ಐಸಿಸ್ ಮುಖ್ಯಸ್ಥ ಸಕ್ವಿಬ್ ನಾಚನ್ ನಿಧನ

Date:

ಇಸ್ಲಾಮಿಕ್ ಸ್ಟೇಟ್(ಐಸಿಸ್)ನ ಭಾರತದ ಕಾರ್ಯಾಚರಣೆಗಳ ಮುಖ್ಯಸ್ಥ ಮತ್ತು ನಿಷೇಧಿತ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾದ(ಸಿಮಿ) ಮಾಜಿ ಪದಾಧಿಕಾರಿ ಸಕ್ವಿಬ್ ನಾಚನ್ ಶನಿವಾರ ಮಧ್ಯಾಹ್ನ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ. ಆತನಿಗೆ 57 ವರ್ಷ ವಯಸ್ಸಾಗಿತ್ತು.

ದೆಹಲಿ ಮತ್ತು ಮಹಾರಾಷ್ಟ್ರದ ಪಡ್ಘಾ ಪ್ರದೇಶವನ್ನು ವ್ಯಾಪಿಸಿರುವ ಐಸಿಸ್ ಭಯೋತ್ಪಾದಕ ಘಟಕಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ನಾಚನ್ ಬಂಧನ ಮಾಡಿತ್ತು. ನಾಚನ್ 2023ರಿಂದ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು ಆರೋಗ್ಯ ಹದಗೆಟ್ಟ ನಂತರ ಮಂಗಳವಾರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನು ಓದಿದ್ದೀರಾ? ಅಫ್ಘಾನಿಸ್ತಾನ | ಗುಂಡಿನ ದಾಳಿಗೆ 15 ನಾಗರಿಕರು ಬಲಿ, ಹೊಣೆ ಹೊತ್ತ ಐಸಿಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆಗೆ ದಾಖಲಾದ ಸ್ವಲ್ಪ ಸಮಯದಲ್ಲೇ ನಾಚನ್‌ಗೆ ಮೆದುಳಿನ ರಕ್ತಸ್ರಾವ ಇರುವುದನ್ನು ವೈದ್ಯರು ದೃಢಪಡಿಸಿದ್ದರು. ಆತ ನಾಲ್ಕು ದಿನಗಳ ಕಾಲ ವೈದ್ಯಕೀಯ ವೀಕ್ಷಣೆಯಲ್ಲಿದ್ದು, ಶನಿವಾರ ಬೆಳಿಗ್ಗೆ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಮಧ್ಯಾಹ್ನ 12:10ಕ್ಕೆ ನಿಧನಗೊಂಡಿದ್ದಾನೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಸಕ್ವಿಬ್ ಅಬ್ದುಲ್ ಹಮೀದ್ ನಾಚನ್ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪಡ್ಘಾ ಪಟ್ಟಣದವನು. 1990ರ ದಶಕದ ಅಂತ್ಯ ಮತ್ತು 2000ರ ದಶಕದ ಆರಂಭದಲ್ಲಿ ನಿಷೇಧಿತ SIMIಯಲ್ಲಿ ನಾಯಕತ್ವ ವಹಿಸಿಕೊಂಡಿದ್ದ. ಮುಂಬೈ ಸೆಂಟ್ರಲ್, ವಿಲೇ ಪಾರ್ಲೆ ಮತ್ತು ಮುಲುಂಡ್ ನಿಲ್ದಾಣದಲ್ಲಿ ನಡೆದ ಸ್ಫೋಟಗಳು ಸೇರಿದಂತೆ 2002 ಮತ್ತು 2003ರಲ್ಲಿ ಮುಂಬೈನಾದ್ಯಂತ ನಡೆದ ಸರಣಿ ಬಾಂಬ್ ಸ್ಫೋಟಗಳ ತನಿಖೆಯ ಸಮಯದಲ್ಲಿ ನಾಚನ್ ಹೆಸರು ಬೆಳಕಿಗೆ ಬಂದಿತ್ತು. ಈ ದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದು, ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

AK-56 ರೈಫಲ್ ಸೇರಿದಂತೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಆರೋಪದಡಿಯಲ್ಲಿ ಆತನನ್ನು ಅಂತಿಮವಾಗಿ ದೋಷಿ ಎಂದು ಘೋಷಿಸಲಾಗಿತ್ತು. ಆತನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿಲಾಗಿತ್ತು. 2017ರಲ್ಲಿ ಜೈಲು ಶಿಕ್ಷೆ ಪೂರ್ಣಗೊಳ್ಳುವುದಕ್ಕೂ ಐದು ತಿಂಗಳಿಗೂ ಮುನ್ನ ಉತ್ತಮ ನಡವಳಿಕೆ ಆಧಾರದಲ್ಲಿ ಬಿಡುಗಡೆಗೊಂಡಿದ್ದ.

2023ರಲ್ಲಿ ದೇಶದಲ್ಲಿ ಐಸಿಸ್ ಭಯೋತ್ಪಾದಕ ಸಂಪರ್ಕದ ಆರೋಪದಲ್ಲಿ ಎನ್‌ಐಎ ನಾಚನ್ ಬಂಧನ ಮಾಡಿತ್ತು. ದೆಹಲಿ-ಪಡ್ಘಾ ಐಸಿಸ್ ಭಯೋತ್ಪಾದನಾ ಪ್ರಕರಣದಲ್ಲಿ ಆತನನ್ನು ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...