“ಸರ್ಕಾರ್ ತೋ ಗಯೀ ಹುಯೀ ಹೇ”: ಕಾಶ್ಮೀರ ದಾಳಿಯಲ್ಲಿ ತಂದೆಯನ್ನು ಕಳೆದುಕೊಂಡ ಬಾಲಕನ ಪ್ರಶ್ನೆ

Date:

ಪಹಲ್ಗಾಮ್ ಉಗ್ರಗಾಮಿಗಳ ದಾಳಿಯ ಹೃದಯ ವಿದ್ರಾವಕ ಘಟನೆ ದೇಶಾದ್ಯಂತ ಹಲವರ ಆತ್ಮಪ್ರಜ್ಞೆಯನ್ನು ಕಲಕಿದರೆ, ಘಟನೆಯಲ್ಲಿ ತಂದೆಯನ್ನು ಕಳೆದುಕೊಂಡ ಸೂರತ್ ನ ಪುಟ್ಟ ಬಾಲಕನೊಬ್ಬ ಪ್ರದರ್ಶಿಸಿರುವ ಧೈರ್ಯ ದೇಶದ ಗಮನ ಸೆಳೆದಿದೆ.

ಸೂರತ್ನ ವರ್ಚಾ ಪ್ರದೇಶದ ಶೈಲೇಶ್ ಕಲ್ತಿಯಾ ಅವರ ಪುತ್ರ ನಕ್ಷ್ ಕಲ್ತಿಯಾ ತನ್ನ ಆಘಾತವನ್ನು ಹಂಚಿಕೊಂಡಿರುವುದು ಮಾತ್ರವಲ್ಲದೇ, ಮುಖ್ಯವಾಹಿನಿಯ ಬಹುತೇಕ ಮಾಧ್ಯಮಗಳು ಕಡೆಗಣಿಸಿರುವ ಗಂಭೀರ ಭದ್ರತಾ ಲೋಪವನ್ನು ಪ್ರಶ್ನಿಸಿದ್ದಾನೆ.
ಎಎನ್ಐ ಪ್ರಸಾರ ಮಾಡಿರುವ ವಿಡಿಯೊ ತುಣುಕು ಇದೀಗ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಮಿನಿ ಸ್ವಿಡ್ಜರ್ಲೆಂಡ್ ಎನಿಸಿದ ಜಮ್ಮು-ಕಾಶ್ಮೀರದ ಪಹಲ್ಗಾಮ್‌ ಘಟನೆಯ ಭಯಾನಕ ಅನುಭವವನ್ನು ಈ ವಿಡಿಯೊದಲ್ಲಿ ಮೆಲುಕು ಹಾಕಿದ್ದಾನೆ.

ಘಟನೆಯಲ್ಲಿ ಈ ಪುಟ್ಟ ಬಾಲಕ ತಂದೆಯನ್ನು ಕಳೆದುಕೊಂಡಿದ್ದ. ಆತನ ಮಾತುಗಳಲ್ಲಿ ಕೇವಲ ನೋವಿನ ಛಾಯೆ ಮಾತ್ರ ಇರುವುದಲ್ಲ; ಬದಲಾಗಿ ಮಾತಿನ ಸ್ಪಷ್ಟತೆ ಮತ್ತು ಧೈರ್ಯವನ್ನು ಜಾಲತಾಣಗಳಲ್ಲಿ ವ್ಯಾಪಕವಾಗಿ ಶ್ಲಾಘಿಸಲಾಗುತ್ತಿದ್ದು,
“ಚುನಾಯಿತ ಪ್ರತಿನಿಧಿಗಳಿಗಿಂತ ಹೆಚ್ಚು ಪ್ರಜ್ಞಾಪೂರ್ವಕ ಮತ್ತು ಸದ್ದು ಕಳೆದುಕೊಂಡಿರುವ ಮಾಧ್ಯಮಗಳಿಗಿಂತ ಗಟ್ಟಿಧ್ವನಿ” ಎಂದು ನೆಟ್ಟಿಗರು ಬಣ್ಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾಷಾ ವೈಷಮ್ಯ ಬಿತ್ತಿದ ಭಂಡರು, ಬಿತ್ತರಿಸಿದ ಬುದ್ಧಿಗೇಡಿಗಳು

ಭದ್ರತಾ ವೈಫಲ್ಯದ ಹಿನ್ನೆಲೆಯಲ್ಲಿ ಸರ್ಕಾರದ ಬಗ್ಗೆ ಏನಾದರೂ ಹೇಳುವುದು ಇದೆಯೇ ಎಂದು ವರದಿಗಾರರೊಬ್ಬರು ಪ್ರಶ್ನಿಸಿದಾಗ ತನ್ನ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಲಾಗದ ನಕ್ಷ್, “ಸರ್ಕಾರ್ ತೋ ಗಯಿ ಹುಯಿ ಹೈ, ಮತ್ಲಬ್ ಇತ್ನಾ ಬಡಾ ಆತಂಕ್ ವಾದಿ ಹಮ್ಲಾ ಹುವಾ, ಉನ್ಹೇ ಕುಚ್ ಪತಾ ಹಿ ನಹಿ ಹೇ” ಎಂದು ಪ್ರಶ್ನಿಸಿದ್ದಾನೆ. ಪಕ್ಕದಲ್ಲಿದ್ದ ಸೇನಾ ನೆಲೆ ಒಂದು ಗಂಟೆ ಕಳೆದರೂ ಏಕೆ ನೆರವಿಗೆ ಬಂದಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾನೆ. ಈ ಪ್ರದೇಶಕ್ಕೆ ಹೆಚ್ಚಿನ ಭದ್ರತೆ ಒದಗಿಸುವ ಅಗತ್ಯವನ್ನು ಬಾಲಕ ಪ್ರತಿಪಾದಿಸಿದ್ದಾನೆ.

ಬಾಲಕನ ಈ ಮಾತುಗಳು ವೈರಲ್ ಆಗಿದ್ದು, ಈತನ ಪ್ರೌಢಿಮೆ ಮತ್ತು ವಯಸ್ಸಿಗೆ ಮೀರಿದ ತಿಳಿವಳಿಕೆ ಬಗ್ಗೆ ಜಾಲತಾಣಗಳಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ರಾಜಕೀಯ ಮುಖಂಡರು ಮತ್ತು ಮಾಧ್ಯಮಗಳ ಮೌನ ಹಾಗೂ ಬಾಲಕನ ವಿವೇಕಯುತ ಹಾಗೂ ನೇರ ನುಡಿಯನ್ನು ಹಲವರು ಹೋಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...