‘ಮಿರ್ಜಾಪುರ’ ವೆಬ್​ ಸೀರೀಸ್​ ನೋಡಿ ಗೆಳತಿಯ ಕತ್ತು ಸೀಳಿ ಕೊಂದ ವಿದ್ಯಾರ್ಥಿ!

Date:

‘ಮಿರ್ಜಾಪುರ’ ವೆಬ್​ ಸೀರೀಸ್​ ನೋಡಿ ವಿದ್ಯಾರ್ಥಿಯೋರ್ವ ತನ್ನ ಗೆಳತಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಈ ಸಂಬಂಧ ವಿದ್ಯಾರ್ಥಿ ಮತ್ತು ಆತನಿಗೆ ಸಹಾಯ ಮಾಡಿದ ಆತನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಮೋಹಿತ್ ಸೈನಿ ಮತ್ತು ಓಂಕಾರ್ ಶರ್ಮಾ ಎಂದು ಗುರುತಿಸಲಾಗಿದೆ. ಡಿಸೆಂಬರ್ 25ರಂದು ಅಂಜಲಿ ಎಂಬ ಯುವತಿಯ ಶವ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿತ್ತು. ಅಂದಿನಿಂದ ಇಬ್ಬರು ಕೂಡಾ ತಲೆಮರೆಸಿಕೊಂಡಿದ್ದರು.

ಇದನ್ನು ಓದಿದ್ದೀರಾ? ಬೆಂಗಳೂರು | ಕೂಲಿ ಕಾರ್ಮಿಕನ ಕತ್ತು ಸೀಳಿ ಬರ್ಬರ ಕೊಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಕಾಂ ಮೊದಲನೇ ವರ್ಷದ ವಿದ್ಯಾರ್ಥಿ ಹಾಗೂ ಫುಟ್ಬಾಲ್ ಆಟಗಾರರಾಗಿರುವ ಮೋಹಿತ್ ಕಳೆದ ಎರಡು ವರ್ಷಗಳಿಂದ ಅಂಜಲಿ ಜೊತೆ ಲಿವ್‌ಇನ್ ಸಂಬಂಧ ಹೊಂದಿದ್ದರು. ಆದರೆ ಅಂಜಲಿಗೆ ಬೇರೆ ಸಂಬಂಧವು ಇದೆ ಎಂದುಕೊಂಡ ಮೋಹಿತ್ ಆಕೆಯನ್ನು ಕೊಲ್ಲಬೇಕು ಎಂದು ನಿರ್ಧರಿಸಿದ ಎಂದು ವರದಿಯಾಗಿದೆ.

“ಮೋಹಿತ್ ತನ್ನ ಗೆಳತಿಯನ್ನು ಕೊಂದಿದ್ದಾನೆ. ಆಕೆ ಬೇರೊಬ್ಬನೊಂದಿಗೆ ವಿವಾಹವಾಗಿದ್ದಾಳೆ ಎಂದು ತಿಳಿದ ಬಳಿಕ ಕೊಲೆ ಮಾಡಿದ್ದಾನೆ. ಶವವನ್ನು ಅರಣ್ಯ ಪ್ರದೇಶದಲ್ಲಿ ಎಸೆದು ಮತ್ತು ಅಪರಾಧಕ್ಕೆ ಸಹಾಯ ಮಾಡಿದ ತನ್ನ ಸ್ನೇಹಿತನೊಂದಿಗೆ ಪರಾರಿಯಾಗಿದ್ದನು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹೆಣ್ಣು ಮಗು ಬೇಡವೆಂದು 9 ದಿನದ ಶಿಶುವಿನ ಗಂಟಲು ಸೀಳಿ ಕೊಂದ ತಾಯಿ

ಈ ಬಗ್ಗೆ ಮಾಹಿತಿ ಹಂಚಿಕೊಂಡ ಗ್ರಾಮಾಂತರ ಎಸ್‌ಪಿ ಕುನ್ವರ್ ಆಕಾಶ್ ಸಿಂಗ್, ಆರೋಪಿಯು ಪ್ರಸಿದ್ಧ ವೆಬ್ ಸೀರೀಸ್ ಮಿರ್ಜಾಪುರವನ್ನು ವೀಕ್ಷಿಸಿದ ನಂತರ ಕೊಲೆ ಮಾಡಿದ್ದಾನೆ. ತನ್ನ ಗೆಳತಿಯ ಕತ್ತು ಸೀಳಿದ್ದಾನೆ. ಅಂಜಲಿ ಇನ್ನೂ ತನ್ನ ಪತಿಯೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂದು ತಿಳಿದುಬಂದ ಬಳಿಕ ಈ ಕೃತ್ಯ ಎಸಗಿದ್ದಾನೆ” ಎಂದು ಮಾಹಿತಿ ನೀಡಿದ್ದಾರೆ.

ಮಿರ್ಜಾಪುರ ವೆಬ್ ಸೀರೀಸ್ ನೋಡಿದ ಬಳಿಕ ಅಂಜಲಿಯ ಕತ್ತು ಸೀಳಿ ಕೊಲ್ಲುವ ನಿರ್ಧಾರ ಮಾಡಿರುವುದಾಗಿ ಮೋಹಿತ್ ಪೊಲೀಸರಿಗೆ ತಿಳಿಸಿದ್ದಾನೆ. ಸದ್ಯ ಇಬ್ಬರೂ ಆರೋಪಿಗಳು ಜೈಲಿನಲ್ಲಿದ್ದಾರೆ. ಈ ಬಗ್ಗೆ ಅಧಿಕ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...