ನೆರೆಮನೆಯವರಿಂದ ಜೀವ ಬೆದರಿಕೆ; ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ವ್ಯಕ್ತಿ: ವಿಡಿಯೋ ವೈರಲ್

Date:

ತನ್ನ ನೆರೆಮನೆಯವರಿಂದ ಜೀವ ಬೆದರಿಕೆಯಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ಘಟನೆ ಇಂದೋರ್‌ನ ಹೀರಾ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದ್ದು, ಸದ್ಯ ಈ ವ್ಯಕ್ತಿಯ ವಿಡಿಯೋ ವೈರಲ್ ಆಗುತ್ತಿದೆ.

ಸತೀಶ್ ಚೌಹಾಣ್ ಎಂಬ ವ್ಯಕ್ತಿ ತನ್ನ ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿಕೊಂಡಿದ್ದಾರೆ. ಆಸ್ತಿ ವಿವಾದದ ಕುರಿತು ನೆರೆಮನೆಯವರಿಂದ ಜೀವ ಬೆದರಿಕೆಯಿದೆ ಮತ್ತು ನಿರಂತರ ಕಿರುಕುಳವಿದೆ. ಆದ್ದರಿಂದ ತನ್ನನ್ನು ಮತ್ತು ತನ್ನ ಕುಟುಂಬವನ್ನು ರಕ್ಷಿಸಿಕೊಳ್ಳಲು ಈ ರೀತಿ ವ್ಯವಸ್ಥೆ ಮಾಡಿಕೊಂಡಿದ್ದೇನೆ ಎಂದು ಸತೀಶ್ ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಶೌಚಾಲಯದಲ್ಲೇ ಕುಳಿತು ಹೈಕೋರ್ಟ್‌ ಕಲಾಪದಲ್ಲಿ ಭಾಗವಹಿಸಿದ ಯುವಕ: ವಿಡಿಯೋ ವೈರಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಸತೀಶ್ ಕ್ಯಾಮೆರಾ ಅಳವಡಿಸಿದ ಹೆಲ್ಮೆಟ್ ಧರಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಸತೀಶ್, “ನನ್ನ ನೆರೆಮನೆಯವರು ಆಸ್ತಿಯನ್ನು ದೋಚಲು ಪ್ರಯತ್ನಿಸುತ್ತಿದ್ದಾರೆ. ನನಗೆ ಮತ್ತು ನನ್ನ ಕುಟುಂಬಕ್ಕೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪರಿಸ್ಥಿತಿ ಹದಗೆಟ್ಟಿದೆ. ಅದಕ್ಕೆ ಯಾವುದೇ ಸಂದರ್ಭ ಎದುರಾದರೂ ಅದು ಯಾವಾಗಲೂ ರೆಕಾರ್ಡ್ ಆಗುವಂತೆ ನನ್ನ ಹೆಲ್ಮೆಟ್‌ನಲ್ಲಿ ಕ್ಯಾಮೆರಾ ಅಳವಡಿಸಬೇಕಾಯಿತು. ನಮಗೆ ಏನಾದರೂ ಸಂಭವಿಸಿದರೆ ದೃಶ್ಯಗಳು ಸಾಕ್ಷಿಯಾಗುತ್ತದೆ” ಎಂದು ಸತೀಶ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಇನ್ನು “ಬಲಿರಾಮ್ ಚೌಹಾಣ್ ಮತ್ತು ಮುನ್ನಾ ಚೌಹಾಣ್ ವಿರುದ್ಧ ಪೊಲೀಸರಿಗೆ ಹಲವು ಲಿಖಿತ ದೂರುಗಳನ್ನು ಸಲ್ಲಿಸಿದ್ದೇನೆ. ಆದರೆ ಇಲ್ಲಿಯವರೆಗೆ ಯಾವುದೇ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ” ಎಂದು ಸತೀಶ್ ಹೇಳಿಕೊಂಡಿದ್ದಾರೆ.

ಸದ್ಯ ನಮ್ಮ ಸುರಕ್ಷತೆ ಮಾಡಬೇಕಾದವರಿಂದ ಸಹಾಯ ದೊರೆಯದೆ ಇದ್ದಾಗ ನಾಗರಿಕರು ತಮ್ಮ ಸುರಕ್ಷತೆಗೆ ತಾವೇ ವ್ಯವಸ್ಥೆ ಮಾಡಿಕೊಳ್ಳುತ್ತಾರೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಹುಟ್ಟಿಕೊಂಡಿದೆ.

ಇದನ್ನು ಓದಿದ್ದೀರಾ? ಮಂಗಳೂರು | ರಥೋತ್ಸವದ ವೇಳೆ ಮುರಿದು ಬಿದ್ದ ಬಪ್ಪನಾಡು ದೇವಸ್ಥಾನದ ರಥ ! ವಿಡಿಯೋ ವೈರಲ್

ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಗೆ ಸಂಬಂಧಿಸಿದಂತೆ ಎರಡೂ ಕಡೆಯವರು ಈ ಹಿಂದೆ ಘರ್ಷಣೆ ನಡೆಸಿದ್ದರು. ಇದರಿಂದಾಗಿ ತೀವ್ರ ವಾಗ್ವಾದ ನಡೆದಿದೆ. ನಾವು ಮಧ್ಯಸ್ಥಿಕೆ ವಹಿಸಲು ಪ್ರಯತ್ನಿಸಿದೆವು. ಆದರೆ ಇದೀಗ ಕ್ಯಾಮೆರಾ ಇರುವ ಹೆಲ್ಮೆಟ್ ಧರಿಸಿಕೊಂಡಿದ್ದಾರೆ ಎಂಬ ವಿಡಿಯೋ ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಸತೀಶ್ ತನ್ನ ಮನೆಯ ಹೊರಗೆ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದು ಇದು ಇನ್ನಷ್ಟು ವಾಗ್ವಾದ, ಗಲಾಟೆಗೆ ಕಾರಣವಾಗಿದೆ. ಈ ಸಿಸಿಟಿವಿಯಲ್ಲಿ ನೆರೆಮನೆಯವರ ಸ್ನಾನಗೃಹದ ದೃಶ್ಯ ಸೆರೆಯಾಗಿದೆ ಎಂದು ಆರೋಪಿಸಲಾಗಿದೆ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದ್ದು, ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...