‘2ನೇ ಮದುವೆ’ ಆಗಿದ್ದಕ್ಕೆ ಐಪಿಎಸ್ ಅಧಿಕಾರಿಗೆ ಹಿಂಬಡ್ತಿ

Date:

ಮೊದಲನೇ ಪತ್ನಿಗೆ ವಿಚ್ಛೇದನವನ್ನೂ ನೀಡದೆ, 2ನೇ ವಿವಾಹವಾಗಿದ್ದ ಐಪಿಎಸ್‌ ಅಧಿಕಾರಿಗೆ ಹಿಂಬಡ್ತಿ ನೀಡಲಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನ ಕೇಡರ್‌ ಐಪಿಎಸ್ ಅಧಿಕಾರಿ ಪಂಕಜ್ ಕುಮಾರ್ ಚೌಧರಿ ಅವರಿಗೆ ಹಿಂಬಡ್ತಿ ನೀಡಲಾಗಿದ್ದು, ಮೂರು ವರ್ಷಗಳ ಕಾಲ ಯಾವುದೇ ಬಡ್ತಿ (ಪ್ರಮೋಷನ್) ನೀಡದಂತೆ ನಿರ್ಬಂಧಿಸಲಾಗಿದೆ. ಅವರನ್ನು ಲೆವೆಲ್ 11 ಸೀನಿಯರ್ ವೇತನ ಶ್ರೇಣಿಯಿಂದ ಲೆವೆಲ್ 10 ಜೂನಿಯರ್ ವೇತನ ಶ್ರೇಣಿಗೆ ಹಿಂಬಡ್ತಿ ನೀಡಲಾಗಿದೆ. ಲೆವೆಲ್ 10 ಶ್ರೇಣಿಯು ಹೊಸದಾಗಿ ನೇಮಕಗೊಂಡ ಐಪಿಎಸ್ ಅಧಿಕಾರಿಗಳನ್ನು ನಿಯೋಜಿಸುವ ಶ್ರೇಣಿಯಾಗಿದೆ.

ರಾಜಸ್ಥಾನದಲ್ಲಿ ಐಪಿಎಸ್ ಅಧಿಕಾರಿಗೆ ಹಿಂಬಡ್ತಿ ನೀಡಿರುವುದು ಇದೇ ಮೊದಲು ಎಂದು ವರದಿಯಾಗಿದೆ. ಚೌಧರಿ ಅವರ ಎರಡನೇ ಮದುವೆಯ ಬಗ್ಗೆ ತಿಳಿದ ನಂತರ ಉನ್ನತ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ ಎಂದು ವರದಿಗಳು ಹೇಳುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೌದರಿ ಅವರು ಕೆಲವು ವರ್ಷಗಳ ಹಿಂದೆ ತಮ್ಮ ಮೊದಲ ಪತ್ನಿಗೆ ವಿಚ್ಛೇದನ ನೀಡದೆ, ಇನ್ನೊಬ್ಬ ಮಹಿಳೆಯನ್ನು ವಿವಾಹವಾಗಿದ್ದರು. ಈ ಕೌಟುಂಬಿಕ ಪ್ರಕರಣವು ಸುಮಾರು ನಾಲ್ಕು ವರ್ಷಗಳ ಹಿಂದೆ ಕೋರ್ಟ್‌ ಮೆಟ್ಟಿಲೇರಿತ್ತು. ಪ್ರಕರಣದಲ್ಲಿ ರಾಜಸ್ಥಾನ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ ಚೌದರಿ ಪರವಾಗಿಯೇ ತೀರ್ಪು ನೀಡಿದ್ದವು ಎಂದು ವರದಿಯಾಗಿದೆ.

ಆದಾಗ್ಯೂ, ಅಧಿಕಾರಿಗಳು ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಚೌಧರಿ 2009ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಜೈಪುರದಲ್ಲಿ ಸಮುದಾಯ ಪೊಲೀಸ್ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರಿಗೆ ಹಿಂಬಡ್ತಿ ನೀಡಲಾಗಿದ್ದು, ಅವರ ಹುದ್ದೆಯನ್ನು ಪೊಲೀಸ್ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಶ್ರೇಣಿ 10) ಎಂದು ಬದಲಾಯಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...