ಐಪಿಎಲ್ | ‘ಈ ಸಲ ಕಪ್ ನಮ್ದೇ’ ಅಂತ ದಯವಿಟ್ಟು ಹೇಳ್ಬೇಡಿ; ಕೊಹ್ಲಿ ಹೀಗೆ ಹೇಳಿದ್ದೇಕೆ?

Date:

2025ರ ಐಪಿಎಲ್‌ ಟೂರ್ನಿಗೆ ಕ್ಷಣ ಗಣನೆ ಆರಂಭವಾಗಿದೆ. ಮಾರ್ಚ್‌ 22ರಿಂದ ಟೂರ್ನಿ ಆರಂಭವಾಗಲಿದೆ. ಈ ಬಾರಿ 18ನೇ ಆವೃತ್ತಿಯ ಪಂದ್ಯಾವಳಿ ನಡೆಯುತ್ತಿದ್ದು, ಕೊಹ್ಲಿ ಅವರ ಜರ್ಸಿ ನಂಬರ್ ಕೂಡ 18 ಆಗಿರುವ ಕಾರಣ, ಈ ಬಾರಿ ಆರ್‌ಸಿಬಿ ಟ್ರೋಫಿ ಗೆಲ್ಲುತ್ತದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಪ್ರತೀ ವರ್ಷದಂತೆ ಈಬಾರಿಯೂ ‘ಈ ಸಲ ಕಪ್ ನಮ್ದೇ’ ಘೋಷಣೆ ಮತ್ತೆ ಮುನ್ನೆಲೆಗೆ ಬಂದಿದೆ. ಆದರೆ, ಈ ಘೋಷಣೆ ವಿಚಾರದಲ್ಲಿ ವಿರಾಟ್‌ ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಘೋಷಣೆಯನ್ನು ಮತ್ತೆ-ಮತ್ತೆ ಹೇಳಬೇಡಿ ಎಂದು ಆರ್‌ಸಿಬಿ ಅಭಿಮಾನಿಗಳಿಗೆ ಪರೋಕ್ಷ ಸಂದೇಶ ಕಳಿಸಿದ್ದಾರೆ.

ಆರ್‌ಸಿಬಿ ತಂಡದಲ್ಲಿರುವ ದಕ್ಷಿಣ ಆಫ್ರಿಕಾದ ಸ್ಟಾರ್ ಕ್ರಿಕೆಟಿಗ ಎಬಿ ಡಿವಿಲಿಯರ್ಸ್‌ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಐಪಿಎಲ್ ಬಗ್ಗೆ ಮಾತನಾಡಿದ್ದರು. ‘ಈ ಸಲ ಕಪ್ ನಮ್ದೇ’ ಎಂದಿದ್ದರು. ಅವರಿಗೆ ಪರ್ಸನಲ್ ಮೆಸೇಜ್ ಕಳಿಸಿರುವ ಕೊಹ್ಲಿ, ‘ಪದೇ ಪದೇ ಈ ಸಲ ನಮ್ದೇ ಅಂತ ಹೇಳಬೇಡಿ. ಅದನ್ನು ಕೇಳಿ ಕೇಳಿ ಸಾಕಾಗಿದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಸ್ವತಃ ಎಬಿ ಡಿವಿಲಿಯರ್ಸ್‌ ಬಹಿರಂಗಪಡಿಸಿದ್ದಾರೆ.

ಏಳು ವರ್ಷಗಳ ಹಿಂದೆ, ನಡೆದ ಐಪಿಎಲ್ ಟೂರ್ನಿಯ ಸಮಯದಲ್ಲಿ ಆರ್‌ಸಿಬಿ ಪ್ರಕಾರ ಘೋಷಣೆಯಾಗಿ ‘ಈ ಸಲ ಕಪ್ ನಮ್ದೇ’ ಎಂಬ ಸಾಲು ಬಳಕೆಯಾಗಿತ್ತು. ಅಂದಿನಿಂದ ಪ್ರತಿ ಬಾರಿಯ ಟೂರ್ನಿ ಸಮಯದಲ್ಲೂ ಈ ಘೋಷಣೆ ಸದ್ದು ಮಾಡುತ್ತಲೇ ಇದೆ. ಆದರೆ, ಆರ್‌ಸಿಬಿ ಈವರೆಗೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. 2009, 2011 ಮತ್ತು 2016ರಲ್ಲಿ ಆರ್‌ಸಿಬಿ ಫೈನಲ್‌ವರೆಗೆ ತಲುಪಿದ್ದರೂ, ಫೈನಲ್‌ನಲ್ಲಿ ಸೋಲುಂಡು ಕಪ್ ಗೆಲ್ಲುವಲ್ಲಿ ವಿಫಲವಾಗಿದೆ. 2008ರಲ್ಲಿ ಐಪಿಎಲ್ ಆರಂಭವಾದಾಗಿನಿಂದ ಆರ್‌ಸಿಬಿ ಜೊತೆಗೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಕೂಡ ಈವರೆಗೆ ಕಪ್ ಗೆಲ್ಲದ ತಂಡಗಳಾಗಿ ಉಳಿದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಐಪಿಎಲ್ | ಆಟಗಾರರಿಗೆ ಹೊಸ ನಿಯಮ; ತೋಳಿಲ್ಲದ ಜೆರ್ಸಿ ಹಾಕಂಗಿಲ್ಲ, ಕುಟುಂಬ ಸದಸ್ಯರಿಗೆ ಅನುಮತಿ ಇಲ್ಲ

‘ಈ ಸಲ ಕಪ್ ನಮ್ದೇ’ ಬಗ್ಗೆ ಕೊಹ್ಲಿ ಅಸಮಾಧಾನದ ಬಗ್ಗೆ ಹೇಳಿಕೊಂಡಿರುವ ಎಬಿ ಡಿವಿಲಿಯರ್ಸ್‌ “ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಆ ಮಾತುಗಳನ್ನು ಇತ್ತೀಚೆಗೆ ಹೇಳಿದ್ದೆ. ಆಗ ಕೊಹ್ಲಿ ಅವರಿಂದ ನನಗೆ ನೇರ ಸಂದೇಶ ಬಂತು. ‘ದಯವಿಟ್ಟು ಈಗ ಆ ಘೋಷಣೆಯನ್ನು ಮತ್ತೆ ಹೇಳುವುದನ್ನು ನಿಲ್ಲಿಸಿ’ ಎಂದು ಸಂದೇಶ ಕಳಿಸಿದ್ದರು. ಆಗ ನನಗೆ ಮುಜುಗರವಾಯಿತು” ಎಂದು ಹೇಳಿದ್ದಾರೆ.

”ಪ್ರಯಾಣ, ವಿಭಿನ್ನ ತಂಡಗಳು, ವಿಭಿನ್ನ ತಂತ್ರಗಳು ಮತ್ತು ಗಾಯಗಳು ಟೂರ್ನಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಟೂರ್ನಿಯ ಉದ್ದಕ್ಕೂ ಹಲವು ವಿಷಯಗಳು ಬದಲಾಗುತ್ತಿರುತ್ತವೆ. ಆದರೆ, ಪಂದ್ಯಾವಳಿಯ ಕೊನೆಯವರೆಗೂ ಎನರ್ಜಿ ಇಟ್ಟುಕೊಳ್ಳಲು ಉತ್ತಮ ದಾರಿ ಕಂಡುಕೊಂಡರೆ, ತಂಡವು ಸಾಮಾನ್ಯವಾಗಿ ಮೇಲುಗೈ ಸಾಧಿಸುತ್ತದೆ. ಇದು 18ನೇ ಸೀಸನ್, ಕಪ್ ಗೆಲ್ಲುವ ಭರವಸೆ ಇದೆ. ಅದು ಸಾಧ್ಯವಾದರೆ, ವಿರಾಟ್ ಜೊತೆ ಆ ಟ್ರೋಫಿಯನ್ನು ಎತ್ತಲು ನಾನು ಜೊತೆಗಿರುತ್ತೇನೆ” ಎಂದು ಎಬಿ ಡಿವಿಲಿಯರ್ಸ್‌ ಹೇಳಿದ್ದಾರೆ.

ಮಾರ್ಚ್‌ 22ರಂದು ಕೋಲ್ಕತ್ತಾದಲ್ಲಿ ಐಪಿಎಲ್ 2025ರ ಉದ್ಘಾಟನಾ ಪಂದ್ಯ ನಡೆಯಲಿದೆ. ಪಂದ್ಯದಲ್ಲಿ ಕೆಕೆಆರ್ ಮತ್ತು ಆರ್‌ಸಿಬಿ ನಡುವೆ ಹಣಾಹಣಿ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...