕಿಅಂಶಗಳು ತಿಳಿಸಿವೆ.

ಯುಎನ್‌ಎಫ್‌ಪಿಎದಲ್ಲಿನ ಲೈಂಗಿಕ ಹಾಗೂ ಸಂತಾನೋತ್ಪತ್ತಿಯ ಆರೋಗ್ಯ ಮತ್ತು ಹಕ್ಕುಗಳಲ್ಲಿನ ಅಸಮಾನತೆ ಹೋಗಲಾಡಿಸುವ ವರದಿಯ ಪ್ರಕಾರ ಭಾರತದ ಜನಸಂಖ್ಯೆ ಕಳೆದ 77 ವರ್ಷಗಳಲ್ಲಿ ದುಪ್ಪಟ್ಟು ಹೆಚ್ಚಾಗಿದೆ.

2011ರಲ್ಲಿ ಹಮ್ಮಿಕೊಳ್ಳಲಾದ ಕೊನೆಯ ಜನಗಣತಿಯ ಅವಧಿಯಲ್ಲಿ ಭಾರತದ ಜನಸಂಖ್ಯೆ 121 ಕೋಟಿಯಷ್ಟು ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರದಿಯ ಪ್ರಕಾರ ಭಾರತದ ಜನಸಂಖ್ಯೆಯಲ್ಲಿ 0-14 ವರ್ಷದೊಳಗಿನ ವಯೋಮಾನದವರು ಶೇ. 24 ರಷ್ಟಿದ್ದರೆ, 10 ರಿಂದ 19 ವರ್ಷದೊಳಗಿನ ವಯಸ್ಸಿನವರು ಶೇ.17 ರಷ್ಟಿದ್ದಾರೆ.

10 ರಿಂದ 24ರೊಳಗಿನ ವಯಸ್ಕರು ಶೇ.26ರಷ್ಟಿದ್ದರೆ, 15 ರಿಂದ 64 ವಯಸ್ಸಿನವರು ಶೇ.68ರಷ್ಟಿದ್ದಾರೆ. 65 ಹಾಗೂ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಶೇ.7 ರಷ್ಟಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಭಾರತದಲ್ಲಿ ಪುರುಷರ ಜೀವಿತಾವಧಿ 71 ವರ್ಷವಿದ್ದರೆ, ಮಹಿಳೆಯರ ಆಯಸ್ಸು 74 ವರ್ಷವಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

ಈ ವರದಿಯಲ್ಲಿ ಕಂಡುಬಂದಂತೆ ವಿಶ್ವದಾದ್ಯಂತ ಅತ್ಯಂತ ಅಂಚಿನಲ್ಲಿರುವ ಸಮುದಾಯಗಳನ್ನು ಲೈಂಗಿಕ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಪ್ರಗತಿಯನ್ನು ಕಳೆದ 30 ವರ್ಷಗಳಲ್ಲಿ ಹೆಚ್ಚು ನಿರ್ಲಕ್ಷಿಸಲಾಗಿದೆ.

ವರದಿಗಳ ಪ್ರಕಾರ 2006 ರಿಂದ 2023ರವರೆಗೆ ಭಾರತದ ಬಾಲ್ಯ ವಿವಾಹಗಳು ಶೇ.23 ರಷ್ಟಿದೆ. ತಾಯಿಯ ಮರಣ ವಿಶ್ವದಾದ್ಯಂತ ಶೇ.8ಕ್ಕೆ ಹೋಲಿಸಿದರೆ ಭಾರತದಲ್ಲಿ ಗಣನೀಯವಾಗಿ ಕುಸಿದಿದೆ. ತಾಯಂದಿರ ಮರಣದ ಪ್ರಮಾಣವು ಭಾರತದಲ್ಲಿ ಹೆಚ್ಚಾಗುತ್ತಲೇ ಇದೆ ಹೇಳಲಾಗಿದೆ.

ಮಕ್ಕಳಿಗೆ ಜನ್ಮ ನೀಡುವ ಸಂದರ್ಭದಲ್ಲಿ ತಾಯಂದಿರು ಮರಣಿಸುವ ಪ್ರಮಾಣ ಭಾರತದ 114 ಜಿಲ್ಲೆಗಳಲ್ಲಿ ಶೇ.210ಕ್ಕಿಂತ ಹೆಚ್ಚಿದೆ. ಅರುಣಾಚಲ ಪ್ರದೇಶದ ತಿರಾಪ್ ಜಿಲ್ಲೆಯಲ್ಲಿ ಮಕ್ಕಳಿಗೆ ಜನ್ಮ ನೀಡುವ ವೇಳೆಯಲ್ಲಿ ಮರಣಿಸುವ ತಾಯಂದಿರ ಪ್ರಮಾಣ ಅತ್ಯಂತ ಹೆಚ್ಚಿದೆ ಎಂದು ವರದಿಯ ಅಂಕಿಅಂಶಗಳು ಹೇಳುತ್ತವೆ.

ವಿಕಲಾಂಗತೆಯುಳ್ಳವರು, ವಲಸಿಗರು ಹಾಗೂ ನಿರಾಶ್ರಿತರು ಅಲ್ಪಾಸಂಖ್ಯಾತರು, ಲಿಂಗತ್ವ ಅಲ್ಪಸಂಖ್ಯಾತರು, ಶೋಷಿತ ಸಮುದಾಯದಲ್ಲಿನ ಮಹಿಳೆಯರು ಹಾಗೂ ಬಾಲಕಿಯರು  ಲೈಂಗಿಕ ಹಾಗೂ ಸಂತಾನೋತ್ಪತ್ತಿ ಆರೋಗ್ಯದ ತೊಂದರೆಗಳನ್ನು ಹೆಚ್ಚು ಅನುಭವಿಸುತ್ತಿದ್ದಾರೆ. ಅಲ್ಲದೆ ಲೈಂಗಿಕತೆಯ ಸ್ವಾತಂತ್ರ ಹಾಗೂ ಸಂತಾನೋತ್ಪತ್ತಿ ರಕ್ಷಣೆ ಪಡೆಯಲು ಸಾಧ್ಯವಾಗುತ್ತಿಲ್ಲ.

ಶೇ.25ರಷ್ಟು ಮಹಿಳೆಯರು ತಮ್ಮ ಪತಿಯರಿಗೆ ಲೈಂಗಿಕತೆ ಬೇಡ ಎಂದು ಹೇಳಲು ಆಗುತ್ತಿಲ್ಲ. ಹತ್ತರಲ್ಲಿ ಒಬ್ಬ ಮಹಿಳೆಯರು ಗರ್ಭನಿರೋಧಕ ತೆಗೆದುಕೊಳ್ಳುವ ಬಗ್ಗೆ ಸ್ವಂತ ನಿರ್ಧಾರ ತೆಗೆದುಕೊಳ್ಳಲು ಆಗುತ್ತಿಲ್ಲ.

ವರದಿಗಳ ಪ್ರಕಾರ ದಲಿತಪರ ಕಾರ್ಯಕರ್ತರು ಕೆಲಸದ ಸ್ಥಳ ಹಾಗೂ ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯ ಎದುರಿಸುತ್ತಿರುವ ಮಹಿಳೆಯರಿಗೆ ಕಾನೂನು ರಕ್ಷಣೆ ನೀಡಬೇಕೆಂದು ಹೋರಾಟ ನಡೆಸುತ್ತಲೆ ಇದ್ದಾರೆ. ಅರ್ಧದಷ್ಟು ದಲಿತ ಮಹಿಳೆಯರಿಗೆ ಪ್ರಸವಪೂರ್ವ ಆರೈಕೆ ದೊರೆಯುತ್ತಿಲ್ಲ. ಲಿಂಗ ಆಧಾರಿದ ದಬ್ಬಾಳಿಕೆಗಳು ಕೂಡ ಮುಂದುವರೆಯುತ್ತಲೆ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...