ಕೋಳಿ ವಿಚಾರದಲ್ಲಿ ಹೊಸ ಪ್ರಶ್ನೆ ಉದ್ಭವ : ‘ಕೋಳಿ ಪ್ರಾಣಿಯೋ-ಪಕ್ಷಿಯೋ’

Date:

  • ಗುಜರಾತ್ ಹೈಕೋರ್ಟ್‌ನಲ್ಲಿ ಪಿಐಎಲ್
  • ಕೋಳಿ ಅಂಗಡಿ ಮುಚ್ಚುವಂತೆ ಆದೇಶ

ಚಿಕ್ಕ ಮಕ್ಕಳಿಂದಿಡಿದು ದೊಡ್ಡವರವರೆಗೂ ಎಲ್ಲರೂ ಒಂದಲ್ಲೊಂದು ಸಂದರ್ಭದಲ್ಲಿ ‘ಕೋಳಿ ಮೊದಲೋ-ಮೊಟ್ಟೆ ಮೊದಲೋ’ ಎಂಬ ಪ್ರಶ್ನೆ ಕೇಳಿರುತ್ತಾರೆ. ಈಗ ಆ ಪ್ರಶ್ನೆ ಹಳತಾಗುತ್ತಿದೆ. ಆ ಪ್ರಶ್ನೆಯನ್ನು ಕೇಳುವವರ ಸಂಖ್ಯೆಯೂ ಕಡಿಮೆಯಾಗಿದೆ. ಬದಲಾಗಿ, ಹೊಸ ಪ್ರಶ್ನೆಯೊಂದು ಮುನ್ನೆಲೆಗೆ ಬಂದಿದೆ. ‘ಕೋಳಿ ಪ್ರಾಣಿಯೋ ಅಥವಾ ಪಕ್ಷಿಯೋ’ ಎಂಬುದು ಹೊಸ ಗೊಂದಲವನ್ನು ಹುಟ್ಟುಹಾಕಿದೆ.

ಮಾಂಸದ ಅಂಗಡಿಗಳಲ್ಲಿ ಕೋಳಿಯನ್ನು ಕೊಲ್ಲಬಾರದು, ಕಸಾಯಿಖಾನೆಯಲ್ಲಿ ಮಾತ್ರವೇ ಕೊಲ್ಲಬೇಕೆಂದು ಗುಜರಾತ್‌ ಹೈಕೋರ್ಟ್‌ನಲ್ಲಿ ಅಲ್ಲಿನ ಪ್ರಾಣಿ ದಯಾಸಂಘ ಮತ್ತು ಅಹಿಂಸಾ ಮಹಾಸಂಘ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದೆ. ಕಸಾಯಿಖಾನೆಗಳ ಸರಿಯಾದ ಕಾರ್ಯನಿರ್ವಹಣೆಗೆ ವಿವಿಧ ಕಾನೂನುಗಳು ಮತ್ತು ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಅನುಷ್ಠಾನಕ್ಕೆ ತರಬೇಕೆಂದು ಅರ್ಜಿದಾರರು ವಾದಿಸಿದ್ದಾರೆ. ಬುಧವಾರ ಆ ಅರ್ಜಿ ವಿಚಾರಣೆ ನಡೆಸಿದ್ದು, ಈ ವೇಳೆ ‘ಕೋಳಿ ಪ್ರಾಣಿಯಾ-ಪಕ್ಷಿಯಾ’ ಎಂಬ ಪ್ರಶ್ನೆ ಉದ್ಭವಿಸಿತ್ತು. ಕೋರ್ಟ್‌ ಅಂಗಳದಲ್ಲಿ ಸ್ತಬ್ಧತೆ ಉಂಟುಮಾಡಿತ್ತು.

ಪ್ರಾಣಿ ದಯಾ ಸಂಘದ ಅರ್ಜಿಯ ವಿರುದ್ಧ ಕೋಳಿ ವ್ಯಾಪಾರಿಗಳು ಮತ್ತು ಕೋಳಿ ಅಂಗಡಿ ಮಾಲೀಕರು ‘ಪ್ರತಿ ಅರ್ಜಿ’ ಸಲ್ಲಿಸಿದ್ದಾರೆ. ತಮ್ಮ ಅಂಗಡಿಗಳನ್ನು ತೆರೆಯುವಂತೆ ಕೋರ್ಟ್‌ ಮುಂದೆ ಮನವಿ ಮಾಡಿದ್ದಾರೆ. ಆದರೆ, ಕೋಳಿ ಮಾಂಸದ ಅಂಗಡಿಗಳಲ್ಲಿ ನೈರ್ಮಲ್ಯ ಮಾನದಂಡಗಳನ್ನು ಅನುಸರಿಸದ ಕಾರಣ ಮಾಂಸ ಮತ್ತು ಕೋಳಿ ಅಂಗಡಿಗಳನ್ನು ಮುಚ್ಚುವಂತೆ ಹೈಕೋರ್ಟ್ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೂರತ್ ಮುನ್ಸಿಪಲ್ ಕಾರ್ಪೊರೇಷನ್ ಸೇರಿದಂತೆ ಹಲವಾರು ಸ್ಥಳೀಯ ಸಂಸ್ಥೆಗಳು, “ಕೋಳಿಗಳು ಮತ್ತು ಪ್ರಾಣಿಗಳನ್ನು ಕಸಾಯಿಖಾನೆಗಳಲ್ಲಿ ಕೊಲ್ಲಬೇಕು. ಅಂಗಡಿಗಳಲ್ಲಿ ಕೊಲ್ಲಬಾರದು” ಎಂದು ಹೇಳಿಕೊಂಡು ಹಲವಾರು ಅಂಗಡಿಗಳನ್ನು ಮುಚ್ಚಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...