ಇನ್ಸ್‌ಪೆಕ್ಟರ್‌ ಹತ್ಯೆ ಪ್ರಕರಣ: ಖುಲಾಸೆಗೊಂಡಿದ್ದ ಪೊಲೀಸ್‌ ಅಧಿಕಾರಿಗೆ ಜೀವಾವಧಿ ಶಿಕ್ಷೆ

Date:

ಸಹಾಯಕ ಪೊಲೀಸ್‌ ಇನ್ಸ್‌ಪೆಕ್ಟರ್‌ (ಎಪಿಐ) ಅಶ್ವಿನಿ ಬಿದ್ರೆ-ಗೊರೆ ಅವರ ಹತ್ಯೆ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಪೊಲೀಸ್‌ ಅಧಿಕಾರಿ ಅಭಯ್ ಕುರುಂಡ್ಕರ್‌ ಅವರನ್ನು ಇದೀಗ ಅಪರಾಧಿ ಎಂದು ಘೋಷಿಸಲಗಿದೆ. ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಮುಂಬೈನಲ್ಲಿ ಎಪಿಐ ಅಶ್ವಿನಿ ಬಿದ್ರೆ ಮತ್ತು ಪೊಲೀಸ್‌ ಅಧಿಕಾರಿ ಅಬಯ್ ಕುರುಂಡ್ಕರ್ ಒಟ್ಟಿಗೆ ಸೇವೆ ಸಲ್ಲಿಸುತ್ತಿದ್ದರು. ಅವರ ನಡುವೆ ಪ್ರೇಮ ಸಂಬಂಧವೂ ಇತ್ತು ಎಂದು ಹೇಳಲಾಗಿದೆ. 2016ರ ಏಪ್ರಿಲ್‌ನಲ್ಲಿ ಅಶ್ವಿನಿ ಅವರನ್ನು ಹತ್ಯೆಗೈದು, ಅವರ ಮೃತದೇಹವನ್ನು ತುಂಡು-ತುಂಡಾಗಿ ಕತ್ತರಿಸಿ ಎಸೆಯಲಾಗಿತ್ತು. ಅವರನ್ನು ಅಭಯ್ ಕುರುಂಡ್ಕರ್ ಅವರೇ ಹತ್ಯೆ ಮಾಡಿದ್ದಾರೆ ಎಂದು ಬಂಧಿಸಲಾಗಿತ್ತು.

ಆದರೆ, ಅಶ್ವಿನಿ ಅವರ ಮೃತದೇಹ ಪತ್ತೆಯಾಗದ ಕಾರಣ, ಅಭಯ್ ಅವರನ್ನು ಅಪರಾಧಿ ಎಂದು ಸಾಬೀತು ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಅವರನ್ನು ಅಧೀನ ನ್ಯಾಯಾಲಯ ಖುಲಾಸೆಗೊಳಿಸಿತ್ತು. ಎಪಿಐ ಅಶ್ವಿನಿ ಬಿದ್ರೆ ಅವರ ಕುಟುಂಬದವರು ಮೇಲಿನ ನ್ಯಾಯಾಲಯಕ್ಕೆ ಅಪೀಲು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿಯ ವಿಚಾರಣೆ ನಡೆಸಿರುವ ಪನ್ವೇಲ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ.ಜಿ.ಪಲ್ದೇವಾರ್, “ಮೃತದೇಹ ಸಿಕ್ಕಿಲ್ಲ ಎಂಬುದು ಅಪರಾಧಿಯನ್ನು ಪಾರು ಮಾಡಲು ನೆರವಾಗುವುದಿಲ್ಲ” ಎಂದು ಹೇಳಿದ್ದಾರೆ. ಪ್ರಕರಣವನ್ನು ನವಿ ಮುಂಬೈ ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸಿಲ್ಲವೆಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವರದಿ ಓದಿದ್ದೀರಾ?: ಸುಪ್ರೀಂ ಕೋರ್ಟ್‌ನಿಂದ ಅಣ್ವಸ್ತ್ರ ಪ್ರಯೋಗ: ಧನಕರ್ ಹೇಳಿಕೆ ಸಮಂಜಸವೇ?

“ಇಡೀ ವ್ಯವಸ್ಥೆ ಆರೋಪಿ ಅಭಯ್ ಅವರ ಪರಾವಾಗಿ ಕೆಲಸ ಮಾಡಿದೆ. ಅವರನ್ನು ರಕ್ಷಿಸಲು ಯತ್ನಿಸಿದೆ” ಎಂದು ಹೇಳಿರುವ ಕೋರ್ಟ್‌, ತನಿಖೆಯಲ್ಲಿ ದೋಷ ಎಸಗಿರುವ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್‌ ಇಲಾಖೆಗೆ ಸೂಚಿಸಿದೆ.

ಅಪರಾಧಿ ಅಭಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಅಲ್ಲದೆ, ಹತ್ಯೆಗೆ ಸಹಾಯ ಮಾಡಿದ ಅವರ ಕಾರು ಚಾಲಕ ಕುಂದನ್ ಭಂಡಾರಿ ಮತ್ತು ಸ್ನೆಹಿತ ಮಹೇಶ್‌ ಫಳ್ನೀಕರ್ ಎಂಬವರಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...