ಜಿ 20 ಶೃಂಗಸಭೆ | ಚೀನಾ ವಿರೋಧಕ್ಕೆ ಭಾರತ ತೀಕ್ಷ್ಣ ಪ್ರತಿಕ್ರಿಯೆ

Date:

  • ವಿವಾದಿತ ಸ್ಥಳದಲ್ಲಿ ಜಿ 20 ಸಭೆ ನಡೆಸಲು ಚೀನಾ ಆಕ್ಷೇಪ
  • ಶೃಂಗಸಭೆಗೆ ಹೆಸರು ನೋಂದಾಯಿಸಿಕೊಳ್ಳದ ಟರ್ಕಿ, ಸೌದಿ ಅರೇಬಿಯಾ

ಜಿ 20 ಶೃಂಗಸಭೆ ಸಮಾರಂಭವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಯೋಜಿಸುತ್ತಿರುವ ಭಾರತ ನಿರ್ಧಾರಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಶನಿವಾರ (ಮೇ 20) ಮಾಧ್ಯಮಗಳು ವರದಿ ಮಾಡಿವೆ.

ಚೀನಾ ಆರೋಪಕ್ಕೆ ಭಾರತ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ.

ವಿವಾದಿತ ಕಾಶ್ಮೀರ ಪ್ರದೇಶದಲ್ಲಿ ಸಮಾರಂಭ ನಡೆಸುವುದನ್ನು ಚೀನಾ ವಿರೋಧಿಸಿದ್ದು ಶ್ರೀನಗರದಲ್ಲಿ ಆಯೋಜಿಸುವ ಜಿ 20 ಶೃಂಗಸಭೆ ಸಮಾರಂಭಕ್ಕೆ ಟರ್ಕಿ ಹಾಗೂ ಸೌದಿ ಅರೇಬಿಯಾ ರಾಷ್ಟ್ರಗಳು ಹೆಸರು ನೋಂದಾಯಿಸಿಕೊಂಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ವಿವಾದಿತ ಸ್ಥಳಗಳಲ್ಲಿ ಜಿ 20 ಸಭೆಗಳನ್ನು ಆಯೋಜಿಸುವುದನ್ನು ಚೀನಾ ವಿರೋಧಿಸುತ್ತದೆ. ಅಂತಹ ಸಭೆಗಳಲ್ಲಿ ನಾವು ಭಾಗವಹಿಸುವುದಿಲ್ಲ” ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್‌ ವೆಗ್ಬಿನ್‌ ಶುಕ್ರವಾರ (ಮೇ 19) ಹೇಳಿದ್ದರು.

ಜಿ 20 ಶೃಂಗಸಭೆಯ ಸಮಾರಂಭಕ್ಕೆ ಸಂಬಂಧಿಸಿ ಚೀನಾ ಹೇಳಿಕೆಗೆ ಭಾರತ ಪ್ರತಿಕ್ರಿಯಿಸಿದೆ.

“ತನ್ನ ಸ್ವಂತ ಭೂಭಾಗದಲ್ಲಿ ಸಬೆಗಳನ್ನು ನಡೆಸಲು ಭಾರತ ಮುಕ್ತವಾಗಿದೆ. ಚೀನಾದೊಂದಿಗೆ ದೇಶ ಸಾಮಾನ್ಯ ಒಪ್ಪಂದ ಮಾಡಿಕೊಳ್ಳಲು ಗಡಿಯಲ್ಲಿ ಚೀನಾ ಶಾಂತಿ ಹಾಗೂ ನೆಮ್ಮದಿ ಕಾಯ್ದುಕೊಳ್ಳುವುದು ಅಗತ್ಯವಾಗಿದೆ” ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ.

3ನೇ ಜಿ 20 ಪ್ರವಾಸೋದ್ಯಮ ಕಾರ್ಯ ಸಮೂಹ ಸಭೆಯು ಭಾರೀ ಭದ್ರತೆಯೊಂದಿಗೆ ಮೇ 22 ರಿಂದ 24 ರವರೆಗೆ ಶ್ರೀನಗರದಲ್ಲಿ ನಡೆಯಲಿದೆ.

2019ರಲ್ಲಿ ವಿಶೇಷ ಸ್ಥಾನಮಾನ ಹಿಂತೆಗೆದುಕೊಂಡು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಶೃಂಗಸಭೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಮೊದಲ ಪ್ರಮುಖ ಅಂತಾರಾಷ್ಟ್ರೀಯ ಕಾರ್ಯಕ್ರಮವಾಗಿದೆ.

ಶ್ರೀನಗರದಲ್ಲಿ ನಡೆಯುವ ಸಭೆಯಲ್ಲಿ ಜಿ 20 ದೇಶಗಳ ಸುಮಾರು 60 ಪ್ರತಿನಿಧಿಗಳು ಭಾಗವಹಿಸುವ ಸಾಧ್ಯತೆ ಇದೆ. ಇದಕ್ಕಿಂತ ಮೊದಲು ಸುಮಾರು 100 ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಬಹುದು ಎಂದು ಅಂದಾಜಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಖಾತೆ ಬದಲಾವಣೆ ಶಿಕ್ಷೆಯಲ್ಲ, ಪ್ರಧಾನಿ ಮೋದಿ ದೂರದೃಷ್ಟಿ: ಕಿರಣ್ ರಿಜಿಜು

ಈ ಸಭೆಯಿಂದ ದೂರ ಉಳಿಯಲು ಟರ್ಕಿ ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಸೌದಿ ಅರೇಬಿಯಾ ಸಭೆಯಲ್ಲಿ ಭಾಗವಹಿಸಲು ತನ್ನ ಹೆಸರು ನೋಂದಣಿ ಮಾಡಿಕೊಂಡಿಲ್ಲ ಎಂದು ಮೂಲಗಳು ಹೇಳಿವೆ.

ಜಿ 20 ಶೃಂಗಸಭೆ ಸಮಾರಂಭ ಹಿನ್ನೆಲೆ ಕಾಶ್ಮೀರ ಹಾಗೂ ಶ್ರೀನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...