ಅಂತರ್ಜಾತಿ ವಿವಾಹ | ಶುದ್ಧೀಕರಣ ಹೆಸರಲ್ಲಿ ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು

Date:

ತಮ್ಮ ಮನೆಯ ಯುವತಿ ಅಂತರ್ಜಾತಿ ವಿವಾಹವಾಗಿದ್ದನ್ನು ವಿರೋಧಿಸಿ ಕುಟುಂಬವೊಂದರ 40 ಸದಸ್ಯರು ತಲೆ ಬೋಳಿಸಿಕೊಂಡು ಶುದ್ಧೀಕರಣ ಆಚರಣೆ ನಡೆಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ರಾಯಗಡ ಜಿಲ್ಲೆಯ ಬೈಗನಗುಡ ಗ್ರಾಮದಲ್ಲಿ ಬುಡಕಟ್ಟು ಸಮುದಾಯದ ಯುವತಿಯೊಬ್ಬರು ಮತ್ತೊಂದು ಜಾತಿಯ ಯುವಕನೊಂದಿಗೆ ವಿವಾಹವಾಗಿದ್ದಾರೆ. ಈ ವಿವಾಹವನ್ನು ವಿರೋಧಿಸಿದ್ದ ಯುವತಿಯ ಕುಟುಂಬಸ್ತರು ಶುದ್ಧೀಕರಣದ ಹೆಸರಿನಲ್ಲಿ ತಲೆ ಬೋಳಿಸಿಕೊಂಡು, ಪೂಜೆ ಸಲ್ಲಿಸಿದ್ದಾರೆ. ಸ್ಥಳೀಯ ದೇವರ ಮುಂದೆ ಮೇಕೆ, ಕೋಳಿ ಹಾಗೂ ಹಂದಿಗಳನ್ನು ಬಲಿ ಕೊಟ್ಟಿದ್ದಾರೆ.

ಬುಡಕಟ್ಟು ಸಮುದಾಯದ ಯುವತಿ ಹಲವು ವರ್ಷಗಳಿಂದ ದಲಿತ ಯುವಕನನ್ನು ಪ್ರೀತಿಸುತ್ತಿದ್ದರು. ಆದರೆ, ಯುವಕ ಬುಡಕಟ್ಟು ಸಮುದಾಯಕ್ಕೆ ಸೇರಿಲ್ಲ ಎಂಬ ಕಾರಣಕ್ಕೆ ಯುವತಿಯ ಕುಟುಂಬಸ್ಥರು ಅವರ ಪ್ರೀತಿಯನ್ನು ವಿರೋಧಿಸಿದ್ದರು. ಕುಟುಂಬದ ವಿರೋಧದ ನಡುವೆಯೂ ಪ್ರೀತಿಮಗಳು ಇತ್ತೀಚೆಗೆ ವಿವಾಹವಾಗಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಇಸ್ರೇಲ್-ಇರಾನ್ ಸಂಘರ್ಷ | ತನ್ನದೇ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದ ಇಸ್ರೇಲ್!

ತಮ್ಮ ಪದ್ದತಿಯಲ್ಲಿ ಅಂತರ್ಜಾತಿ ವಿವಾಹಕ್ಕೆ ಅವಕಾಶ ಇಲ್ಲ ಎಂಬ ಕಾರಣಕ್ಕೆ ಯುವತಿಯು ಕುಟುಂಬವು ಶುದ್ಧೀಕರಣದ ಆಚರಣೆ ನಡೆಸಿದೆ. ತಮ್ಮ ಪದ್ಧತಿಯ ಪ್ರಕಾರ, ಬುಡಕಟ್ಟು ಜನಾಂಗದ ಹೊರಗೆ ಮಹಿಳೆ ವಿವಾಹವಾದರೆ, ಇಡೀ ಕುಟುಂಬವು ಗ್ರಾಮ ದೇವತೆಯ ಕೋಪಕ್ಕೆ ಗುರಿಯಾಗುತ್ತದೆ. ಹೀಗಾಗಿ, ದೇವತೆಯನ್ನು ಶಾಂತಿಗೊಳಿಸಲು ಶುದ್ಧೀಕರಣ ಮತ್ತು ಬಲಿ ಕೊಟ್ಟಿರುವುದಾಗಿ ಕುಟುಂಬವು ಹೇಳಿಕೊಂಡಿದೆ.

ಈ ಆಚರಣೆಯನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿ, ಸಾಮಾಜಿಕ ಜಾಲತಾನದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಎಚ್ಚೆತ್ತುಕೊಂಡು ಜಿಲ್ಲಾಡಳಿತವು ಘಟನೆ ಬಗ್ಗೆ ತಿನಿಖೆ ನಡೆಸಲು ಕಾಶಿಪುರದ ಬ್ಲಾಕ್ ಅಭಿವೃದ್ಧಿ ಅಧಿಕಾರಿಗೆ (ಬಿಡಿಒ) ಸೂಚನೆ ನೀಡಿದೆ.

ಅಧಿಕಾರಿಗಳ ತಂಡವು ಗ್ರಾಮಕ್ಕೆ ಭೇಟಿ ನೀಡಿದ್ದು, ನವ ದಂಪತಿಗಳ ಕುಟುಂಬಗಳನ್ನು ಭೇಟಿ ಮಾಡಿದೆ. ತಮ್ಮ ಪದ್ದತಿಯ ಭಾಗವಾಗಿ ಪೂಜೆ-ಆಚರಣೆ ಮಾಡಿರುವುದಾಗಿ ಕುಟುಂಬವು ಹೇಳಿಕೊಂಡಿದೆ ಎಂದು ವದರಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...